AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್​​ ಪೊಲೀಸ್: ಸಿಬ್ಬಂದಿ ದರ್ಪಕ್ಕೆ ನೆಟ್ಟಿಗರು ಆಕ್ರೋಶ

ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡುವ ಮೂಲಕ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ದರ್ಪ ಮೆರೆದ ವಿಡಿಯೋವೊಂದು ಸದ್ಯ ಭಾರೀ ವೈರಲ್​​ ಆಗುತ್ತಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿ ನಡೆ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಚಿತ ವರ್ತನೆ ತೋರಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್​​ ಪೊಲೀಸ್: ಸಿಬ್ಬಂದಿ ದರ್ಪಕ್ಕೆ ನೆಟ್ಟಿಗರು ಆಕ್ರೋಶ
ಬೈಕ್​​​ ಸವಾರನಿಗೆ ಹೊಡೆದ ಟ್ರಾಫಿಕ್​​ ಪೊಲೀಸ್
ಗಂಗಾಧರ​ ಬ. ಸಾಬೋಜಿ
|

Updated on:Oct 16, 2025 | 1:13 PM

Share

ಬೆಂಗಳೂರು, ಅಕ್ಟೋಬರ್​ 16: ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ (Traffic police) ಬೈಕ್​​ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ (slaps) ಮಾಡಿರುವಂತಹ ಘಟನೆಯೊಂದು ಸಿಲ್ಕ್ ಬೋರ್ಡ್ ಜಂಕ್ಷನ್​​ನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್​ ಆಗುತ್ತಿದೆ. ದರ್ಪ ತೋರಿದ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಡೆದದ್ದೇನು?

ವೈರಲ್​​ ಆದ ವಿಡಿಯೋ ಪ್ರಕಾರ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ಮತ್ತು ಸವಾರರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ನೋಡನೋಡುತ್ತಿದ್ದಂತೆ ಪೊಲೀಸ್​ ಸಿಬ್ಬಂದಿ ಸವಾರನಿಗೆ ಕಪಾಳಮೋಕ್ಷ ಮಾಡುತ್ತಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್​​ ಆಗಿರುವ ವಿಡಿಯೋ

ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ

ವೈರಲ್​​ ವಿಡಿಯೋ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದರೆ, ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಇದು ಸಂಪೂರ್ಣವಾಗಿ ಅಧಿಕಾರದ ದುರುಪಯೋಗವಾಗಿದೆ. ಈ ಘಟನೆಯು ಪೊಲೀಸ್ ಇಲಾಖೆ ಮೇಲಿನ ಹೊಣೆಗಾರಿಕೆ, ಶಿಸ್ತು ಮತ್ತು ಸಾರ್ವಜನಿಕ ನಂಬಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಬಸ್ ಕೆಟ್ಟು ನಿಂತಿದ್ದಕ್ಕೆ ಇಡೀ ಔಟರ್​ರಿಂಗ್ ರಸ್ತೆ ಫುಲ್​​ ಜಾಮ್!

ಪೀಕ್ ಸಮಯದಲ್ಲಿ ರಾಂಗ್​​ ರೂಟ್​ನಲ್ಲಿ ಬರುವ ಆಟೋ ಚಾಲಕರು, ಟ್ಯಾಂಕರ್‌ಗಳು ಮತ್ತು ಭಾರೀ ಗಾತ್ರದ ವಾಹನ ಸವಾರರ ವಿರುದ್ಧ ಅದೇ ಧೈರ್ಯವನ್ನು ತೋರಿಸಿ. ನಾವು ಕಠಿಣ ಕ್ರಮಕ್ಕಾಗಿ ಕಾಯುತ್ತಿದ್ದೇನೆ ಎಂದು ಮತ್ತೊಬ್ಬ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಇತರ ಕೆಲ ನೆಟ್ಟಿಗರು ಕೂಡ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ಅಮಾನತು

ಘಟನೆ ಕುರಿತಾಗಿ ನೆಟ್ಟಿಗರ ಆಕ್ರೋಶ ಬೆನ್ನಲ್ಲೇ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ದಕ್ಷಿಣ ಸಂಚಾರ ಡಿಸಿಪಿ ಟ್ವೀಟ್​ ಮಾಡಿದ್ದು, ಅನುಚಿತ ವರ್ತನೆಗಾಗಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:09 pm, Thu, 16 October 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ