AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

German Chancellor: ಇಂದು(ಫೆ. 26) ಬೆಂಗಳೂರಿಗೆ ಜರ್ಮನಿ ಚಾನ್ಸಲರ್ ಭೇಟಿ, ನಗರದ ಹಲವೆಡೆ ವಾಹನಗಳ ಪಾಕಿಂಗ್ ನಿಷೇಧ

ಜರ್ಮನಿಯ ಚಾನ್ಸಲರ್ ಬೆಂಗಳೂರಿಗೆ ಆಗಮಿಸುತ್ತಿದ್ದರಿಂದ ಇಂದು (ಫೆಬ26) ನಗರದ ಹಲವೆಡೆ ಬೆಳಗ್ಗೆ 11ರಿಂದ ಸಂಜೆ 6ರವರೆಗೆ ರಸ್ತೆಯ ಎರಡು ಬದಿಗಳಲ್ಲಿ ಎಲ್ಲಾ ಬಗೆಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.

German Chancellor: ಇಂದು(ಫೆ. 26) ಬೆಂಗಳೂರಿಗೆ ಜರ್ಮನಿ ಚಾನ್ಸಲರ್ ಭೇಟಿ, ನಗರದ ಹಲವೆಡೆ ವಾಹನಗಳ ಪಾಕಿಂಗ್ ನಿಷೇಧ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 26, 2023 | 7:22 AM

Share

ಬೆಂಗಳೂರು: ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್(German Chancellor Olaf Scholz) ಅವರು ಇಂದು (ಫೆಬ್ರವರಿ 26) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬೆಳಗ್ಗೆ 11ರಿಂದ ಸಂಜೆ 6ರವರೆಗೆ ರಸ್ತೆಯ ಎರಡು ಬದಿಗಳಲ್ಲಿ ಎಲ್ಲಾ ಬಗೆಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ಮೂಲಕ​ ಮಾಹಿತಿ ನೀಡಿದ್ದು, ಸಾರ್ವಜನಿಕರು ಈ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ ಹಾಗೂ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಿದೆ. ಹಾಗಾದ್ರೆ,ನಗರದಲ್ಲಿ ಎಲ್ಲೆಲ್ಲಿ ರಸ್ತೆ ಬದಿ ಪಾರ್ಕಿಂಗ್​ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?

ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್​​, ಕಾವೇರಿ ಜಂಕ್ಷನ್​​, ರಮಣ ಮಹರ್ಷಿ ರಸ್ತೆ, ಇನ್​ಫೆಂಟ್ರಿ ರಸ್ತೆ, ಕಬ್ಬನ್​ ರಸ್ತೆ, ಹಳೇ ಏರ್​​ಪೋರ್ಟ್​ ರಸ್ತೆ, ವೈಟ್​​ಫೀಲ್ಡ್​​ ಮುಖ್ಯ ರಸ್ತೆ, ಔಟರ್ ರಿಂಗ್ ರೋಡ್​​​, ದೊಡ್ಡನೆಕುಂದಿ ರಸ್ತೆ, ರಾಜಭವನ, ಕ್ವೀನ್ಸ್​​ ರಸ್ತೆ, ಇಂದಿರಾ ನಗರ 100 ಫೀಟ್ ರಸ್ತೆ, ಎಂ.ಜಿ.ರೋಡ್​, ಹಳೇ ಮದ್ರಾಸ್ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್​​ ನಿಷೇಧ ಮಾಡಲಾಗಿದೆ.

ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಫೆಬ್ರುವರಿ 25ರಂದು ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಎರಡೂ ರಾಷ್ಟ್ರಗಳು ಬಹುಪಕ್ಷೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನಿಕಟವಾಗಿ ಕೆಲಸ ಮಾಡುತ್ತವೆ, ವಿಶೇಷವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಗಳಿಗಾಗಿ G4 ಶೃಂಗಸಭೆಯ ಭಾಗವಾಗಿ ಈ ಭೇಟಿ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

2011 ರಲ್ಲಿ ಉಭಯ ರಾಷ್ಟ್ರಗಳ ನಡುವಿನ ಅಂತರ-ಸರ್ಕಾರಿ ಸಮಾಲೋಚನೆ (ಐಜಿಸಿ) ಕಾರ್ಯವಿಧಾನವನ್ನು ಪ್ರಾರಂಭಿಸಿದ ನಂತರ ಇದೇ ಮೊದಲ ಬಾರಿಗೆ ಜರ್ಮನ್ ಚಾನ್ಸಲರ್ ಭಾರತಕ್ಕೆ ಭೇಟಿ ನೀಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ