AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic Guidelines: ಹೊಸ ವರ್ಷ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

Bengaluru New Year Celebration ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಜನ ಸಜ್ಜಾಗಿದ್ದಾರೆ. ಇದರಿಂದ ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇನ್ನು ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್​ ನಿಷೇಧಿಸಲಾಗಿದೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳಲ್ಲಿ ನಿರ್ಬಂಧಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Bangalore Traffic Guidelines: ಹೊಸ ವರ್ಷ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರು ಸಿಟಿ ಪೊಲೀಸ್
TV9 Web
| Edited By: |

Updated on: Dec 29, 2022 | 6:54 PM

Share

ಬೆಂಗಳೂರು: ಹೊಸ ವರ್ಷವನ್ನು (New Year) ಬರಮಾಡಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಜನವರಿ 1ರ ಹಿಂದಿನ ದಿನದ ಸಂಜೆಯಿಂದ ಮಧ್ಯರಾತ್ರಿ ವರೆಗೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ರಸ್ತೆಗಳು ಗಿಜಿಗುಡುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಮುಂಜಾತ್ರಾ ಕ್ರಮವಾಗಿ ಪೊಲೀಸರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ (Parking) ನಿಷೇಧಿಸಿ ಸುತ್ತೋಲೆ ಹೊರಡಿಸಿದ್ದಾರೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ (Bengaluru Traffic) ಹಾಗೂ ಪಾರ್ಕಿಂಗ್ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರತಿ ವರ್ಷ ಜನ ಬೆಂಗಳೂರಿನ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೈಂಟ್ ಮಾರ್ಕ್ಸ್ ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಸೇರುವುದು ಸಾಮಾನ್ಯ. ಸಾರ್ವಜನಿಕರ ಭದ್ರತೆ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಪೊಲೀಸರು ಎಲ್ಲಾ ಖಾಸಗಿ ವಾಹನಗಳನ್ನು 31ನೇ ರಾತ್ರಿ 8 ಗಂಟೆಯಿಂದ 2023 ರ ಜನವರಿ 1 ರ ಮಧ್ಯರಾತ್ರಿ 1 ಗಂಟೆಯವರೆಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪೊಲೀಸ್ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಾಹನಗಳನ್ನು ಈ ರಸ್ತೆಗಳಲ್ಲಿ ನಿಷೇಧಿಸಲಾಗಿದೆ.

ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ?

1. ಎಂ ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಮೇಯೋ ಹಾಲ್ ನ ಹತ್ತಿರ ರೆಸಿಡೆನ್ಸಿ ರಸ್ತೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ .

2. ಬ್ರಿಗೇಡ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ

3. ಮ್ಯೂಸಿಯಂ ರಸ್ತೆಯವರೆಗೆ ಬ್ರಿಗೇಡ್ ರಸ್ತೆಯಲ್ಲಿ ಚರ್ಚ್ ಸ್ಟ್ರೀಟ್,

4. ಮ್ಯೂಸಿಯಂ ರಸ್ತೆಯಿಂದ MG ರೋಡ್​ನಿಂದ ಹಳೆ ಮದ್ರಾಸ್ ಬ್ಯಾಂಕ್ ರಸ್ತೆ.

5. ರೆಸ್ಟ್ ಹೌಸ್ ರಸ್ತೆಯ ಮ್ಯೂಸಿಯಂ ರೋಡ್​ನಿಂದ ಬ್ರಿಗೇಡ್ ರಸ್ತೆ

6. ರೆಸಿಡೆನ್ಸಿ ಕ್ರಾಸ್​ನಿಂದ ಎಂ ಜಿ ರಸ್ತೆಯವರೆಗೆ (ಶಂಕರ್​ನಾಗ ಥೇಟರ್ ಸಂಕ್ಷನ್).

ಈ ರಸ್ತೆಗಳಲ್ಲಿ ಪಾಕಿಂಗ್ ನಿಷೇಧ

ಈ ಕೆಳಗೆ ತಿಳಿಸಿರುವ ರಸ್ತೆಗಳಲ್ಲಿ ಪೊಲೀಸ್ ಮತ್ತು ಅಗತ್ಯ ಸೇವೆ ವಾಹನಗಳನ್ನು ಹೊರತುಪಡಿಸಿ ಬೇರೆಲ್ಲಾ ವಾಹನಗಳ ನಿಲುಗಡೆಗೆ ಸಹ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 3 ಗಂಟೆಯವರೆಗೆ ನಿಷೇಧಿಸಲಾಗಿದೆ.

1 ಎಂ ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ಸರ್ಕಲ್ ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

2 ಆರ್ಟ್ ಅಂಡ್ ಕ್ರಾಫ್ಟ್ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ ಬ್ರಿಗೇಡ್ ರಸ್ತೆಯಲ್ಲಿ

3 ಚರ್ಚ್ ಸ್ಟ್ರೀಟ್​ನ ಬ್ರಿಗೇಡ್ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರೋಡ್ ವರೆಗೆ

4 ಮ್ಯೂಸಿಯಂ ರಸ್ತೆಯವರೆಗೆ ರೆಸ್ಟ್ ಹೌಸ್ ರಸ್ತೆ

5 ಹಳೆ ಮದ್ರಾಸ್ ರಸ್ತೆಯವರೆಗೆ ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ