Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸುವ ಮುನ್ನ ಗಮನಿಸಿ: ಸದಾ ಇರುತ್ತೆ ಟ್ರಾಫಿಕ್ ಜಾಮ್

ಅದು ಸದಾ ಟ್ರಾಫಿಕ್‌ನಿಂದ ಕೂಡಿರುವ ಬೆಂಗಳೂರಿನ ರಸ್ತೆ. ಆ ರಸ್ತೆಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಆಗಲಿ ಎಂದು ಫ್ಲೈ ಓವರ್ ಕಾಮಗಾರಿ ಮಾಡಲಾಗುತ್ತಿದೆ. ಆದರೆ ಅದೇ ಮೇಲ್ಸೇತುವೆ ಕಾಮಗಾರಿಯ ವಿಳಂಬ ನೀತಿ ಧೋರಣೆ ವಾಹನ ಸವಾರರು ಪರದಾಡುವಂತೆ ಮಾಡಿದೆ. ಅದ್ಯಾವ ರಸ್ತೆ? ಯಾವ ಫ್ಲೈಓವರ್ ಕಾಮಗಾರಿ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸುವ ಮುನ್ನ ಗಮನಿಸಿ: ಸದಾ ಇರುತ್ತೆ ಟ್ರಾಫಿಕ್ ಜಾಮ್
ವೀರಭದ್ರ ನಗರ ಫ್ಲೈಓವರ್ ಕಾಮಗಾರಿ
Follow us
Vinayak Hanamant Gurav
| Updated By: Ganapathi Sharma

Updated on:Dec 11, 2024 | 7:16 AM

ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಹೊಸಕೆರೆಹಳ್ಳಿ ಬಳಿ ನಾಯಂಡಳ್ಳಿ-ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ಕಳೆದ ಮೂರು ವರ್ಷಳ ಹಿಂದೆ ಕಾಮಗಾರಿ ಆರಂಭ ಮಾಡಲಾಗಿತ್ತು. 380 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ವಿಳಂಬ ನೀತಿ ಧೋರಣೆಯಿಂದ ಬೆಳಿಗ್ಗೆ, ಸಾಯಂಕಾಲ ‌ಪೀಕ್ ಅವರ್ ಸಂದರ್ಭದಲ್ಲಿ ಭಾರಿ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರ ಪರದಾಡುವಂತಾಗಿದೆ.

ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ಪ್ರಯಾಣಿಕರು, ಆದಷ್ಟು ಬೇಗ ಕಾಮಗಾರಿ‌ ಮುಗಿಸಿ ವಾಹನ ಸವಾರರ ಓಡಾಟಕ್ಕೆ ಅನಕೂಲ ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಮೈಸೂರು ರಸ್ತೆ, ಬನಶಂಕರಿ, ನಾಯಂಡಳ್ಳಿ, ಶ್ರೀನಗರ ಅಲ್ಲದೇ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಪಿ‌ಇಎಸ್ ಕಾಲೇಜು ಬಳಿಯ ಜಂಕ್ಷನ್ ಇದಾಗಿದೆ. ಆದರೆ ಫ್ಲೈ ಓವರ್ ಕಾಮಗಾರಿಯಿಂದ ಈಕಡೆಯಿಂದ ಆಕಡೆಯ ರಸ್ತೆಗೆ ಹೋಗಬೇಕು ಎಂದರೆ ಅರ್ಧ ಕಿಲೋ ಮೀಟರ್ ಸುತ್ತಿ ಬಳಸಿ ಬರಬೇಕು. ಮತ್ತೊಂದೆಡೆಗೆ ಪಾದಚಾರಿಗಳಿಗೂ ರಸ್ತೆ ದಾಟಲೂ ತೊಂದರೆ. ಕೆಲಸಕ್ಕೆ ಹೋಗುವವರು, ಬರುವರು ಪ್ರತಿನಿತ್ಯ ಇಲ್ಲಿ ಓಡಾಡಬೇಕು ಅಂದರೆ ಹತ್ತು ನಿಮಿಷದ ದಾರಿಗೆ ಅರ್ಧ ಗಂಟೆ ವರೆಗೂ ಟ್ರಾಫಿಕ್​​ ಜಾಮ್​ನಲ್ಲಿ ಸಿಲುಕಿ ಪರದಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಕಾಮಗಾರಿ ಆದಷ್ಟು ಬೇಗ ಮುಗಿಸುವಂತೆ ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ: ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್‌ ಕಂಪನಿಯ ಹೆಸರು! ಕಾರಣ ಇಲ್ಲಿದೆ

ಒಟ್ಟಿನಲ್ಲಿ ಆಮೆ ಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದ ಪ್ರತಿನಿತ್ಯ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳು ಆದಷ್ಟು ಬೇಗನೆ ಎಚ್ಚೆತ್ತುಕೊಂಡು ಕಾಮಗಾರಿ‌ ಪೂರ್ಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Wed, 11 December 24

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?