AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ

ಬೆಂಗಳೂರು ನಗರ ಸಂಚಾರ ಪೊಲೀಸರು ಜನವರಿ 6 ರಿಂದ 12 ರವರೆಗೆ ಮದ್ಯಪಾನ ಮತ್ತು ಅತಿವೇಗ ಚಾಲನೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. 57860 ವಾಹನಗಳ ಪರಿಶೀಲನೆಯಲ್ಲಿ 861 ಮದ್ಯಪಾನ ಚಾಲನೆ ಮತ್ತು 290 ಅತಿವೇಗ ಚಾಲನೆ ಪ್ರಕರಣ ದಾಖಲಾಗಿದೆ. ಒಟ್ಟು 304000 ದಂಡ ಸಂಗ್ರಹಿಸಲಾಗಿದೆ. ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳು ಮುಂದುವರೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ
ಡ್ರಂಕ್ ಆ್ಯಂಡ್​ ಡ್ರೈವ್, ಅತಿವೇಗವಾಗಿ ಚಲಾಯಿಸಿದವರ ವಿರುದ್ಧ ಬೆಂಗಳೂರು ಪೊಲೀಸರ ಸಮರ: ದಂಡ
ಗಂಗಾಧರ​ ಬ. ಸಾಬೋಜಿ
|

Updated on: Jan 13, 2025 | 8:26 PM

Share

ಬೆಂಗಳೂರು, ಜನವರಿ 13: ಮದ್ಯಪಾನ ಮಾಡಿ ವಾಹನ ಚಾಲನೆ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಸಮರ ಸಾರಿದಂತಿದೆ. ಜ. 6ರಿಂದ 12 ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜೊತೆಗೆ 30,4000 ರೂ ದಂಡ ಸಂಗ್ರಹಿಸಲಾಗಿದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಕ್ರಮ

ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ಜ. 6 ರಿಂದ 12 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ಧ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ವಿಶೇಷ ಕಾರ್ಯಾಚರಣೆಯಲ್ಲಿ ದಾಖಲು ಮಾಡಿರುವ ಪ್ರಕರಣಗಳ ವಿವರ ಈ ಕೆಳಗಿನಂತಿದೆ.

ಮದ್ಯಪಾನ ಮಾಡಿ ವಾಹನ ಚಾಲನೆಯ ವಿವರ

  • ಪರಿಶೀಲಿಸಲಾದ ವಿವಿಧ ಮಾದರಿಯ ವಾಹನಗಳ ಸಂಖ್ಯೆ- 57860
  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ-861

ಅತಿವೇಗ ಚಲಾಯಿಸಿದವರ ವಿರುದ್ಧ ದಾಖಲಾದ ಪ್ರಕರಣಗಳು

  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 290
  • ಸಂಗ್ರಹಿಸಿದ ದಂಡದ ಮೊತ್ತ: 304000 ರೂ.

ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ ಹಮ್ಮಿಕೊಳ್ಳುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಸಂಚಾರ ಪೂರ್ವ ವಿಭಾಗದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಚಾಲಕರು ಮತ್ತು ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು 16,853 ಜನರನ್ನು ತಪಾಸಣೆಗೊಳಪಡಿಸಿದ್ದು, 178 ಮಂದಿ ಮದ್ಯಪಾನ ಮಾಡಿರುವುದು ಧೃಡಪಟ್ಟಿತ್ತು. ವಾಹನ ಸವಾರರ ಡಿಎಸ್​ಗಳನ್ನು ಆರ್​ಟಿಓ ಕಛೇರಿಗೆ ಅಮಾನತು ಮಾಡಲು ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!