AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ

ಬೆಂಗಳೂರಿನ ಹೊಸೂರು-ಮಡಿವಾಳ ರಸ್ತೆಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೊಸ ಮಾರ್ಗ ಬದಲಾವಣೆಯನ್ನು ಜಾರಿಗೊಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 8 ರಿಂದ 10:30ರ ವರೆಗೆ ಈ ಪ್ರಾಯೋಗಿಕ ನಿಯಮಗಳು ಜಾರಿಯಲ್ಲಿರುತ್ತವೆ. ಸಾರ್ವಜನಿಕರು ಬದಲಿ ಮಾರ್ಗಗಳನ್ನು ಬಳಸಿಕೊಂಡು ಪೊಲೀಸರೊಂದಿಗೆ ಸಹಕರಿಸಬೇಕೆಂದು ಮಡಿವಾಳ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2026 | 10:26 PM

Share

ಬೆಂಗಳೂರು ಆ. 5: ಹೊಸೂರು-ಬೆಂಗಳೂರು ರಸ್ತೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ (Traffic Jam) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಸುಗಮಗೊಳಿಸಲು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಹೊಸ ಮಾರ್ಗ ಬದಲಾವಣೆಯನ್ನು (Traffic Diversion) ಜಾರಿಗೆ ತಂದಿದ್ದಾರೆ. ಈ ನೂತನ ಸಂಚಾರ ನಿಯಮಗಳು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಜಾರಿಯಲ್ಲಿರಲಿವೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲೇ ಪ್ರವೇಶ ನಿಷೇಧಿಸಲಾಗಿದೆ. 100 ಅಡಿ ರಸ್ತೆಯಿಂದ ವಾಟರ್ ಟ್ಯಾಂಕ್ ಜಂಕ್ಷನ್ ಮೂಲಕ ಅಯ್ಯಪ್ಪ ಜಂಕ್ಷನ್‌ಗೆ ಬಂದು, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ತೆರಳುವ ವಾಹನಗಳಿಗೆ ಅಯ್ಯಪ್ಪ ಜಂಕ್ಷನ್‌ನಲ್ಲಿ ನಿಷೇಧ ಹೇರಲಾಗಿದೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಹಾಗೂ ವಾಟರ್ ಟ್ಯಾಂಕ್ ಜಂಕ್ಷನ್ ಕಡೆಯಿಂದ ಅಯ್ಯಪ್ಪ ಜಂಕ್ಷನ್ ಮೂಲಕ ಮಡಿವಾಳ ಠಾಣೆ ಕಡೆಗೆ ಹೋಗುವ ವಾಹನಗಳು ಕೃಪಾನಿಧಿ ಜಂಕ್ಷನ್/ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ವಾಟರ್ ಟ್ಯಾಂಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಳ್ಳಬೇಕು. ಬಳಿಕ ಮಡಿವಾಳ ಮಾರುಕಟ್ಟೆ ರಸ್ತೆ ಮೂಲಕ ಸಾಗಿ, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೊಸೂರು ಮುಖ್ಯರಸ್ತೆಯ ಮೂಲಕ ಮುಂದೆ ಸಂಚರಿಸಬಹುದು.

ಇದನ್ನೂ ಓದಿ: 120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

ಸಾರ್ವಜನಿಕರು ಹಾಗೂ ಸವಾರರು ಪೊಲೀಸರೊಂದಿಗೆ ಸಹಕರಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಡಿವಾಳ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್