AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಭೇಟಿ ಕಾರಣ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ; ವಿವರ ಇಲ್ಲಿದೆ

ಅಮಿತ್ ಶಾ ಭೇಟಿ ನೀಡುತ್ತಿರುವ ಕಾರಣ ಬೆಂಗಳೂರಿನ ಕೆಲವು ಮಾರ್ಗಗಳಲ್ಲಿ ಶುಕ್ರವಾರ ಸಂಚಾರಕ್ಕೆ ಅಡಚಣೆಯಾಗಲಿದೆ. ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳು ಯಾವುವು ಎಂಬ ವಿವರ ಇಲ್ಲಿದೆ.

ಅಮಿತ್ ಶಾ ಭೇಟಿ ಕಾರಣ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ; ವಿವರ ಇಲ್ಲಿದೆ
ಅಮಿತ್ ಶಾImage Credit source: outlookindia.com
Follow us
Ganapathi Sharma
|

Updated on:Mar 23, 2023 | 7:05 PM

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು (ಮಾರ್ಚ್ 23) ರಾತ್ರಿ ಬೆಂಗಳೂರಿಗೆ (Bengaluru) ಆಗಮಿಸಲಿದ್ದು, ಚುನಾವಣಾ ಪ್ರಚಾರವೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶುಕ್ರವಾರ ಭಾಗವಹಿಸಲಿದ್ದಾರೆ. ಹೀಗಾಗಿ ಕೆಲವು ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ಕೆಲವು ಮಾರ್ಗಗಳಲ್ಲಿ ನಿರ್ದಿಷ್ಟ ಅವಧಿಗೆ ವಾನಹ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಗಮನ ಹರಿಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಪ್ರಕಟಣೆ ಹೊರಡಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಈ ಕೆಳಗೆ ಉಲ್ಲೇಖಿಸಿರುವ ಮಾರ್ಗಗಳಲ್ಲಿ ಸಂಚರಿಸದಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

  • ಹಳೆ ವಿಮಾನ ನಿಲ್ದಾಣ ರಸ್ತೆ
  • ಮೈಸೂರು ರಸ್ತೆ
  • ಎನ್​ಆರ್ ರಸ್ತೆ
  • ನೃಪತುಂಗ ರಸ್ತೆ
  • ಶೇಷಾದ್ರಿ ರಸ್ತೆ
  • ಅರಮನೆ ರಸ್ತೆ
  • ರೇಸ್​ಕೋರ್ಸ್ ರಸ್ತೆ
  • ಕೆಂಗೇರಿಯಿಂದ ಕೊಮ್ಮಘಟ್ಟ ರಸ್ತೆ

ಕೆಲವು ರಸ್ತೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 4ರ ವರೆಗೆ ಸಂಚಾರ ನಿರ್ಬಂಧ

ಇನ್ನು ಕೆಲವು ರಸ್ತೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 4ರ ವರೆಗೆ ಲಘು, ಮಧ್ಯಮ ಹಾಗೂ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ರಸ್ತೆಗಳ ವಿವರ ಹೀಗಿದೆ;

  • ಟೌನ್​ಹಾಲ್​​ನಿಂದ ಎನ್​ಆರ್ ರಸ್ತೆ, ಮೈಸೂರು ರಸ್ತೆ ಕಡೆಗೆ
  • ನಾಯಂಡಹಳ್ಳಿಯಿಂದ ನಗರದ ಕಡೆಗೆ ಮತ್ತು ಕೆಂಗೇರಿ ಕಡೆಗೆ
  • ಕುಂಬಳಗೋಡಿನಿಂದ ಕೆಂಗೇರಿ (ನಗರದ ಕಡೆಗೆ)

ಪರ್ಯಾಯ ಮಾರ್ಗಗಳು ಹೀಗಿವೆ

  • ಮೈಸೂರು ರಸ್ತೆ ಕಡೆಗೆ ತೆರಳಲು ಸರಕು ಸಾಗಣೆ ವಾಹನಗಳು ಎನ್​ಆರ್ ರಸ್ತೆ ಬದಲಾಗಿ ಲಾಲ್​ಬಾಗ್ ರಸ್ತೆ ಮೂಲಕ ಹೊಸೂರು ರಸ್ತೆ ನೈಸ್​ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.
  • ನಾಯಂಡಹಳ್ಳಿ ಜಂಕ್ಷನ್​ನಿಂದ ನಗರದತ್ತ ತೆರಳುವ ಸರಕು ಸಾಗಣೆ ವಾಹನಗಳು ನಾಗರಭಾವಿ ಹಾಗೂ ಸುಮನಹಳ್ಳಿ ರಸ್ತೆ ಮೂಲಕ ಸಾಗುವಂತೆ ಸೂಚಿಸಲಾಗಿದೆ.
  • ನಗರದಿಂದ ಕುಂಬಳಗೋಡು ಮತ್ತು ಕೆಂಗೇರಿ ಕಡೆಗೆ ಸಾಗುವ ಸರಕು ಸಾಗಣೆ ವಾಹನಗಳು ನೈಸ್ ರಸ್ತೆ ಮೂಲಕ ಸಂಚರಿಸಬಹುದು ಎಂದು ಸಲಹೆ ನೀಡಲಾಗಿದೆ.

ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಆ ನಂತರ 26ರಂದು ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Thu, 23 March 23

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ