AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್

​​ಬೆಂಗಳೂರು ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್
ಸಾಂದರ್ಭಿಕ ಚಿತ್ರ
Jagadisha B
| Updated By: ವಿವೇಕ ಬಿರಾದಾರ|

Updated on:Aug 02, 2023 | 1:33 PM

Share

ಬೆಂಗಳೂರು: ಸಂಚಾರಿ ನಿಯಮ ಪಾಲಿಸುವಂತೆ ಟ್ರಾಫಿಕ್​ ಪೊಲೀಸರು (Traffic Police) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಬೆಂಗಳೂರು (Bengaluru) ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ (Digital) ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ. ಹೌದು ಡಿಜಿಟಲೀಕರಣಗೊಂಡು ಕ್ಯಾಷ್​ ಲೆಸ್​ ದುನಿಯಾ ಆರಂಭವಾಗಿದ್ದು, ಜನರು ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಎಲ್ಲವೂ ಫೋನ್​ಪೇ, ಗೂಗಲ್​ ಪೇ, ಡೆಬಿಟ್​ ಮತ್ತು ಕ್ರೆಡಿಟ್​ ಕಾರ್ಡ್​​​.

ಹೀಗಾಗಿ ಸಂಚಾರ ಪೊಲೀಸರು ಕೂಡ ಡಿಜಿಟಲೀಕರಣದತ್ತ ವಾಲುತ್ತಿದ್ದಾರೆ. ಟ್ರಾಫಿಕ್ ಫೈನ್​ ಅನ್ನು ಡಿಜಿಟಲ್​​ ಮೂಲಕವೂ ಪಡೆಯಲಿದ್ದಾರೆ. ಹೌದು ಎಲ್ಲಾ ಮಾದರಿಯಲ್ಲೂ ದಂಡ ಕಲೆಕ್ಟ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದು, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್​​ನಲ್ಲೂ ದಂಡ ಸ್ವೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಮೂಲಗಳು ಟಿವಿ9 ಡಿಜಿಟಲ್​​ಗೆ ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಟ್ರಾಫಿಕ್ ಸಮಸ್ಯೆ; ಕಾರಣ ಗುರುತು ಮಾಡಿದ ಸಿಟಿ ಟ್ರಾಫಿಕ್ ಪೊಲೀಸರು

ಈ ಹಿನ್ನೆಲೆ ಸಂಚಾರ ಪೊಲೀಸ್​ ಇಲಾಖೆ ಭಾರತ್ ಪೇ ಜೊತೆ ಕೈ ಜೋಡಿಸಲು ಮುಂದಾಗಿದೆ ಎಂಬ ಅಂಶ ತಿಳಿದುಬಂದಿದೆ. ಇದರಿಂದ ಇನ್ಮುಂದೆ ಕ್ಯಾಶ್ ಇಲ್ಲ, ಪೆಟಿಎಂ ಇಲ್ಲ ಅಂತ ಸಬೂಬು ಹೇಳುವ ಹಾಗೆ ಇಲ್ಲ. ಈ ಹೊಸ ಯೋಜನೆಯನ್ನು ಸಂಚಾರಿ ಪೊಲೀಸರು ಶೀಘ್ರದಲ್ಲೇ ಜಾರಿ ಮಾಡಲು ಚಿಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:30 pm, Wed, 2 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ