AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ.

ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Nov 15, 2023 | 8:53 PM

Share

ಬೆಂಗಳೂರು, ನವೆಂಬರ್ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಟ್ರಾಫಿಕ್ ಜಾಮ್ (Bengaluru Traffic Jam) ಕಿರಿಕಿರಿ. ಮೆಟ್ರೋ ಸಿಟಿಯಲ್ಲಿ ವಾಹನ ಸವಾರರು ನಿತ್ಯ ಟ್ರಾಫಿಕ್​ನಲ್ಲಿ ಹೆಣಗಾಡ್ತಾರೆ. ಇದೀಗ ಟ್ರಾಫಿಕ್​ಗೆ ಕಾರಣ ಏನು ಎಂಬುದನ್ನು ಟ್ರಾಫಿಕ್ ಪೊಲೀಸರೇ (Bengaluru Traffic Police) ಬಿಚ್ಚಿಟ್ಟಿದ್ದಾರೆ. ಟ್ರಾಫಿಕ್ ಜಾಮ್ ಸಂಬಂಧಿಸಿ ಅಚ್ಚರಿಗೊಳ್ಳುವ ಮಾಹಿತಿಯೊಂದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ. ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರವನ್ನ ಬಹಿರಂಗಪಡಿಸಿದೆ.

ಬಿಎಂಟಿಸಿ ಬಸ್​​ಗಳ ಮೂಲಕ ದಿನನಿತ್ಯ ಲಕ್ಷಾಂತರ ಮಂದಿ ನಗರದ ವಿವಿಧ ಕಡೆಗೆ ಸಂಚಾರ ಮಾಡ್ತಾರೆ. ಆದ್ರೆ ಮಾರ್ಗ ಮಧ್ಯೆನೇ ಬಸ್​​ಗಳು ನಿತ್ರಾಣವಾಗ್ತಿದ್ದು, ನಡು ರಸ್ತೆಯಲ್ಲಿ ಕೆಟ್ಟು ಹೋಗುವ ಪರಿಣಾಮ ದೊಡ್ಡ ಮಟ್ಟದ ಟ್ರಾಫಿಕ್ ಜಾಮ್ ಉಂಟಾಗ್ತಿದೆ. ದಿನನಿತ್ಯ ನಾಲ್ಕೈದು ಬಸ್​ಗಳು ಈ ರೀತಿ ನಡು ರಸ್ತೆಯಲ್ಲಿ ಕೆಟ್ಟೋಗ್ತಿದ್ದು, ಅವುಗಳಿಂದ ಸುಗಮ ಸಂಚಾರಕ್ಕೆ ತೊಂದ್ರೆಯಾಗ್ತಿದೆ. ಈ ವರ್ಷ ನಡು ರಸ್ತೆಯಲ್ಲಿಯೇ ಕೆಟ್ಟು ಹೋದ ಬಸ್​​ಗಳ ಪೈಕಿ ಬಿಎಂಟಿಸಿ ಮೊದಲ ಸ್ಥಾನದಲ್ಲಿದ್ದು, ಬರೋಬ್ಬರಿ 1,478 ಬಿಎಂಟಿಸಿ ಬಸ್​​ಗಳು ಕೆಟ್ಟೋಗಿವೆ. ಹೊಸ ಬಸ್​​ಗಳನ್ನು ಖರೀದಿ ಮಾಡುವುದನ್ನು ಬಿಎಂಟಿಸಿ ನಿಲ್ಲಿಸಿದ್ದು, ಇದರಿಂದ ಈ ಸಮಸ್ಯೆ ಆಗ್ತಿದೆ. ಕೂಡಲೇ ಹೊಸ ಬಸ್​​​ಗಳನ್ನು ಖರೀದಿ ಮಾಡಬೇಕು ಎನ್ನಲಾಗುತ್ತಿದೆ.

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ. ಈ ಬಗ್ಗೆ ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಅವರನ್ನು ಪ್ರಶ್ನಿಸಿದಾಗ, 921 ಹೊಸ ಬಸ್​​ಗಳನ್ನು ಖರೀದಿ ಮಾಡ್ತಿದ್ದೀವಿ ಆ ಬಸ್​​ಗಳು ಬಂದ ಮೇಲೆ ಹಳೆಯ ಬಸ್​ಗಳ ಬದಲಿಗೆ ಹೊಸ ಬಸ್​​ಗಳನ್ನು ರೋಡಿಗಿಳಿಸ್ತಿವಿ ಎಂದಿದ್ದಾರೆ.

ಬಿಎಂಟಿಸಿ ಜೊತೆಗೆ ಕೆಎಸ್​ಆರ್​ಟಿಸಿ ಬಸ್​​​ಗಳು ಕೂಡ ನಡುರಸ್ತೆಯಲ್ಲಿಯೇ ಸಂಚಾರ ನಿಲ್ಲಿಸೋದ್ರಿಂದ, ಇತರರಿಗೂ ತೊಂದ್ರೆಯಾಗ್ತಿದೆ. ಸಾರಿಗೆ ಇಲಾಖೆ ಈ ಬಗ್ಗೆ ಗಮನ ಹರಿಸಿ, ಇಂತಹ ಬಸ್​​​ಗಳನ್ನ ಸರಿಪಡಿಸುವ ಕೆಲಸ ಮಾಡ್ಲಿ ಎಂದು ಬೆಂಗಳೂರು ಜನರು ಕೂಡ ಮನವಿ ಮಾಡ್ತಿದ್ದಾರೆ.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರೂಪಾಯಿ ದಂಡ ವಸೂಲಿ!

ಈ ಬಾರಿಯ ದೀಪಾವಳಿಯ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ಪೀಕಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಒ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ಪೀಕುತ್ತಿದ್ದ ಖಾಸಗಿ ಬಸ್ ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು, ಸುಮಾರು ಎರಡು ಸಾವಿರ ಬಸ್​ಗಳನ್ನು ತಪಾಸಣೆ ಮಾಡಿ 1460 ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಬಳ: 70 ಎಕರೆ ಜಾಗದಲ್ಲಿ ಕಂಬಳಕ್ಕೆ ತಯಾರಿ, ಸ್ಥಳಕ್ಕೆ ಯುಟಿ ಖಾದರ್​ ಭೇಟಿ

ಇನ್ನು ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 2 ಕೋಟಿ 14 ಲಕ್ಷ ರೂಪಾಯಿ ಸಂದಾಯವಾಗಿದೆ. ಅನಧಿಕೃತವಾಗಿ ಪಟಾಕಿ ಸಾಗಿಸುತ್ತಿದ್ದ 21 ಬಸ್ ಸೇರಿದಂತೆ ಒಟ್ಟು 36 ಖಾಸಗಿ ಬಸ್​​ಗಳನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಮಾತ್ರ ಅಲ್ಲ ಕೆಎಸ್ಆರ್​ಟಿಸಿ ಬಸ್​ನವರು ಕೂಡ ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ. ಅತ್ತಿಬೆಲೆಯಿಂದ ಬರುವ ಬಿಎಂಟಿಸಿ ಬಸ್​ಗಳಲ್ಲಿ ಸಾಕಷ್ಟು ಪಟಾಕಿ ಸಪ್ಲೈ ಆಗಿದೆ. ಆದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಮೇಲೆ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್