AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಕಾಮರ್ಸ್ ಬೈಕ್ ಸವಾರರ ವಿರುದ್ಧ ಕಾರ್ಯಾಚರಣೆ: 9 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು ಸಂಚಾರ ಪೊಲೀಸರು ಶನಿವಾರ ಇ-ಕಾಮರ್ಸ್ ಬೈಕ್ ಸವಾರರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 1859 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿಕೊಂಡಿ, 9.65 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ನಂತರ ಇ-ಕಾಮರ್ಸ್ ಬೈಕ್ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದರು. ವೈರಲ್ ಆದ ವೀಡಿಯೊ ಕುರಿತು ಸ್ಪಷ್ಟನೆ ನೀಡಲಾಗಿದೆ.

ಇ-ಕಾಮರ್ಸ್ ಬೈಕ್ ಸವಾರರ ವಿರುದ್ಧ ಕಾರ್ಯಾಚರಣೆ: 9 ಲಕ್ಷ ರೂ. ದಂಡ ವಸೂಲಿ
ಇ-ಕಾಮರ್ಸ್ ಬೈಕ್ ಸವಾರರ ವಿರುದ್ಧ ಕಾರ್ಯಾಚರಣೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 02, 2025 | 12:38 PM

Share

ಬೆಂಗಳೂರು, ಮಾರ್ಚ್​ 02: ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಬೆಂಗಳೂರು ಟ್ರಾಫಿಕ್​ ಪೊಲೀಸರು (Bengaluru Traffic Police) ಪ್ರತಿ ನಿತ್ಯವೂ ಜಾಗೃತಿ ಮೂಡಿಸುತ್ತಾರೆ. ಆದರೆ, ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಾರೆ. ಹೀಗಾಗಿ, ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತಿದ್ದಾರೆ. ಅದರಂತೆ, ಸಂಚಾರ ನಿಯಮ ಉಲ್ಲಂಘನೆ ಮಾಡಿದ ಇ-ಕಾಮರ್ಸ್ ಬೈಕ್ (E-Commerce Bike) ಸವಾರರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಶನಿವಾರ (ಮಾರ್ಚ್​ 02) ವಿಶೇಷ ಕಾರ್ಯಾಚರಣೆ ನಡೆಸಿದರು.

ಬೆಂಗಳೂರು ಸಂಚಾರಿ ಪೊಲೀಸರು ಒಂದೇ ದಿನ 1859 ಪ್ರಕರಣ ದಾಖಲಿಸಿಕೊಂಡಿದ್ದು, 9.65 ಲಕ್ಷ ರೂ.‌ ದಂಡ ವಸೂಲಿ ಮಾಡಿದ್ದಾರೆ. ಫುಟ್​​ಪಾತ್​ನಲ್ಲಿ ವಾಹನ ಚಾಲನೆ ಮಾಡಿದ 79 ಮಂದಿಗೆ ದಂಡ ವಿಧಿಸಲಾಗಿದೆ. ಹಾಗೇ ನೋ ಎಂಟ್ರಿಯಲ್ಲಿ ವಾಹನ ಚಾಲನೆ ಮಾಡಿದ 389, ಒನ್ ವೇ ಸಂಚಾರ-354, ಟ್ರಾಫಿಕ್ ಸಿಗ್ನಲ್ ಜಂಪ್​ ಮಾಡಿದ 209, ನೋ ಪಾರ್ಕಿಂಗ್​ನಲ್ಲಿ ವಾಹನ ನಿಲ್ಲಿಸಿದ 98, ಸಂಚಾರಕ್ಕೆ ಅಡಚಣೆ ಮಾಡಿದ 148 ಜನರಿಗೆ ದಂಡ ವಿಧಿಸಲಾಗಿದೆ. ಮತ್ತು ಹೆಲ್ಮೆಟ್ ರಹಿತ ಚಾಲನೆ ಮಾಡಿದ 582 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಾಗಿ ಎಲೆಕ್ಟ್ರಿಕ್​ ಬೈಕ್​ಗಳಿಂದಲೇ ಸಂಚಾರ ನಿಯಮ ಉಲ್ಲಂಘನೆ ಮಾಡಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು: ಫುಟ್​ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು!
Image
ಬೆಂಗಳೂರು ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬಂತು ಅಸ್ತ್ರಂ ಆ್ಯಪ್
Image
ಬೆಂಗಳೂರು: ಟ್ರಾಫಿಕ್​ ಪೊಲೀಸ್​​​ ಕಾನ್ಸ್‌ಟೇಬಲ್ ಕಾರ್ಯಕ್ಕೆ ಕಮಿಷನರ್ ಬಿ ದಯಾನಂದ್ ಶ್ಲಾಘನೆ
Image
Traffic Rules: ವಾಹನಗಳ ನಂಬರ್​ ಪ್ಲೇಟ್​ ಇನ್ಮುಂದೆ ಹೀಗೆ ಇರಬೇಕಂತೆ..ಇಲ್ಲದಿದ್ದರೆ ದಂಡ!; ಫೋಟೋ ಶೇರ್​ ಮಾಡಿದ ಬೆಂಗಳೂರು ಟ್ರಾಫಿಕ್​ ಪೊಲೀಸ್​

ಟ್ವಿಟರ್ ಪೋಸ್ಟ್​

ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಒಂದರಲ್ಲೇ 142 ಇ-ಕಾಮರ್ಸ್ ವಾಹನ ಸವಾರರಿಗೆ ದಂಡ ವಿಧಿಸಲಾಗಿದೆ. ಬಳಿಕ, ಪೊಲೀಸರು ಅವರುಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೆಂಚುರಿ ಸ್ಟಾರ್ ಕಳ್ಳ: 1.45 ಕೋಟಿ ಮೌಲ್ಯದ 100 ಬೈಕ್ ವಶಕ್ಕೆ!

ಸಂಚಾರಿ ಪೊಲೀಸರು ವೈಟ್ ಬೋರ್ಡ್ ಇ-ಕಾಮರ್ಸ್ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ ಎಂಬ ವಿಡಿಯೋ ವೈರಲ್ ಆದ ವಿಚಾರವಾಗಿ ಸಂಚಾರ ಜಂಟಿ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. “ಇದು ಸಂಪೂರ್ಣವಾಗಿ ಸುಳ್ಳು. ವಾಹನದ ನಂಬರ್ ಪ್ಲೇಟ್ ಆಧಾರಿತ ಕಾರ್ಯಾಚರಣೆ ನಡೆಸಿಲ್ಲ. ಇ-ಕಾಮರ್ಸ್ ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. ಇ-ಕಾಮರ್ಸ್ ವಿತರಣಾ ಏಜೆಂಟ್‌ಗಳಿಗೆ ದಂಡದ ನಂತರ, ಸಂಚಾರ ನಿಯಮಗಳು ಮತ್ತು ಸುರಕ್ಷತೆಯನ್ನು ಪಾಲಿಸುವ ಬಗ್ಗೆ ತರಗತಿಯನ್ನು ನೀಡಲಾಗಿದೆ” ಎಂದು ತಿಳಿಸಿದರು.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Sun, 2 March 25

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!