AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲನೆ ವೇಳೆ BMTC ಬಸ್​ ಚಾಲಕನಿಗೆ ಎದೆ ನೋವು, ಟ್ರಾಫಿಕ್​ ಪೊಲೀಸ್​ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಾಣ

ಬೆಂಗಳೂರಿನ ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆಯಲ್ಲಿ ಚಾಲನೆ ವೇಳೆಯೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಹಲಸೂರು ಸಂಚಾರಿ ಠಾಣೆ ಎಎಸ್ಐ ಆರ್.ರಘುಕುಮಾರ್ ಬಸ್​ ಬಳಿ ಹೋದಾಗ, ಚಾಲಕನ ಅವಸ್ಥೆ ಕಂಡಿದ್ದಾರೆ. ಮುಂದೇನಾಯ್ತು ಈ ಸುದ್ದಿ ಓದಿ.

ಚಾಲನೆ ವೇಳೆ BMTC ಬಸ್​ ಚಾಲಕನಿಗೆ ಎದೆ ನೋವು, ಟ್ರಾಫಿಕ್​ ಪೊಲೀಸ್​ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಾಣ
ಟ್ರಾಫಿಕ್ ಪೊಲೀಸ್​ ಪ್ರಸನ್ನ ಕುಮಾರ್, ASI ಆರ್.ರಘುಕುಮಾರ್, ಬಿಎಂಟಿಸಿ ಬಸ್​
Kiran Surya
| Edited By: |

Updated on: Sep 20, 2024 | 2:32 PM

Share

ಬೆಂಗಳೂರು, ಸೆಪ್ಟೆಂಬರ್​ 20: ಬೆಂಗಳೂರು ನಗರ ಸಂಚಾರಿ ಪೊಲೀಸರ (Bengaluru Traffic Police) ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಗುರುವಾರ ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆಯಲ್ಲಿ ಕೆಎ 51 AJ 6905 ನಂಬರ್​ನ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (BMTC Electric Bus) ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ.

ಎದೆ ನೋವಿನಿಂದ ಬಳಲುತ್ತಿದ್ದ ಚಾಲಕ ವೀರೇಶ್ ಕೂತ ಜಾಗದಲ್ಲೇ ಒಂದು ಕಡೆ ವಾಲಿದ್ದಾರೆ. ಹೀಗಾಗಿ ಬಸ್​ ನಿಧಾನವಾಗಿ ಚಲಿಸುತ್ತಿತ್ತು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಹಲಸೂರು ಸಂಚಾರಿ ಠಾಣೆ ಎಎಸ್ಐ ಆರ್.ರಘುಕುಮಾರ್ ಅನುಮಾನಗೊಂಡು ಬಸ್ ಬಳಿ ಬಂದು ನೋಡಿದಾಗ, ಚಾಲಕ ವಿರೇಶ್​ ಒಂದು ಕಡೆ ವಾಲಿದ್ದನ್ನು ಕಂಡಿದ್ದಾರೆ. ತಕ್ಷಣ ಸಿನಿಮೀಯ ರೀತಿ ಚಲಿಸುತ್ತಿದ್ದ ಬಸ್ ಹತ್ತಿದ್ದಾರೆ. ನಂತರ ಹ್ಯಾಂಡ್ ಬ್ರೇಕ್ ಹಾಕಿ ಬಸ್​ನ್ನು ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಸಾವಿರ ಗಡಿ ದಾಟಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್​​ ಸಂಖ್ಯೆ: ಕಡಿಮೆಯಾದ ವಾಯು ಮಾಲಿನ್ಯ ಪ್ರಮಾಣವೆಷ್ಟು ಗೊತ್ತಾ?

ಬಳಿಕ, ಆ್ಯಂಬುಲೆನ್ಸ್​ಗೂ ಕಾಯದೆ ಅಶೋಕ ನಗರ ಟ್ರಾಫಿಕ್ ಪೊಲೀಸ್​ ಪ್ರಸನ್ನ ಕುಮಾರ್ ಅವರ ಸಹಾಯದಿಂದ ಚಾಲಕ ವೀರೇಶ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಮತ್ತು ಚಾಲಕ ವಿರೇಶ್ ಅವರ ಪ್ರಾಣ ಉಳಿದಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ