AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್​ ಟ್ರಾಫಿಕ್ ದಟ್ಟಣೆಯಲ್ಲಿ ಸಿಲುಕದಿರಲು ಹೊಸ ಮಾರ್ಗ: ಸಂಚಾರಿ ಪೊಲೀಸರಿಂದ ನೂತನ ಆ್ಯಪ್ ಸಿದ್ಧತೆ

ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಇಡೀ ವರ್ಡ್ಗೆ ಫೇವಸ್. ಕಿಲೋ ಮೀಟರ್ ಗಟ್ಟಲೇ ಜಾಮ್. ಗಟ್ಟೆಗಟ್ಟಲೇ ಟ್ರಾಫಿಕ್ ಗೆ ರಾಜಧಾನಿಯ ಜನ ಹೈರಾಣಗಿದ್ದಾರೆ.‌ ಕಾರು, ಬೈಕ್, ಬಸ್​ಗಳು ಮಾತ್ರವಲ್ಲದೇ ಆ್ಯಂಬುಲೆನ್ಸ್​ಗಳು ಜಾಮ್ ನಲ್ಲಿ ಸಿಲುಕಿ ರೋಗಿಗಳು ಪರದಾಡ್ತಿದ್ದಾರೆ.‌ ಸರಿಯಾದ ಸಮಯಕ್ಕೆ ಆಸ್ಪತ್ರೆ ತಲುಪಲಾಗದೇ ಜೀವವೂ ಹೋಗ್ತಿದೆ. ಈ ಸಮಸ್ಯೆಗೆ ಮುಕ್ತಿ ಹಾಡಲು ಟ್ರಾಫಿಕ್ ಪೊಲೀಸರು ಭರ್ಜರಿ ಪ್ಲಾನ್ ಮಾಡಿದ್ದಾರೆ. ಆ್ಯಂಬುಲೆನ್ಸ್ ಗಳ ಸುಗಮ ಸಂಚಾರಕ್ಕಾಗಿಯೇ ಪ್ರತ್ಯೇಕ ಆ್ಯಪ್ ಸಿದ್ಧಪಡಿಸ್ತಿದ್ದಾರೆ.

ಆ್ಯಂಬುಲೆನ್ಸ್​ ಟ್ರಾಫಿಕ್ ದಟ್ಟಣೆಯಲ್ಲಿ ಸಿಲುಕದಿರಲು ಹೊಸ ಮಾರ್ಗ: ಸಂಚಾರಿ ಪೊಲೀಸರಿಂದ ನೂತನ ಆ್ಯಪ್ ಸಿದ್ಧತೆ
ಟ್ರಾಫಿಕ್​ನಲ್ಲಿಸಿಲುಕಿರುವ ಆ್ಯಂಬುಲೆನ್ಸ್
ಕಿರಣ್​ ಸೂರ್ಯ
| Edited By: |

Updated on: Dec 12, 2023 | 7:26 AM

Share

ಬೆಂಗಳೂರು, ಡಿ.12: ಆ್ಯಂಬುಲೆನ್ಸ್​ಗಳು (Ambulance) ಅದೆಷ್ಟೋ ಜನರ ಪಾಲಿಗೆ ಮರುಜನ್ಮ ನೀಡಿದೆ. ಆ್ಯಂಬುಲೆನ್ಸ್ ಚಾಲಕರು ಪರರ ಪ್ರಾಣಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಡ್ತಿದ್ದಾರೆ. ಉಸಿರು ಹೋಗುವ ಜೀವಗಳಿಗೆ ಮರುಜನ್ಮ ಸಿಗ್ತಿದೆ. ಆದರೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗಿರುವ ಟ್ರಾಫಿಕ್ ರೋಗಿಗಳ ಜೀವಕ್ಕೆ ಆಪತ್ತು ತರ್ತಿದೆ (Bengaluru Traffic). ಸೈರನ್​​​ ಎಷ್ಟೇ ಕೂಗಿದ್ರು ಟ್ರಾಫಿಕ್ ಜಾಮ್ ಮಾತ್ರ ಕಮ್ಮಿಯಾಗ್ತಿಲ್ಲ. ಹೀಗಾಗಿ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಬೆಂಗಳೂರು ಸಂಚಾರ ಪೊಲೀಸರು ಹೊಸ ಉಪಾಯ ಕಂಡುಕೊಳ್ತಿದ್ದಾರೆ. ನೂತನ ಆ್ಯಪ್‌ ಸಿದ್ಧಪಡಿಸುತ್ತಿದ್ದಾರೆ ಇದಕ್ಕೆ ಚಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

ಆ್ಯಂಬುಲೆನ್ಸ್ ಸುಗಮ‌ ಸಂಚಾರಕ್ಕೆ ಆ್ಯಪ್

  • ಮೊದಲು ಆ್ಯಂಬುಲೆನ್ಸ್ ಎಲ್ಲಿಂದ ಎಲ್ಲಿಗೆ ಹೋಗುತ್ತೆ ಅಂತ ಮಾಹಿತಿ ಅಪ್ಲೋಡ್
  • ಅಪ್ಲೋಡ್ ಆದ ಮಾಹಿತಿ ಸಂಚಾರ ನಿರ್ವಹಣ ಕೇಂದ್ರ ಸಿಬ್ಬಂದಿ ಪರಿಶೀಲನೆ
  • ಪರಿಶೀಲಿಸಿ ಸೂಕ್ತ ರಸ್ತೆ ಸೂಚಿಸುವ ವ್ಯವಸ್ಥೆ ಮಾಡಲಾಗುತ್ತದೆ
  • ಒಂದೇ ಸಿಗ್ನಲ್‌ನಲ್ಲಿ 60 ಸೆಕೆಂಡ್‌ಗೂ ಹೆಚ್ಚು ಕಾಲ ನಿಂತಿದ್ದರೆ ಅಲರ್ಟ್ ಮೆಸೇಜ್
  • ಮುಂದಿನ ಸಿಗ್ನಲ್‌ಗೆ ಮೊದಲೇ ಮಾಹಿತಿ ನೀಡಿ ದಟ್ಟಣೆ ಕಡಿಮೆ ಮಾಡಿಸಲಾಗುತ್ತೆ

    ಮೊದಲು ಆ್ಯಂಬುಲೆನ್ಸ್‌ಗಳು ಯಾವ ಸ್ಥಳದಿಂದ ಯಾವ ಸ್ಥಳಕ್ಕೆ ಹೋಗಬೇಕು ಎಂಬ ಮಾಹಿತಿಯನ್ನು ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಿಬೇಕು. ಅದನ್ನು ಸಂಚಾರ ನಿರ್ವಹಣ ಕೇಂದ್ರ ಸಿಬ್ಬಂದಿ ಪರಿಶೀಲಿಸುತ್ತಾರೆ. ಅವರ ಟ್ರಾಫಿಕ್ ಇಲ್ಲದ ರಸ್ತೆಯನ್ನು ಸೂಚಿಸುತ್ತಾರೆ. ಹಾಗೆಯೇ ಒಂದೇ ಸಿಗ್ನಲ್‌ನಲ್ಲಿ 60 ಸೆಕೆಂಡ್‌ಗೂ ಹೆಚ್ಚು ಕಾಲ ನಿಂತಿದ್ದರೆ. ಆ್ಯಂಬುಲೆನ್ಸ್‌ ಸಂಚರಿಸುವ ಮುಂದಿನ ಸಿಗ್ನಲ್‌ಗೆ ಮೊದಲೇ ಮಾಹಿತಿ ನೀಡಲಾಗುತ್ತೆ. ಅಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತೆ.

    ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯ ಕಾಮಗಾರಿಗಳ ಕುರಿತ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

    ಸಿಲಿಕಾನ್ ಸಿಟಿಯಲ್ಲಿ ದಿನಕ್ಕೆ ಮೂರು ಸಾವಿರಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಓಡಾಟ ಮಾಡ್ತಿವೆ. ಆದರೆ ನಗರದಲ್ಲಿ ಅಧಿಕವಾಗ್ತಿರುವ ವಾಹನಗಳ ಸಂಖ್ಯೆಯಿಂದ ಜಾಮ್ ನಲ್ಲಿ ಸಿಲುಕಿ ಎಷ್ಟೋ ರೋಗಿಗಳಿಗೆ ತೊಂದರೆಯಾಗ್ತಿದೆ. ಹೀಗಾಗಿ ಆ್ಯಂಬುಲೆನ್ಸ್ ಗಳ ಸುಗಮ ಸಂಚಾರಕ್ಕೆ ನೂತನ ಆ್ಯಪ್‌ ಸಿದ್ಧಪಡಿಸಲಾಗ್ತಿದೆ. ಈ ಬಗ್ಗೆ ಆ್ಯಪ್‌ ಡೆವಲಪರ್‌ಗಳ ಜೊತೆಯೂ ಒಂದು ಸುತ್ತಿನ ಚರ್ಚೆ ಯಾಗಿದೆ. ಸದ್ಯದಲ್ಲಿ ಆ್ಯಪ್ ಲಾಂಚ್ ಆಗಲಿದೆ ಎಂದು ಜಂಟಿ ಪೋಲಿಸ್ ಆಯುಕ್ತ ಅನುಚೇತ್ ತಿಳಿಸಿದ್ದಾರೆ.

    ಒಟ್ನಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಡ್ತಿದ್ದ ಆ್ಯಂಬುಲೆನ್ಸ್ ಗಳ ಸಮಸ್ಯೆಗೆ ಮುಕ್ತಿ ಹಾಡಲು ಹೊಸ ಆ್ಯಪ್ ಏನೋ ಸಿದ್ಧವಾಗ್ತಿದೆ. ಆದರೆ ಹೆಚ್ಚುತ್ತಿರುವ ವಾಹನಗಳಿಂದ ಆ್ಯಪ್ ನಿಂದ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಗುತ್ತಾ, ಅಥವಾ ಅದೇ ಪರಿಸ್ಥಿತಿ ಇರುತ್ತೋ ಎಂದು ಕಾದುನೋಡಬೇಕಿದೆ.

    ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ