AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ, ಅರ್ಧ ಹೆಲ್ಮೆಟ್ ಹಾಕಿ ಬೈಕ್ ಚಲಾಯಿಸುತ್ತೀರಾ? ಕಾದಿದೆ ದಂಡ: ಕಾರ್ಯಾಚರಣೆಗೆ ಬೆಂಗಳೂರು ಪೊಲೀಸರು ಸಜ್ಜು

ಕಳಪೆ, ಗುಣಮಟ್ಟವಿಲ್ಲದ ಹೆಲ್ಮೆಟ್ ಹಾಗೂ ಅರ್ಧ ಹೆಲ್ಮೆಟ್ ಧರಿಸುವ ಬೆಂಗಳೂರಿನ ದ್ವಿಚಕ್ರ ವಾಹನ ಸವಾರರು ಇನ್ನಾದರೂ ಎಚ್ಚೆತ್ತುಕೊಳ್ಳುವುದು ಒಳಿತು. ಇಂಥ ಕಳಪೆ ಹೆಲ್ಮೆಟ್ ಧರಿಸುವವರ ವಿರುದ್ಧ ಬಿರುಸಿನ ಕಾರ್ಯಾಚರಣೆಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಜ್ಜಾಗಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಕಳಪೆ, ಅರ್ಧ ಹೆಲ್ಮೆಟ್ ಹಾಕಿ ಬೈಕ್ ಚಲಾಯಿಸುತ್ತೀರಾ? ಕಾದಿದೆ ದಂಡ: ಕಾರ್ಯಾಚರಣೆಗೆ ಬೆಂಗಳೂರು ಪೊಲೀಸರು ಸಜ್ಜು
ಕಳಪೆ, ಅರ್ಧ ಹೆಲ್ಮೆಟ್ ಹಾಕಿ ಬೈಕ್ ಚಲಾಯಿಸುತ್ತೀರಾ? ಕಾದಿದೆ ದಂಡ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 24, 2024 | 9:59 AM

Share

ಬೆಂಗಳೂರು, ಜೂನ್ 24: ದ್ವಿಚಕ್ರ ವಾಹನ ಅಪಘಾತಗಳ ಸಂದರ್ಭ ಸವಾರರ ಸಾವುಗಳಿಗೆ ಪ್ರಮುಖ ಕಾರಣವೆಂದರೆ ತಲೆ ಮತ್ತು ಕುತ್ತಿಗೆ ಗಾಯಗಳಾಗಿವೆ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ (Bureau of Indian Standards) ಮಾನದಂಡಕ್ಕೆ ಅನುಗುಣವಾದ ಗುಣಮಟ್ಟದ ಹೆಲ್ಮೆಟ್ (Helmet) ಧರಿಸುವುದರಿಂದ ಇದನ್ನು ತಡೆಯಬಹುದು. ಆದರೆ, ಬೆಂಗಳೂರು ನಗರದಲ್ಲಿ ಕಳಪೆ, ದೋಷಯುಕ್ತ ಮತ್ತು ಅರ್ಧ ಹೆಲ್ಮೆಟ್ ಧರಿಸುವವರ ಸಂಖ್ಯೆ ಹೆಚ್ಚಾಗಿದ್ದು, ಸಮಸ್ಯೆಗೆ ಕಾರಣವಾಗುತ್ತಿದೆ. ಇಂಥವರ ವಿರುದ್ಧ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಮೂಲಗಳು ತಿಳಿಸಿವೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129 (ಎ) ಪ್ರಕಾರ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಸೇರಿದಂತೆ ಎಲ್ಲರೂ ದ್ವಿಚಕ್ರ ವಾಹನ ಪ್ರಯಾಣದ ವೇಳೆ ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಪೊಲೀಸರು ಹೆಲ್ಮೆಟ್‌ಗಳ ಮಹತ್ವದ ಬಗ್ಗೆ ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಿದ್ದಾರೆ. ಆದಾಗ್ಯೂ, ಅನೇಕ ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್, ಗಲ್ಲದ ಪಟ್ಟಿಗಳಿಲ್ಲದ ಹೆಲ್ಮೆಟ್ ಮತ್ತು ಪ್ರಮಾಣಿತವಲ್ಲದ ಹೆಲ್ಮೆಟ್​ಗಳನ್ನು ಧರಿಸಿರುವುದು ಕಂಡುಬರುತ್ತದೆ. ಇನ್ನು ವಿಶೇಷ ಕಾರ್ಯಾಚರಣೆ ನಡೆಸಿ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಲ್ಲಿ ಮೂರನೇ ಒಂದು ಭಾಗದಷ್ಟು ಮಂದಿ ಮಾತ್ರ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್​​​ಗೆ ಅನುಗುಣವಾಗಿ ಸರಿಯಾದ ಹೆಲ್ಮೆಟ್ ಧರಿಸುತ್ತಾರೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಸಂಚಾರ ನಿಯಮ ಉಲ್ಲಂಘನೆ ಕಾರಣಕ್ಕೆ ಪೊಲೀಸರ ಕೈಗೆ ಸಿಕ್ಕಿಬೀಳುವ ಭಯದಿಂದ ವಾಹನ ಸವಾರರು ಗುಣಮಟ್ಟವಿಲ್ಲದ, ಅಗ್ಗದ ಹೆಲ್ಮೆಟ್ ಧರಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಆನ್​​ಲೈನ್ ಜಾಬ್ ವಂಚನೆಯಲ್ಲಿಯೂ ಬೆಂಗಳೂರೇ ಕರ್ನಾಟಕ ರಾಜಧಾನಿ!

ಅನೇಕರು ಗುಣಮಟ್ಟವಿಲ್ಲದ ಹೆಲ್ಮೆಟ್ ಧರಿಸಿಕೊಂಡು, ಹೆಲ್ಮೆಟ್ ಹಾಕಿದರೂ ದಂಡ ವಿಧಿಸುತ್ತಿದ್ದೀರಿ ಎಂದು ಪೊಲೀಸರ ಬಳಿ ವಾದಿಸುತ್ತಾರೆ. ಆದರೆ, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129 ರ ಅಡಿಯಲ್ಲಿ ಸ್ಟಾಂಡರ್ಡ್ ಅಲ್ಲದ ಹೆಲ್ಮೆಟ್, ಅರ್ಧ ಹೆಲ್ಮೆಟ್ ಧರಿಸುವ ವಾಹನ ಚಾಲಕರಿಗೆ ಪೊಲೀಸರು ದಂಡ ವಿಧಿಸಬಹುದಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!