AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Police: ಡ್ರಿಂಕ್ ಆ್ಯಂಡ್ ಡ್ರೈವ್ ತಪ್ಪಿಸಲು ಸಂಚಾರಿ ಪೊಲೀಸರು ಏನು ಮಾಡುತ್ತಿದ್ದಾರೆ ನೋಡಿ

ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ತಪ್ಪಿಸುವುದಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರ ಪೊಲೀಸರು ವಿನೂತನ ಅಭಿಯಾನವೊಂದನ್ನು ಹಮ್ಮಿಕೊಂಡಿದ್ದಾರೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಈ ವಿಶೇಷ ಅಭಿಯಾನ ನಡೆಸುತ್ತಿದ್ದು, ಮೆಜೆಸ್ಟಿಕ್ ಬಳಿ ವಾಹನ ಸವಾರರಿಂದ ಸಹಿ ಪಡೆಯುತ್ತಿದ್ದಾರೆ.

Ganapathi Sharma
|

Updated on:Mar 07, 2023 | 11:05 PM

Share

ಬೆಂಗಳೂರು: ಡ್ರಿಂಕ್ ಆ್ಯಂಡ್ ಡ್ರೈವ್ (Drink and Drive) ಪ್ರಕರಣಗಳನ್ನು ತಪ್ಪಿಸುವುದಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ವಿನೂತನ ಅಭಿಯಾನವೊಂದನ್ನು ಹಮ್ಮಿಕೊಂಡಿದ್ದಾರೆ. ದಂಡ ವಿಧಿಸುವುದಕ್ಕೂ ಮೊದಲು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ತಪ್ಪಿಸಲು ಸಂಚಾರಿ ಪೊಲೀಸರು ವಾಹನ ಸವಾರರಿಂದ ಸಹಿ ಪಡೆಯುವ ಮೂಲಕ ಅಭಿಯಾನ ಆರಂಭಿಸಿದ್ದಾರೆ. ಇದರಂತೆ ಸವಾರರು, ‘ಇನ್ನು ಮದ್ಯಪಾನ ಮಾಡಿ ವಾಹನ‌ಚಾಲನೆ ಮಾಡುವುದಿಲ್ಲ’ ಎಂದು‌ ಸಹಿ ಹಾಕಿ ಸಂಚಾರಿ ಪೊಲೀಸರಿಗೆ ನೀಡಬೇಕಾಗುತ್ತದೆ. ಈ ಸಹಿ ಪಡೆಯುವ ವೇಳೆ, ಕುಡಿದು ವಾಹನ ಚಲಾಯಿಸುವುದರಿಂದ ಆಗುವ ಅವಘಡಗಳ ಬಗ್ಗೆ ಪೊಲೀಸರು ಸವಾರರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಈ ವಿಶೇಷ ಅಭಿಯಾನ ನಡೆಸುತ್ತಿದ್ದು, ಮೆಜೆಸ್ಟಿಕ್ ಬಳಿ ವಾಹನ ಸವಾರರಿಂದ ಸಹಿ ಪಡೆಯುತ್ತಿದ್ದಾರೆ.

ಮೂರು ದಿನಗಳಲ್ಲಿ 2.68 ಕೋಟಿ ರೂಪಾಯಿಗೂ ಹೆಚ್ಚು ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಶೇ 50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಮೊದಲ 4 ದಿನಗಳಲ್ಲಿ 2,68,16,500 ರೂ. ದಂಡ ಸಂಗ್ರಹವಾಗಿದೆ. ಕಳೆದ 4 ದಿನಗಳಲ್ಲಿ 93,532 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Traffic: ಟ್ರಾಫಿಕ್​ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಸಾಲಿನಲ್ಲಿ ಬೆಂಗಳೂರು

11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿತ್ತು. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿತ್ತು.

ನಾಲ್ಕು ಸಂಚಾರಿ ಪೊಲೀಸ್ ಠಾಣೆಗಳ ಉದ್ಘಾಟನೆ

ಬೆಂಗಳೂರಿನ ತಲಘಟ್ಟಪುರ, ಬೆಳ್ಳಂದೂರು, ಮಹದೇವಪುರ ಹಾಗೂ ಹೆಣ್ಣೂರುಗಳಲ್ಲಿ ನಾಲ್ಕು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಗಳವಾರ ಉದ್ಘಾಟಿಸಲಾಯಿತು. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗೃಹ ಇಲಾಖೆಯ ಸಚಿವ ಆರಗ ಜ್ಞಾನೇಂದ್ರ, ಮಹದೇವಪುರ ಶಾಸಕ ಲಿಂಬಾವಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ; ಆರಗ ಜ್ಞಾನೇಂದ್ರ

ಬೆಂಗಳೂರು ಮಹಾನಗರ ವೇಗವಾಗಿ ಬೆಳೆಯುತ್ತಿದೆ. ಅನ್ಯ ರಾಜ್ಯ, ವಿದೇಶದಿಂದ ಬಂದು ನೆಲೆಸುವವರು ಹೆಚ್ಚಿದ್ದಾರೆ. ಪ್ರತಿ ದಿನ 2-3 ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಬೇಕಿದೆ. ಸಾರ್ವಜನಿಕರು ಕೂಡ ಪೊಲೀಸರಿಗೆ ಸಹಕರಿಸಬೇಕಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಜನರಿಗೆ ಒಳ್ಳೆಯ ಸೌಲಭ್ಯ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. 200 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. 8 ವಿಧಿವಿಜ್ಞಾನ ಪ್ರಯೋಗಾಲಯಗಳ ನಿರ್ಮಾಣ ಹಾಗೂ ಸುಮಾರು 415 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮಾಡಲಾಗುತ್ತಿದೆ. ವಿದೇಶಿ ಅಗ್ನಿಶಾಮಕ ವಾಹನಗಳನ್ನು ಖರೀದಿಸಿ ನೀಡಲಾಗಿದೆ. ಇದರಿಂದ ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ನಂದಿಸಲು ಅನುಕೂಲವಾಗಲಿದೆ. ಬೆಂಗಳೂರಿ‌ನಲ್ಲಿ 7 ಸಾವಿರ ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Tue, 7 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್