AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲನೆ ವೇಳೆ BMTC ಬಸ್​ ಚಾಲಕನಿಗೆ ಎದೆ ನೋವು, ಟ್ರಾಫಿಕ್​ ಪೊಲೀಸ್​ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಾಣ

ಬೆಂಗಳೂರಿನ ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆಯಲ್ಲಿ ಚಾಲನೆ ವೇಳೆಯೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಹಲಸೂರು ಸಂಚಾರಿ ಠಾಣೆ ಎಎಸ್ಐ ಆರ್.ರಘುಕುಮಾರ್ ಬಸ್​ ಬಳಿ ಹೋದಾಗ, ಚಾಲಕನ ಅವಸ್ಥೆ ಕಂಡಿದ್ದಾರೆ. ಮುಂದೇನಾಯ್ತು ಈ ಸುದ್ದಿ ಓದಿ.

ಚಾಲನೆ ವೇಳೆ BMTC ಬಸ್​ ಚಾಲಕನಿಗೆ ಎದೆ ನೋವು, ಟ್ರಾಫಿಕ್​ ಪೊಲೀಸ್​ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಾಣ
ಟ್ರಾಫಿಕ್ ಪೊಲೀಸ್​ ಪ್ರಸನ್ನ ಕುಮಾರ್, ASI ಆರ್.ರಘುಕುಮಾರ್, ಬಿಎಂಟಿಸಿ ಬಸ್​
Kiran Surya
| Edited By: |

Updated on: Sep 20, 2024 | 2:32 PM

Share

ಬೆಂಗಳೂರು, ಸೆಪ್ಟೆಂಬರ್​ 20: ಬೆಂಗಳೂರು ನಗರ ಸಂಚಾರಿ ಪೊಲೀಸರ (Bengaluru Traffic Police) ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಗುರುವಾರ ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆಯಲ್ಲಿ ಕೆಎ 51 AJ 6905 ನಂಬರ್​ನ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (BMTC Electric Bus) ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ.

ಎದೆ ನೋವಿನಿಂದ ಬಳಲುತ್ತಿದ್ದ ಚಾಲಕ ವೀರೇಶ್ ಕೂತ ಜಾಗದಲ್ಲೇ ಒಂದು ಕಡೆ ವಾಲಿದ್ದಾರೆ. ಹೀಗಾಗಿ ಬಸ್​ ನಿಧಾನವಾಗಿ ಚಲಿಸುತ್ತಿತ್ತು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಹಲಸೂರು ಸಂಚಾರಿ ಠಾಣೆ ಎಎಸ್ಐ ಆರ್.ರಘುಕುಮಾರ್ ಅನುಮಾನಗೊಂಡು ಬಸ್ ಬಳಿ ಬಂದು ನೋಡಿದಾಗ, ಚಾಲಕ ವಿರೇಶ್​ ಒಂದು ಕಡೆ ವಾಲಿದ್ದನ್ನು ಕಂಡಿದ್ದಾರೆ. ತಕ್ಷಣ ಸಿನಿಮೀಯ ರೀತಿ ಚಲಿಸುತ್ತಿದ್ದ ಬಸ್ ಹತ್ತಿದ್ದಾರೆ. ನಂತರ ಹ್ಯಾಂಡ್ ಬ್ರೇಕ್ ಹಾಕಿ ಬಸ್​ನ್ನು ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಸಾವಿರ ಗಡಿ ದಾಟಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್​​ ಸಂಖ್ಯೆ: ಕಡಿಮೆಯಾದ ವಾಯು ಮಾಲಿನ್ಯ ಪ್ರಮಾಣವೆಷ್ಟು ಗೊತ್ತಾ?

ಬಳಿಕ, ಆ್ಯಂಬುಲೆನ್ಸ್​ಗೂ ಕಾಯದೆ ಅಶೋಕ ನಗರ ಟ್ರಾಫಿಕ್ ಪೊಲೀಸ್​ ಪ್ರಸನ್ನ ಕುಮಾರ್ ಅವರ ಸಹಾಯದಿಂದ ಚಾಲಕ ವೀರೇಶ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಮತ್ತು ಚಾಲಕ ವಿರೇಶ್ ಅವರ ಪ್ರಾಣ ಉಳಿದಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK