Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್

​​ಬೆಂಗಳೂರು ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Aug 02, 2023 | 1:33 PM

ಬೆಂಗಳೂರು: ಸಂಚಾರಿ ನಿಯಮ ಪಾಲಿಸುವಂತೆ ಟ್ರಾಫಿಕ್​ ಪೊಲೀಸರು (Traffic Police) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಬೆಂಗಳೂರು (Bengaluru) ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ (Digital) ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ. ಹೌದು ಡಿಜಿಟಲೀಕರಣಗೊಂಡು ಕ್ಯಾಷ್​ ಲೆಸ್​ ದುನಿಯಾ ಆರಂಭವಾಗಿದ್ದು, ಜನರು ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಎಲ್ಲವೂ ಫೋನ್​ಪೇ, ಗೂಗಲ್​ ಪೇ, ಡೆಬಿಟ್​ ಮತ್ತು ಕ್ರೆಡಿಟ್​ ಕಾರ್ಡ್​​​.

ಹೀಗಾಗಿ ಸಂಚಾರ ಪೊಲೀಸರು ಕೂಡ ಡಿಜಿಟಲೀಕರಣದತ್ತ ವಾಲುತ್ತಿದ್ದಾರೆ. ಟ್ರಾಫಿಕ್ ಫೈನ್​ ಅನ್ನು ಡಿಜಿಟಲ್​​ ಮೂಲಕವೂ ಪಡೆಯಲಿದ್ದಾರೆ. ಹೌದು ಎಲ್ಲಾ ಮಾದರಿಯಲ್ಲೂ ದಂಡ ಕಲೆಕ್ಟ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದು, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್​​ನಲ್ಲೂ ದಂಡ ಸ್ವೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಮೂಲಗಳು ಟಿವಿ9 ಡಿಜಿಟಲ್​​ಗೆ ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಟ್ರಾಫಿಕ್ ಸಮಸ್ಯೆ; ಕಾರಣ ಗುರುತು ಮಾಡಿದ ಸಿಟಿ ಟ್ರಾಫಿಕ್ ಪೊಲೀಸರು

ಈ ಹಿನ್ನೆಲೆ ಸಂಚಾರ ಪೊಲೀಸ್​ ಇಲಾಖೆ ಭಾರತ್ ಪೇ ಜೊತೆ ಕೈ ಜೋಡಿಸಲು ಮುಂದಾಗಿದೆ ಎಂಬ ಅಂಶ ತಿಳಿದುಬಂದಿದೆ. ಇದರಿಂದ ಇನ್ಮುಂದೆ ಕ್ಯಾಶ್ ಇಲ್ಲ, ಪೆಟಿಎಂ ಇಲ್ಲ ಅಂತ ಸಬೂಬು ಹೇಳುವ ಹಾಗೆ ಇಲ್ಲ. ಈ ಹೊಸ ಯೋಜನೆಯನ್ನು ಸಂಚಾರಿ ಪೊಲೀಸರು ಶೀಘ್ರದಲ್ಲೇ ಜಾರಿ ಮಾಡಲು ಚಿಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:30 pm, Wed, 2 August 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ