AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್

​​ಬೆಂಗಳೂರು ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Aug 02, 2023 | 1:33 PM

Share

ಬೆಂಗಳೂರು: ಸಂಚಾರಿ ನಿಯಮ ಪಾಲಿಸುವಂತೆ ಟ್ರಾಫಿಕ್​ ಪೊಲೀಸರು (Traffic Police) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಬೆಂಗಳೂರು (Bengaluru) ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ (Digital) ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ. ಹೌದು ಡಿಜಿಟಲೀಕರಣಗೊಂಡು ಕ್ಯಾಷ್​ ಲೆಸ್​ ದುನಿಯಾ ಆರಂಭವಾಗಿದ್ದು, ಜನರು ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಎಲ್ಲವೂ ಫೋನ್​ಪೇ, ಗೂಗಲ್​ ಪೇ, ಡೆಬಿಟ್​ ಮತ್ತು ಕ್ರೆಡಿಟ್​ ಕಾರ್ಡ್​​​.

ಹೀಗಾಗಿ ಸಂಚಾರ ಪೊಲೀಸರು ಕೂಡ ಡಿಜಿಟಲೀಕರಣದತ್ತ ವಾಲುತ್ತಿದ್ದಾರೆ. ಟ್ರಾಫಿಕ್ ಫೈನ್​ ಅನ್ನು ಡಿಜಿಟಲ್​​ ಮೂಲಕವೂ ಪಡೆಯಲಿದ್ದಾರೆ. ಹೌದು ಎಲ್ಲಾ ಮಾದರಿಯಲ್ಲೂ ದಂಡ ಕಲೆಕ್ಟ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದು, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್​​ನಲ್ಲೂ ದಂಡ ಸ್ವೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಮೂಲಗಳು ಟಿವಿ9 ಡಿಜಿಟಲ್​​ಗೆ ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಟ್ರಾಫಿಕ್ ಸಮಸ್ಯೆ; ಕಾರಣ ಗುರುತು ಮಾಡಿದ ಸಿಟಿ ಟ್ರಾಫಿಕ್ ಪೊಲೀಸರು

ಈ ಹಿನ್ನೆಲೆ ಸಂಚಾರ ಪೊಲೀಸ್​ ಇಲಾಖೆ ಭಾರತ್ ಪೇ ಜೊತೆ ಕೈ ಜೋಡಿಸಲು ಮುಂದಾಗಿದೆ ಎಂಬ ಅಂಶ ತಿಳಿದುಬಂದಿದೆ. ಇದರಿಂದ ಇನ್ಮುಂದೆ ಕ್ಯಾಶ್ ಇಲ್ಲ, ಪೆಟಿಎಂ ಇಲ್ಲ ಅಂತ ಸಬೂಬು ಹೇಳುವ ಹಾಗೆ ಇಲ್ಲ. ಈ ಹೊಸ ಯೋಜನೆಯನ್ನು ಸಂಚಾರಿ ಪೊಲೀಸರು ಶೀಘ್ರದಲ್ಲೇ ಜಾರಿ ಮಾಡಲು ಚಿಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:30 pm, Wed, 2 August 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ