AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ

ಬೆಂಗಳೂರು ನಗರ ಸಂಚಾರ ಪೊಲೀಸರು ಜನವರಿ 6 ರಿಂದ 12 ರವರೆಗೆ ಮದ್ಯಪಾನ ಮತ್ತು ಅತಿವೇಗ ಚಾಲನೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. 57860 ವಾಹನಗಳ ಪರಿಶೀಲನೆಯಲ್ಲಿ 861 ಮದ್ಯಪಾನ ಚಾಲನೆ ಮತ್ತು 290 ಅತಿವೇಗ ಚಾಲನೆ ಪ್ರಕರಣ ದಾಖಲಾಗಿದೆ. ಒಟ್ಟು 304000 ದಂಡ ಸಂಗ್ರಹಿಸಲಾಗಿದೆ. ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳು ಮುಂದುವರೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ
ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ
ಗಂಗಾಧರ​ ಬ. ಸಾಬೋಜಿ
|

Updated on: Jan 13, 2025 | 8:26 PM

Share

ಬೆಂಗಳೂರು, ಜನವರಿ 13: ಮದ್ಯಪಾನ ಮಾಡಿ ವಾಹನ ಚಾಲನೆ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಸಮರ ಸಾರಿದಂತಿದೆ. ಜ. 6ರಿಂದ 12 ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜೊತೆಗೆ 30,4000 ರೂ ದಂಡ ಸಂಗ್ರಹಿಸಲಾಗಿದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಕ್ರಮ

ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ಜ. 6 ರಿಂದ 12 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ಧ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ವಿಶೇಷ ಕಾರ್ಯಾಚರಣೆಯಲ್ಲಿ ದಾಖಲು ಮಾಡಿರುವ ಪ್ರಕರಣಗಳ ವಿವರ ಈ ಕೆಳಗಿನಂತಿದೆ.

ಮದ್ಯಪಾನ ಮಾಡಿ ವಾಹನ ಚಾಲನೆಯ ವಿವರ

  • ಪರಿಶೀಲಿಸಲಾದ ವಿವಿಧ ಮಾದರಿಯ ವಾಹನಗಳ ಸಂಖ್ಯೆ- 57860
  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ-861

ಅತಿವೇಗ ಚಲಾಯಿಸಿದವರ ವಿರುದ್ಧ ದಾಖಲಾದ ಪ್ರಕರಣಗಳು

  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 290
  • ಸಂಗ್ರಹಿಸಿದ ದಂಡದ ಮೊತ್ತ: 304000 ರೂ.

ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ ಹಮ್ಮಿಕೊಳ್ಳುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಸಂಚಾರ ಪೂರ್ವ ವಿಭಾಗದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಚಾಲಕರು ಮತ್ತು ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು 16,853 ಜನರನ್ನು ತಪಾಸಣೆಗೊಳಪಡಿಸಿದ್ದು, 178 ಮಂದಿ ಮದ್ಯಪಾನ ಮಾಡಿರುವುದು ಧೃಡಪಟ್ಟಿತ್ತು. ವಾಹನ ಸವಾರರ ಡಿಎಸ್​ಗಳನ್ನು ಆರ್​ಟಿಓ ಕಛೇರಿಗೆ ಅಮಾನತು ಮಾಡಲು ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?