AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ: ಅವರು ಈ ತಪ್ಪು ಮಾಡಿದ್ರೆ ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಸ್ನೇಹಿತರು, ಪರಿಚಿತರು ನಿಮ್ಮ ಬೈಕ್ ಅಥವಾ ಕಾರು ಕೊಡಿ ಎಂದು ಕೇಳಿದರೆಂದು ಹಿಂದೆಮುಂದೆ ಯೋಚಿಸದೆ ಮುಲಾಜಿಗೆ ಬಿದ್ದು ಕೊಡುವ ಮುನ್ನ ಎಚ್ಚರ. ಬೆಂಗಳೂರು ಟ್ರಾಫಿಕ್ ಪೊಲೀಸರು ಕೆಲವೊಂದು ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಅದೊಂದು ತಪ್ಪು ಮಾಡಿ ಸಿಕ್ಕಿಬಿದ್ದರೆ ಯಾರು ವಾಹನ ಚಲಾಯಿಸುತ್ತಿದ್ದರೋ ಅವರ ಮೇಲೆ ಮಾತ್ರವಲ್ಲದೆ, ವಾಹನ ಮಾಲೀಕರ ಮೇಲೂ ಎಫ್​ಐಆರ್ ದಾಖಲಿಸುತ್ತಿದ್ದಾರೆ.

ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ: ಅವರು ಈ ತಪ್ಪು ಮಾಡಿದ್ರೆ ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್
ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ: ಅವರು ಈ ತಪ್ಪು ಮಾಡಿದ್ರೆ ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್
ರಾಚಪ್ಪಾಜಿ ನಾಯ್ಕ್
| Updated By: Ganapathi Sharma|

Updated on:Nov 20, 2024 | 8:08 AM

Share

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್ (ಚಾಲನಾ ಪರವಾನಗಿ) ಇಲ್ಲದೇ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ ಕಂಟಕ ಎದುರಾಗಿದೆ. ಇನ್ಮುಂದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು ಖಾಕಿ ಕೈಗೆ ಸಿಕ್ಕರೆ ಎಫ್ಐಆರ್ ದಾಖಲಾಗುವದು ಖಚಿತವಾಗಿದೆ.

ಚಾಲಕ ಮಾತ್ರವಲ್ಲ, ಮಾಲೀಕನ ಮೇಲೂ ಕೇಸ್

ಬೆಂಗಳೂರು ನಗರದಲ್ಲಿ ಓಡಾಡುತ್ತಿರುವ ಕೋಟ್ಯಂತರ ವಾಹನ ಚಾಲಕರಲ್ಲಿ ಹಲವರ ಬಳಿ ಡ್ರೈವಿಂಗ್ ಲೈಸನ್ಸ್ ಇರುವುದೇ ಇಲ್ಲ. ಹಾಗೆಯೇ ಸುಮ್ಮನೇ ವಾಹನಗಳನ್ನು ತೆಗೆದುಕೊಂಡು ಸುತ್ತಾಡುತ್ತಿರುತ್ತಾರೆ. ಅಂಥವರಲ್ಲಿ ಕೆಲವರು ಡ್ರಂಕ್ ಆ್ಯಂಡ್ ಡ್ರೈವ್ ಮಾಡುತ್ತಿರುತ್ತಾರೆ‌. ಹೀಗೆ ಕುಡಿದು ವಾಹನ ಚಾಲನೆ ಮಾಡುವುದರಿಂದಾಗಿ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಷ್ಟು ದಿನ ಡ್ರಂಕ್ ಆ್ಯಂಡ್ ಡ್ರೈವ್​ಗೆ ದಂಡ ಮಾತ್ರ ವಿಧಿಸಲಾಗುತ್ತಿತ್ತು. ಆದರೆ, ಈಗ ಕುಡಿದು ವಾಹನ ಚಾಲನೆ ಮಾಡುವವರ ಬಳಿ ಡ್ರೈವಿಂಗ್ ಲೈಸನ್ಸ್ ಇಲ್ಲದೇ ಹೋದರೆ ಎಫ್ಐಆರ್ ದಾಖಲಿಸಿ ಕೋರ್ಟ್​​​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್​ಗಾಗಿ ನಿಲ್ಲಬೇಕಿಲ್ಲ ಕ್ಯೂ: ನಿಂತಿದ್ದಲ್ಲೇ ಸಿಗಲಿದೆ ಟಿಕೆಟ್!

ಕೇವಲ ವಾಹನ ಚಾಲನೆ ಮಾಡುವವರಿಗೆ ಮಾತ್ರ ಈ ಶಿಕ್ಷೆಯಲ್ಲ. ವಾಹನದ ಆರ್​​ಸಿ ಯಾರ ಹೆಸರಲ್ಲಿ‌ ಇದೆಯೋ ಅವರ ಮೇಲೂ ಕೇಸ್ ಹಾಕಲಾಗುತ್ತಿದೆ. ಸದ್ಯ ಈ ಪ್ರಕ್ರಿಯೆ ಬೆಂಗಳೂರಲ್ಲಿ ಶುರುವಾಗಿದ್ದು, ಪ್ರತಿ ದಿನ ಹತ್ತಾರು ಎಫ್ಐಆರ್ ದಾಖಲಾಗುತ್ತಿವೆ.

ಹೀಗಾಗಿ ವಾಹನ‌ ಮಾಲೀಕರು ಹುಷಾರಾಗಿಲ್ಲದಿದ್ದರೆ ಕಷ್ಟವಿದೆ. ಸ್ನೇಹಿತರು, ಸಂಬಂಧಿಕರು, ಪರಿಚಯದವರು ಕೇಳಿದರೆಂದು ಹಿಂದೆಮುಂದೆ ವಿಚಾರಿಸದೆ ವಾಹನ ಕೊಟ್ಟರೆ ನಾಳೆ ಕೋರ್ಟ್​ಗೆ ಅಲೆಯಬೇಕಾಗಬಹುದು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Wed, 20 November 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್