AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ

ಬೆಂಗಳೂರಿನ ಹೊಸೂರು-ಮಡಿವಾಳ ರಸ್ತೆಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೊಸ ಮಾರ್ಗ ಬದಲಾವಣೆಯನ್ನು ಜಾರಿಗೊಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 8 ರಿಂದ 10:30ರ ವರೆಗೆ ಈ ಪ್ರಾಯೋಗಿಕ ನಿಯಮಗಳು ಜಾರಿಯಲ್ಲಿರುತ್ತವೆ. ಸಾರ್ವಜನಿಕರು ಬದಲಿ ಮಾರ್ಗಗಳನ್ನು ಬಳಸಿಕೊಂಡು ಪೊಲೀಸರೊಂದಿಗೆ ಸಹಕರಿಸಬೇಕೆಂದು ಮಡಿವಾಳ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2026 | 10:26 PM

Share

ಬೆಂಗಳೂರು ಆ. 5: ಹೊಸೂರು-ಬೆಂಗಳೂರು ರಸ್ತೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ (Traffic Jam) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಸುಗಮಗೊಳಿಸಲು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಹೊಸ ಮಾರ್ಗ ಬದಲಾವಣೆಯನ್ನು (Traffic Diversion) ಜಾರಿಗೆ ತಂದಿದ್ದಾರೆ. ಈ ನೂತನ ಸಂಚಾರ ನಿಯಮಗಳು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಜಾರಿಯಲ್ಲಿರಲಿವೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲೇ ಪ್ರವೇಶ ನಿಷೇಧಿಸಲಾಗಿದೆ. 100 ಅಡಿ ರಸ್ತೆಯಿಂದ ವಾಟರ್ ಟ್ಯಾಂಕ್ ಜಂಕ್ಷನ್ ಮೂಲಕ ಅಯ್ಯಪ್ಪ ಜಂಕ್ಷನ್‌ಗೆ ಬಂದು, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ತೆರಳುವ ವಾಹನಗಳಿಗೆ ಅಯ್ಯಪ್ಪ ಜಂಕ್ಷನ್‌ನಲ್ಲಿ ನಿಷೇಧ ಹೇರಲಾಗಿದೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಹಾಗೂ ವಾಟರ್ ಟ್ಯಾಂಕ್ ಜಂಕ್ಷನ್ ಕಡೆಯಿಂದ ಅಯ್ಯಪ್ಪ ಜಂಕ್ಷನ್ ಮೂಲಕ ಮಡಿವಾಳ ಠಾಣೆ ಕಡೆಗೆ ಹೋಗುವ ವಾಹನಗಳು ಕೃಪಾನಿಧಿ ಜಂಕ್ಷನ್/ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ವಾಟರ್ ಟ್ಯಾಂಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಳ್ಳಬೇಕು. ಬಳಿಕ ಮಡಿವಾಳ ಮಾರುಕಟ್ಟೆ ರಸ್ತೆ ಮೂಲಕ ಸಾಗಿ, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೊಸೂರು ಮುಖ್ಯರಸ್ತೆಯ ಮೂಲಕ ಮುಂದೆ ಸಂಚರಿಸಬಹುದು.

ಇದನ್ನೂ ಓದಿ: 120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

ಸಾರ್ವಜನಿಕರು ಹಾಗೂ ಸವಾರರು ಪೊಲೀಸರೊಂದಿಗೆ ಸಹಕರಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಡಿವಾಳ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ