AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರಿಗೆ ಅತ್ಯಾಧುನಿಕ ಬಾಡಿ ಕ್ಯಾಮೆರಾ: ದಾಖಲಾಗುತ್ತೆ ಸಂಚಾರ ನಿಯಮ ಉಲ್ಲಂಘನೆ

ಬೆಂಗಳೂರು ಸಂಚಾರ ಪೊಲೀಸರಿಗೆ ₹ 32 ಕೋಟಿ ವೆಚ್ಚದಲ್ಲಿ ತಂತ್ರಜ್ಞಾನ ಆಧಾರಿತ ಸೌಲಭ್ಯ ಒದಗಿಸಲಾಗಿದೆ.

ಟ್ರಾಫಿಕ್ ಪೊಲೀಸರಿಗೆ ಅತ್ಯಾಧುನಿಕ ಬಾಡಿ ಕ್ಯಾಮೆರಾ: ದಾಖಲಾಗುತ್ತೆ ಸಂಚಾರ ನಿಯಮ ಉಲ್ಲಂಘನೆ
ಆರಗ ಜ್ಞಾನೇಂದ್ರ
TV9 Web
| Edited By: |

Updated on: Dec 30, 2021 | 9:49 PM

Share

ಬೆಂಗಳೂರು: ಸುಗಮ ಸಂಚಾರಕ್ಕಾಗಿ ಆಧುನಿಕ ತಂತ್ರಜ್ಞಾನ ಆಧರಿತ ಸೌಲಭ್ಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು. ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಚಾರಿ ಬೀಟ್ ವ್ಯವಸ್ಥೆ, ಸಂಚಾರ ಪೊಲೀಸರ ಕಾರ್ಯನಿರ್ವಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಹಲವರು ಪಾಲ್ಗೊಂಡಿದ್ದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರು ಸಂಚಾರ ಪೊಲೀಸರಿಗೆ ₹ 32 ಕೋಟಿ ವೆಚ್ಚದಲ್ಲಿ ತಂತ್ರಜ್ಞಾನ ಆಧಾರಿತ ಸೌಲಭ್ಯ ಒದಗಿಸಲಾಗಿದೆ. 2,028 ಜಿಪಿಎಸ್ ಆಧರಿತ ಬಾಡಿ ಕ್ಯಾಮೆರಾ ಒದಗಿಸಲಾಗುತ್ತಿದೆ ಎಂದರು. ಈ ಸುಧಾರಿತ ಕ್ಯಾಮೆರಾಗಳು ವಾಹನಗಳ ನಿಯಮ ಉಲ್ಲಂಘನೆ ಮತ್ತು ಕಳುವಾದ ವಾಹನಗಳ ಬಗ್ಗೆ ಮಾಹಿತಿ ನೀಡುತ್ತದೆ. ಸಂಚರಿಸುವಾಗ ನಿಯಮ ಉಲ್ಲಂಘಿಸುವ ವಾಹನಗಳನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ ಎಂದರು.

ಇತರ ವಾಹನಗಳನ್ನು ಅಡ್ಡಗಟ್ಟುವುದು, ವಿನಾಕಾರಣ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುವುದನ್ನು ನಿಯಂತ್ರಿಸಲು ಇದು ಸಹಕರಿಸುತ್ತದೆ. ಹಿಂದೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಯೋಜನೆ ರೂಪಿಸಿದ್ದರು. ಇದೀಗ ಅವರೇ ಮುಖ್ಯಮಂತ್ರಿಯಾಗಿ ಈ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ನುಡಿದರು.

ಇದನ್ನೂ ಓದಿ: Karnataka Covid Update: 707 ಮಂದಿಗೆ ಸೋಕು, 8223 ಸಕ್ರಿಯ ಪ್ರಕರಣಗಳು ಇದನ್ನೂ ಓದಿ: ಬೆಂಗಳೂರು: ಹೆಬ್ಬಗೋಡಿ ನಗರಸಭೆ ಬಿಜೆಪಿ ಪಾಲಿಗೆ, ಕಾಂಗ್ರೆಸ್​ಗೆ ಜಿಗಣಿ, ಬಿಜೆಪಿಗೆ ಚಂದಾಪುರ ಪುರಸಭೆ

Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ