AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಜಲ್ಲಿ ತೆರವು ಮಾಡಿದ ಟ್ರಾಪಿಕ್ ಪೊಲೀಸ್: ಬಿಬಿಎಂಪಿಯನ್ನು ಟೀಕಿಸಿ ಸಿಬ್ಬಂದಿ ಹೊಗಳಿದ ನೆಟ್ಟಿಗರು

Bengaluru News: ರಸ್ತೆಯಲ್ಲಿ ಬಿದ್ದಿರುವ ಜಲ್ಲಿ ಕಲ್ಲುಗಳನ್ನು ಬೆಂಗಳೂರು ನಗರ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ತೆರವು ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಬಿಬಿಎಂಪಿ ಮಾಡಬೇಕಾದ ಕೆಲಸವನ್ನು ಪೊಲೀಸರು ಮಾಡುತ್ತಿರುವ ಕಾರ್ಯಕ್ಕೆ ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ರಸ್ತೆಯಲ್ಲಿ ಜಲ್ಲಿ ತೆರವು ಮಾಡಿದ ಟ್ರಾಪಿಕ್ ಪೊಲೀಸ್: ಬಿಬಿಎಂಪಿಯನ್ನು ಟೀಕಿಸಿ ಸಿಬ್ಬಂದಿ ಹೊಗಳಿದ ನೆಟ್ಟಿಗರು
ರಸ್ತೆ ಮೇಲೆ ಬಿದ್ದಿರುವ ಜಲ್ಲಿ ಕಲ್ಲುಗಳನ್ನು ತೆರವು ಮಾಡುತ್ತಿರುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ
Rakesh Nayak Manchi
Rakesh Nayak Manchi|

Updated on: Jun 27, 2023 | 2:56 PM

Share

ಬೆಂಗಳೂರು: ನಗರದ ಫ್ಲೈಓವರ್​ನಲ್ಲಿ ಟ್ರಾಫಿಕ್ ಪೊಲೀಸ್ (Bengaluru Traffic Police) ಸಿಬ್ಬಂದಿ ರಸ್ತೆ ಮೇಲೆ ಬಿದ್ದಿರುವ ಜಲ್ಲಿ ಕಲ್ಲುಗಳನ್ನು ಸಣಿಕೆಯಿಂದ ತೆರವು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಹಲವರು ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ಟೀಕಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ಸಂಚಾರ ಠಾಣೆ ಪೊಲೀಸರು ಸೋಮವಾರ ಸಂಜೆ ಈ ವಿಡಿಯೋ ಹಂಚಿಕೊಂಡಿದ್ದಾರೆ. “ಬಿಡಿಎ ಅಪ್ ರ‍್ಯಾಂಪ್‌ನಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದ ಜಲ್ಲಿಕಲ್ಲುಗಳನ್ನು ನಿಲ್ದಾಣದ ಸಿಬ್ಬಂದಿ ತೆರವುಗೊಳಿಸಿದ್ದಾರೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸಿಬ್ಬಂದಿ ಕಾರ್ಯ ಮೆಚ್ಚಿದ ಪಶ್ಚಿಮ ಸಂಚಾರ ಡಿಸಿಪಿ ಡಾ ಸುಮನ್ ಡಿ ಪನ್ನೇಕರ್, ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಜಲ್ಲಿಕಲ್ಲುಗಳನ್ನು ನಮ್ಮ ಸಿಬ್ಬಂದಿ ತೆರವುಗೊಳಿಸಿದ್ದಾರೆ ಟ್ವೀಟ್ ಮಾಡಿದ್ದಾರೆ. ವಿಡಿಯೋದಲ್ಲಿ ಸಿಬ್ಬಂದಿ ಜೊತೆ ಇಬ್ಬರು ಕೆಲಸಗಾರರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್​ ಎಷ್ಟು?

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಉತ್ತಮ ಕಲಸ ಎಂದು ನೆಟ್ಟಿಗರೊಬ್ಬರು ಹೇಳಿದರೆ, ಇನ್ನೊಬ್ಬರು, ನಮ್ಮ ಪ್ರೀತಿಯ ಟ್ರಾಫಿಕ್ ಪೊಲೀಸರಿಗೆ ಬಿಗ್ ಸೆಲ್ಯೂಟ್ ಎಂದಿದ್ದಾರೆ. ಜಲ್ಲಿ ಕಲ್ಲುಗಳು ರಸ್ತೆ ಮೇಲೆ ಚೆಲ್ಲಿಕೊಂಡ ಹೋದ ವಾಹನ ಚಾಲಕರಿಗೆ ದಂಡ ವಿಧಿಸಿ ಎಂದು ಮತ್ತೊಬ್ಬರು ಆಗ್ರಹಿಸಿದ್ದಾರೆ.

ಸರ್ವೇಶ್ ರಾನಡೆ ಎಂಬವರು ಟ್ವೀಟ್ ಮಾಡಿ, ಆ ಕೆಲಸ ಅವರದ್ದಲ್ಲವಾದರೂ ಪೊಲೀಸರದ್ದು ಒಳ್ಳೆಯ ಕೆಲಸ ಎಂದು ಹೇಳಿಕೊಂಡಿದ್ದಾರೆ. ಆದರೆ ಇದನ್ನು ಮಾಡಬೇಕಾದ ಜನರು ಎಲ್ಲಿದ್ದಾರೆ? ಆ ವ್ಯಕ್ತಿಗಳು ಮತ್ತು ಅವರ ಮೇಲಧಿಕಾರಿಗಳು ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಬಿಬಿಎಂಪಿಯನ್ನು ಪ್ರಶ್ನಿಸಿ ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.