AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic: ಬೆಂಗಳೂರಿನ ಈ ಪ್ರದೇಶಗಳಲ್ಲಿ ವಾಹನ ಸಂಚಾರಕ ನಿಷೇಧ, ಮಾರ್ಗಸೂಚಿ ಬದಲಾವಣೆ ಹೊರಡಿಸಿದ ಟ್ರಾಫಿಕ್ ಪೊಲೀಸ್

ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ. ಬೆಂಗಳೂರಿನ ವರ್ಸೋವ ಲೇಔಟ್ ಬಳಿಯ ಫ್ಲೈಓವರ್‌ನಲ್ಲಿ ಮತ್ತು ಅದರ ಸುತ್ತಲೂ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗಸೂಚಿ ಸಂಚಾರ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇನ್ನು ಕೆಲ ಕಡೆ ವಾಹನ ಸಂಚಾರ ನಿಷೇಧಿಸಲಾಗಿದೆ.

Bengaluru Traffic: ಬೆಂಗಳೂರಿನ ಈ ಪ್ರದೇಶಗಳಲ್ಲಿ ವಾಹನ ಸಂಚಾರಕ ನಿಷೇಧ, ಮಾರ್ಗಸೂಚಿ ಬದಲಾವಣೆ ಹೊರಡಿಸಿದ ಟ್ರಾಫಿಕ್ ಪೊಲೀಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Dec 04, 2023 | 11:46 AM

Share

ಬೆಂಗಳೂರು, ಡಿ.04: ಸಿಲಿಕಾನ್ ಸಿಟಿ ಬೆಂಗಳೂರು ಈಗ ಟ್ರಾಫಿಕ್ ಸಿಟಿಯಾಗಿ ಬದಲಾಗಿದೆ (Bengaluru Traffic) . ಬೆಂಗಳೂರಿಗರು ತಮ್ಮ ಹೆಚ್ಚಿನ ಸಮಯವನ್ನು ಟ್ರಾಫಿಕ್‌ನಲ್ಲಿ ಸಿಲುಕಿ ಕಳೆಯುವಂತಾಗಿದೆ. ಹೀಗಾಗಿ ಟ್ರಾಫಿಕ್​ನಲ್ಲೇ ಪಿಜ್ಜಾ ಆರ್ಡರ್ ಮಾಡಿ ತಿನ್ನುವುದು, ಸಮಯ ವ್ಯರ್ಥ ಮಾಡುವುದೇಕೆ ಎಂದು ತರಕಾರಿ ಕಟ್ ಮಾಡಿಕೊಳ್ಳುವಂತಹ ಎಷ್ಟೂ ಘಟನೆಗಳು ನಗರದಲ್ಲಿ ಹೆಚ್ಚಾಗಿರುವ ಟ್ರಾಫಿಕ್​ಗೆ ಉದಾಹರಣೆಗಳಾಗಿವೆ. ಇನ್ನು ಟ್ರಾಫಿಕ್​ ಸಮಸ್ಯೆಗಳನ್ನು ನಿಯಂತ್ರಿಸುವ ಸಲುವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು (Bengaluru Traffic Police) ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ನಿರ್ಬಂಧನೆಗಳನ್ನು, ಮಾರ್ಗಸೂಚಿ ಬದಲಾವಣೆಗಳನ್ನು ಹೊರಡಿಸಿದ್ದಾರೆ.

ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ. ಬೆಂಗಳೂರಿನ ವರ್ಸೋವ ಲೇಔಟ್ ಬಳಿಯ ಫ್ಲೈಓವರ್‌ನಲ್ಲಿ ಮತ್ತು ಅದರ ಸುತ್ತಲೂ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗಸೂಚಿ ಸಂಚಾರ ಬದಲಾವಣೆಗಳನ್ನು ಘೋಷಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕಗ್ಗದಾಸಪುರ ಮೇಲ್ಸೇತುವೆ ಮತ್ತು ಸುತ್ತಮುತ್ತ ಸಂಚಾರ ವ್ಯತ್ಯಯ ಹಿನ್ನೆಲೆ ಮಾರ್ಗ ಬದಲಾವಣೆ ಮಾಡಲಾಗಿದೆ. ಕಗ್ಗದಾಸಪುರ ಮುಖ್ಯರಸ್ತೆಯ ನಾಗವಾರಪಾಳ್ಯದಿಂದ ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್‌ವರೆಗೆ ಸಂಚರಿಸುವ ವಾಹನಗಳನ್ನು 5ನೇ ಅಡ್ಡ ರಸ್ತೆ ಬೈರಸಂದ್ರ ಜಂಕ್ಷನ್‌ಗೆ ತಿರುಗಿಸಿಕೊಳ್ಳಲು ಮಾರ್ಗ ಬದಲಾವಣೆಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಸಿಲುಕಿ ಉರುಳಿ ಬಿದ್ದ ಕ್ಯಾಂಟರ್ ವಾಹನ; ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಟ್ರಾಫಿಕ್ ಜಾಮ್

ವಾಹನ ಸವಾರರು ಬಲ ತಿರುವು ಪಡೆದು ಜಿ.ಎಂ.ಪಾಳ್ಯ ಜಂಕ್ಷನ್ ತಲುಪಲು ಹಾಗೂ ಕಗ್ಗದಾಸಪುರ ರೈಲ್ವೆ ಗೇಟ್‌ನಿಂದ ನಾಗವಾರಪಾಳ್ಯ ಕಡೆಗೆ ಹೋಗುವ ವಾಹನಗಳು ರೈಲ್ವೇ ಗೇಟ್ ಜಂಕ್ಷನ್‌ನಲ್ಲಿ ಎಡಕ್ಕೆ ತಿರುಗಿ ವಿಜ್ಞಾನನಗರ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗುವಂತೆ ಸೂಚಿಸಲಾಗಿದೆ. ವಾಹನಗಳು ಬಿಇಎಂಎಲ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಗೀತಾಂಜಲಿ ಲೇಔಟ್ ಜಂಕ್ಷನ್‌ನಲ್ಲಿ ಮತ್ತೊಂದು ಬಲಕ್ಕೆ ತಿರುಗಬೇಕು ಇದರಿಂದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ನಾಗವಾರಪಾಳ್ಯ ತಲುಪಬಹುದು. ಪ್ರಯಾಣಿಕರು ಜಿಎಂ ಪಾಳ್ಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ನಂತರ ಬೈರಸಂದ್ರ ಮುಖ್ಯರಸ್ತೆಯ ಮೂಲಕ ನಾಗವಾರಪಾಳ್ಯವನ್ನು ತಲುಪಬಹುದು.

ಈ ಪ್ರದೇಶಗಳಲ್ಲಿ ವಾಹನ ಸಂಚಾರ ನಿಷೇಧ

ಇನ್ನು ಕೆಲ ಕಡೆ ವಾಹನ ಸಂಚಾರ ನಿಷೇಧಿಸಲಾಗಿದೆ. ಪೂರ್ವಂಕರ ಅಪಾರ್ಟ್‌ಮೆಂಟ್‌ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ನಿಲ್ದಾಣದವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೆತ್ತಿಕೊಂಡಿರುವ ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಈ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ