ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

| Updated By: ಗಣಪತಿ ಶರ್ಮ

Updated on: Nov 15, 2023 | 8:53 PM

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ.

ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ನವೆಂಬರ್ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಟ್ರಾಫಿಕ್ ಜಾಮ್ (Bengaluru Traffic Jam) ಕಿರಿಕಿರಿ. ಮೆಟ್ರೋ ಸಿಟಿಯಲ್ಲಿ ವಾಹನ ಸವಾರರು ನಿತ್ಯ ಟ್ರಾಫಿಕ್​ನಲ್ಲಿ ಹೆಣಗಾಡ್ತಾರೆ. ಇದೀಗ ಟ್ರಾಫಿಕ್​ಗೆ ಕಾರಣ ಏನು ಎಂಬುದನ್ನು ಟ್ರಾಫಿಕ್ ಪೊಲೀಸರೇ (Bengaluru Traffic Police) ಬಿಚ್ಚಿಟ್ಟಿದ್ದಾರೆ. ಟ್ರಾಫಿಕ್ ಜಾಮ್ ಸಂಬಂಧಿಸಿ ಅಚ್ಚರಿಗೊಳ್ಳುವ ಮಾಹಿತಿಯೊಂದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ. ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರವನ್ನ ಬಹಿರಂಗಪಡಿಸಿದೆ.

ಬಿಎಂಟಿಸಿ ಬಸ್​​ಗಳ ಮೂಲಕ ದಿನನಿತ್ಯ ಲಕ್ಷಾಂತರ ಮಂದಿ ನಗರದ ವಿವಿಧ ಕಡೆಗೆ ಸಂಚಾರ ಮಾಡ್ತಾರೆ. ಆದ್ರೆ ಮಾರ್ಗ ಮಧ್ಯೆನೇ ಬಸ್​​ಗಳು ನಿತ್ರಾಣವಾಗ್ತಿದ್ದು, ನಡು ರಸ್ತೆಯಲ್ಲಿ ಕೆಟ್ಟು ಹೋಗುವ ಪರಿಣಾಮ ದೊಡ್ಡ ಮಟ್ಟದ ಟ್ರಾಫಿಕ್ ಜಾಮ್ ಉಂಟಾಗ್ತಿದೆ. ದಿನನಿತ್ಯ ನಾಲ್ಕೈದು ಬಸ್​ಗಳು ಈ ರೀತಿ ನಡು ರಸ್ತೆಯಲ್ಲಿ ಕೆಟ್ಟೋಗ್ತಿದ್ದು, ಅವುಗಳಿಂದ ಸುಗಮ ಸಂಚಾರಕ್ಕೆ ತೊಂದ್ರೆಯಾಗ್ತಿದೆ. ಈ ವರ್ಷ ನಡು ರಸ್ತೆಯಲ್ಲಿಯೇ ಕೆಟ್ಟು ಹೋದ ಬಸ್​​ಗಳ ಪೈಕಿ ಬಿಎಂಟಿಸಿ ಮೊದಲ ಸ್ಥಾನದಲ್ಲಿದ್ದು, ಬರೋಬ್ಬರಿ 1,478 ಬಿಎಂಟಿಸಿ ಬಸ್​​ಗಳು ಕೆಟ್ಟೋಗಿವೆ. ಹೊಸ ಬಸ್​​ಗಳನ್ನು ಖರೀದಿ ಮಾಡುವುದನ್ನು ಬಿಎಂಟಿಸಿ ನಿಲ್ಲಿಸಿದ್ದು, ಇದರಿಂದ ಈ ಸಮಸ್ಯೆ ಆಗ್ತಿದೆ. ಕೂಡಲೇ ಹೊಸ ಬಸ್​​​ಗಳನ್ನು ಖರೀದಿ ಮಾಡಬೇಕು ಎನ್ನಲಾಗುತ್ತಿದೆ.

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿದೆ. ಈ ಬಗ್ಗೆ ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಅವರನ್ನು ಪ್ರಶ್ನಿಸಿದಾಗ, 921 ಹೊಸ ಬಸ್​​ಗಳನ್ನು ಖರೀದಿ ಮಾಡ್ತಿದ್ದೀವಿ ಆ ಬಸ್​​ಗಳು ಬಂದ ಮೇಲೆ ಹಳೆಯ ಬಸ್​ಗಳ ಬದಲಿಗೆ ಹೊಸ ಬಸ್​​ಗಳನ್ನು ರೋಡಿಗಿಳಿಸ್ತಿವಿ ಎಂದಿದ್ದಾರೆ.

ಬಿಎಂಟಿಸಿ ಜೊತೆಗೆ ಕೆಎಸ್​ಆರ್​ಟಿಸಿ ಬಸ್​​​ಗಳು ಕೂಡ ನಡುರಸ್ತೆಯಲ್ಲಿಯೇ ಸಂಚಾರ ನಿಲ್ಲಿಸೋದ್ರಿಂದ, ಇತರರಿಗೂ ತೊಂದ್ರೆಯಾಗ್ತಿದೆ. ಸಾರಿಗೆ ಇಲಾಖೆ ಈ ಬಗ್ಗೆ ಗಮನ ಹರಿಸಿ, ಇಂತಹ ಬಸ್​​​ಗಳನ್ನ ಸರಿಪಡಿಸುವ ಕೆಲಸ ಮಾಡ್ಲಿ ಎಂದು ಬೆಂಗಳೂರು ಜನರು ಕೂಡ ಮನವಿ ಮಾಡ್ತಿದ್ದಾರೆ.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರೂಪಾಯಿ ದಂಡ ವಸೂಲಿ!

ಈ ಬಾರಿಯ ದೀಪಾವಳಿಯ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ಪೀಕಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಒ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ಪೀಕುತ್ತಿದ್ದ ಖಾಸಗಿ ಬಸ್ ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು, ಸುಮಾರು ಎರಡು ಸಾವಿರ ಬಸ್​ಗಳನ್ನು ತಪಾಸಣೆ ಮಾಡಿ 1460 ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಬಳ: 70 ಎಕರೆ ಜಾಗದಲ್ಲಿ ಕಂಬಳಕ್ಕೆ ತಯಾರಿ, ಸ್ಥಳಕ್ಕೆ ಯುಟಿ ಖಾದರ್​ ಭೇಟಿ

ಇನ್ನು ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 2 ಕೋಟಿ 14 ಲಕ್ಷ ರೂಪಾಯಿ ಸಂದಾಯವಾಗಿದೆ. ಅನಧಿಕೃತವಾಗಿ ಪಟಾಕಿ ಸಾಗಿಸುತ್ತಿದ್ದ 21 ಬಸ್ ಸೇರಿದಂತೆ ಒಟ್ಟು 36 ಖಾಸಗಿ ಬಸ್​​ಗಳನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಮಾತ್ರ ಅಲ್ಲ ಕೆಎಸ್ಆರ್​ಟಿಸಿ ಬಸ್​ನವರು ಕೂಡ ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ. ಅತ್ತಿಬೆಲೆಯಿಂದ ಬರುವ ಬಿಎಂಟಿಸಿ ಬಸ್​ಗಳಲ್ಲಿ ಸಾಕಷ್ಟು ಪಟಾಕಿ ಸಪ್ಲೈ ಆಗಿದೆ. ಆದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಮೇಲೆ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ