AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

ಬೆಂಗಳೂರು ಸಂಚಾರ ಪೊಲೀಸರು, ಆರ್‌ಟಿಓ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್‌ಗಳ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. 19 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಆರು ಅಂಗಡಿಗಳಿಗೆ 50,000 ರೂ. ದಂಡ ವಿಧಿಸಲಾಗಿದೆ ಮತ್ತು ನೋಟೀಸ್ ಜಾರಿ ಮಾಡಲಾಗಿದೆ. ಕಳಪೆ ಹೆಲ್ಮೆಟ್ ಧರಿಸಿದ 38 ಬೈಕ್ ಸವಾರರಿಗೂ ದಂಡ ವಿಧಿಸಲಾಗಿದೆ. ಐಎಸ್ಐ ಮಾರ್ಕ್ ಇಲ್ಲದ ಅಥವಾ ಅರ್ಧ ಹೆಲ್ಮೆಟ್ ಧರಿಸುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂದು ಎಚ್ಚರಿಸಲಾಗಿದೆ.

ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ
ಹೆಲ್ಮೇಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
ವಿವೇಕ ಬಿರಾದಾರ
|

Updated on: Jul 05, 2025 | 4:10 PM

Share

ಬೆಂಗಳೂರು, ಜುಲೈ 05: ಶನಿವಾರ (ಜು.05) ಬೆಳ್ಳಂ ಬೆಳಿಗ್ಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದರು. ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ನಗರದ ಸಿದ್ಧಯ್ಯ ರಸ್ತೆ, ಕಲಾಸಿಪಾಳ್ಯ ರಸ್ತೆ, ಲಾಲ್ ಬಾಗ್ ರಸ್ತೆ, ಮಾಗಡಿ ರಸ್ತೆ, ಸುಮನಹಳ್ಳಿ, ವಿಜಯನಗರ, ಅಗ್ರಹಾರ ದಾಸರಹಳ್ಳಿ, ನಾಗರಭಾವಿ, ಔಟರ್ ರಿಂಗ್ ರಸ್ತೆ ಸೇರಿದಂತೆ ಒಟ್ಟು 19 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್​ ಮಾಡುತ್ತಿದ್ದ ಆರು ಅಂಗಡಿಗಳಿಗೆ ಮಾಪನ ಇಲಾಖೆ 50 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ದಿ ಲೀಗಲ್ ಮೆಟ್ರಾಲಜಿ ಕಾಯ್ದೆ (ಮಾಪನಶಾಸ್ತ್ರ ಕಾಯ್ದೆ) ಅಡಿ ನೋಟಿಸ್ ನೀಡಿದೆ. 13 ಅಂಗಡಿ ಮಾಲೀಕರಿಗೆ ಕೋರ್ಟ್​ನಲ್ಲಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಅಧಿಕಾರಿಗಳು ಕಳಪೆ ಹಾಗೂ ಅರ್ಧ ಹೆಲ್ಮೆಟ್​ಗಳನ್ನು ಜಪ್ತಿ ಮಾಡಿದರು.

ಇದನ್ನೂ ಓದಿ
Image
ಹಳದಿ ಲೈನ್ ಮೆಟ್ರೋ ಮತ್ತಷ್ಟು ವಿಳಂಬ: BMRCL​ಗೆ ತೇಜಸ್ವಿಸೂರ್ಯ ಪ್ರಶ್ನೆ
Image
ಕ್ಷುಲ್ಲಕ ಕಾರಣಕ್ಕೆ ಕಿರಿಕ್: ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ
Image
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!
Image
ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರಿಗೆ ಬವಣೆ: ಸರ್ಕಾರ ತೋರಬೇಕಿದೆ ಕರುಣೆ

ಬೈಕ್​ ಸವಾರರಿಗೂ ದಂಡ

ಕಳಪೆ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುತ್ತಿದ್ದವರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸಿದರು. 38 ಬೈಕ್ ಸವಾರರಿಗೆ ದಂಡ ವಿಧಿಸಿ, ಲೈಸೆನ್ಸ್ ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಭಾರತದಲ್ಲಿ, ಮೋಟಾರು ವಾಹನ ಕಾಯ್ದೆಯ ಪ್ರಕಾರ, ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ ಮತ್ತು ಅದು ಐಎಸ್​ಐ ಮಾರ್ಕ್ ಹೊಂದಿರಬೇಕು. ವಾಹನ ಸವಾರರು ಮತ್ತು ಹಿಂಬದಿ ಸವಾರರೂ ಇಬ್ಬರೂ ಪೂರ್ಣ ಹೆಲ್ಮೆಟ್ ಧರಿಸುವುದು ಖಡ್ಡಾಯವಾಗಿದೆ.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

ಅರ್ಧ ಹೆಲ್ಮೆಟ್​ಗಳನ್ನು ನಿಷೇಧಿಸಲಾಗಿದೆ.  ಅರ್ಧ ಹೆಲ್ಮೆಟ್​ಗಳು ತಲೆಗೆ ಪೂರ್ಣ ರಕ್ಷಣೆ ನೀಡುವುದಿಲ್ಲ, ಇದು ಅಪಘಾತದ ಸಮಯದಲ್ಲಿ ಗಂಭೀರ ಗಾಯಗಳಿಗೆ ಕಾರಣವಾಗಬಹುದು. ಐಎಸ್​ಐ ಮಾರ್ಕ್ ಇಲ್ಲದ ಅಥವಾ ಅರ್ಧ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಾಗುತ್ತದೆ.

ವರದಿ: ವಿಕಾಸ್​, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು