AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್​​ ರೂಲ್ಸ್​ ಬ್ರೆಕ್​ ಮಾಡಿದವರ ಮನೆಗೆ ನೋಟಿಸ್​ ಜೊತೆಗೆ ಬರಲಿದೆ ಕ್ಯೂಆರ್​​ ಕೋಡ್

ಸಂಚಾರಿ ನಿಯಮಗಳನ್ನು ಪಾಲಿಸಬೇಕಾದದ್ದು ಸಾರ್ವಜನಿಕರ ಆದ್ಯ ಕರ್ತವ್ಯ. ಟ್ರಾಫಿಕ್​ ರೂಲ್ಸ್​ಗಳನ್ನು ಬ್ರೇಕ್​ ಮಾಡಿ ಬೇಕಾ ಬಿಟ್ಟಿಯಾಗಿ ರಸ್ತೆ ಮೇಲೆ ಸಂಚರಿಸಿದರೆ ವಾಹನದ ಮೇಲೆ ಕೇಸ್​ ಬೀಳುತ್ತದೆ, ದಂಡ ಬೀಳುವುದು ಪಕ್ಕಾ. ದಂಡ ಬಿದ್ದರೂ ಕಟ್ಟದವರಿಗೆ ಮತ್ತು ತಾನು ಸಂಚಾರಿ ನಿಯಮ ಉಲ್ಲಂಘಿಸಿಲ್ಲ ಎಂದು ವಾದಿಸುವವರಿಗೆ ಬೆಂಗಳೂರು ಟ್ರಾಫಿಕ್​ ಪೊಲೀಸರು ಸಾಕ್ಷಿ ಸಮೇತ ಉತ್ತರ ನೀಡಲಿದ್ದಾರೆ.

ಬೆಂಗಳೂರು: ಟ್ರಾಫಿಕ್​​ ರೂಲ್ಸ್​ ಬ್ರೆಕ್​ ಮಾಡಿದವರ ಮನೆಗೆ ನೋಟಿಸ್​ ಜೊತೆಗೆ ಬರಲಿದೆ ಕ್ಯೂಆರ್​​ ಕೋಡ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Mar 01, 2024 | 12:29 PM

Share

ಬೆಂಗಳೂರು, ಮಾರ್ಚ 01: ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಟ್ರಾಫಿಕ್​ ರೂಲ್ಸ್​​ ಬಗ್ಗೆ ಅರಿವು ಮೂಡಿಸುತ್ತಿದ್ದರೂ, ಕೆಲವರು ನಿಯಮಗಳನ್ನು ಉಲ್ಲಂಘನೆ (Traffic Rules Break) ಮಾಡುತ್ತಲೇ ಇರುತ್ತಾರೆ. ಆದರೆ ಇನ್ಮುಂದೆ ಇದು ನಡೆಯಲ್ಲ. ಇಷ್ಟು ದಿನಗಳ ಕಾಲ ಸಂಚಾರಿ ನಿಯಮ ಉಲ್ಲಂಘಿಸಿದವರ ಮನೆಗೆ ನೋಟಿಸ್​​ ಹೋಗುತ್ತಿತ್ತು. ನೋಟಿಸ್​ ಬಂದರೂ ಹಲವರು ದಂಡ ಕಟ್ಟದೆ ತಕಾರಾರು ತೆಗೆಯುತ್ತಿದ್ದರು. ಇದರಿಂದ ಟ್ರಾಫಿಕ್​ ಪೊಲೀಸರು (Traffic Police) ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಮುಂದಿನ ದಿನಗಳಲ್ಲಿ ಸಂಚಾರಿ ಪೊಲೀಸರು ಹೈ ಟೆಕ್ನಾಲಜಿ ಬಳಸಿ ದಂಡ ವಸೂಲಿಗೆ ಮುಂದಾಗಿದ್ದಾರೆ.

ಹೌದು ದಂಡದ ನೋಟಿಸ್ ಜೊತೆಗೆ ಕ್ಯೂ ಆರ್ ಕೊಡ್ ಕೂಡ ಮನೆ ಬಾಗಲಿಗೆ ಬರಲಿದೆ. ಈ ಕ್ಯೂಆರ್ ಕೋಡ್​ ಅನ್ನು ಸ್ಕ್ಯಾನ್ ಮಾಡುತಿದ್ದಂತೆ ನೀವು ಎಷ್ಟು ಬಾರಿ, ಎಲ್ಲೆಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದೀರಿ ಎಂಬುವುದು ಗೊತ್ತಾಗಲಿದೆ. ನೀವು ಕ್ಯೂಆರ್​ ಕೋಡ್​ ಸ್ಕ್ಯಾನ್​ ಮಾಡುತ್ತಿದ್ದಂತೆ ನಿಯಮ ಉಲ್ಲಂಘನೆಯ ಫೋಟೋ ನಿಮ್ಮ ಮೊಬೈಲ್​​ನಲ್ಲಿ ಕಾಣಲಿದೆ. ಜೊತೆಗೆ ದಂಡ ಪಾವತಿಯ ಲಿಂಕ್​ ಸಹ ನಿಮ್ಮ ಮೊಬೈಲ್​ಗೆ ಬರಲಿದೆ.

ನಿಯಮ ಉಲ್ಲಂಘನೆಯ ಫೋಟೊ ಕಂಡ ಬಳಿಕವೂ ದೂರು ಇದ್ದಲ್ಲಿ ನೀವು ಸಂಚಾರಿ ಪೊಲೀಸ್​ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ, ದೂರು ಸಲ್ಲಿಸಬಹುದು. ಸಂಚಾರಿ ಪೊಲೀಸ್​ ಇಲಾಖೆ ವೆಬ್​ ಸೈಟ್ Btp.gov.in.

ದೂರು/ ಸಲಹೆ ನೀಡುವುದು ಹೇಗೆ?

  1. Btp.gov.in ವೆಬ್​ಸೈಟ್​ಗೆ ಭೇಟಿ ನೀಡಿದ ಬಳಿಕ ಮೇಲಗಡೆ ಬಲ ಭಾಗದಲ್ಲಿ Complain& Suggestions ಅಂತ ಕಾಣುತ್ತದೆ.
  2. Complain& Suggestions ಮೇಲೆ ಕ್ಲೀಕ್​ ಮಾಡಿದ ಬಳಿಕ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
  3. ಅಲ್ಲಿ ಯಾವ ಟ್ರಾಫಿಕ್​ ಸಿಗ್ನಲ್​ ದೂರು ಅಂತ ನಮೂದಿಸಬೇಕು. ಬಳಿಕ ಗಾಡಿ ಸಂಖ್ಯೆ, ಏನು ಸಮಸ್ಯೆ ​ಅಂತ ಬರಿಬೇಕು. ಬಳಿಕ ನಿಮ್ಮ ಹೆಸರು, ದೂರವಾಣಿ ಸಂಖ್ಯೆ, ಇಮೇಲ್​ ಐಡಿ, ದೂರು ಬರೆದು ಸಬ್​ಮಿಟ್​ ಕೊಟ್ಟರೆ, ನಿಮ್ಮ ದೂರು ಸಂಚಾರಿ ಪೊಲೀಸರಿಗೆ ತಲಪುತ್ತದೆ.

ಇದನ್ನೂ ಓದಿ: ಬರೋಬ್ಬರಿ 300 ಕ್ಕೂ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘನೆ, 3 ಲಕ್ಷ ರೂ. ದಂಡ

ನಿಯಮ ಉಲ್ಲಂಘಿಸಿದ ಸ್ಕೂಟಿ ಪೆಪ್ ಮೇಲೆ 3.22 ಲಕ್ಷ ದಂಡ

ಆರ್.ಟಿ.ನಗರದ ಗಂಗಾನಗರ ಬಳಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಪೆಪ್​ ಮೇಲೆ 2023ರ ಡಿಸೆಂಬರ್​​ನಲ್ಲಿ ಬರೊಬ್ಬರಿ 3.22ಲಕ್ಷ ದಂಡ ಬಿದ್ದಿತ್ತು. ಮಾಲಾ ಎಂಬುವವರಿಗೆ ಸೇರಿದ ಸ್ಕೂಟಿ ಮೇಲೆ 643 ಸಂಚಾರ ನಿಯಮ ಉಲ್ಲಂಘನೆ ಕೇಸ್​ಗಳು ದಾಖಲಾಗಿದ್ದವು. ಸ್ಕೂಟಿ ಬೆಲೆಯೇ 70 ರಿಂದ 80 ಸಾವಿರ, ಆದರೆ ದಂಡದ ಮೊತ್ತ ನಾಲ್ಕು ಪಟ್ಟು ಹೆಚ್ಚಿದೆ. KA 04 KF9072 ನಂಬರ್​ನ ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸಿ ನಿಯಮ ಉಲ್ಲಂಘಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು