AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್​​ ರೂಲ್ಸ್​ ಬ್ರೆಕ್​ ಮಾಡಿದವರ ಮನೆಗೆ ನೋಟಿಸ್​ ಜೊತೆಗೆ ಬರಲಿದೆ ಕ್ಯೂಆರ್​​ ಕೋಡ್

ಸಂಚಾರಿ ನಿಯಮಗಳನ್ನು ಪಾಲಿಸಬೇಕಾದದ್ದು ಸಾರ್ವಜನಿಕರ ಆದ್ಯ ಕರ್ತವ್ಯ. ಟ್ರಾಫಿಕ್​ ರೂಲ್ಸ್​ಗಳನ್ನು ಬ್ರೇಕ್​ ಮಾಡಿ ಬೇಕಾ ಬಿಟ್ಟಿಯಾಗಿ ರಸ್ತೆ ಮೇಲೆ ಸಂಚರಿಸಿದರೆ ವಾಹನದ ಮೇಲೆ ಕೇಸ್​ ಬೀಳುತ್ತದೆ, ದಂಡ ಬೀಳುವುದು ಪಕ್ಕಾ. ದಂಡ ಬಿದ್ದರೂ ಕಟ್ಟದವರಿಗೆ ಮತ್ತು ತಾನು ಸಂಚಾರಿ ನಿಯಮ ಉಲ್ಲಂಘಿಸಿಲ್ಲ ಎಂದು ವಾದಿಸುವವರಿಗೆ ಬೆಂಗಳೂರು ಟ್ರಾಫಿಕ್​ ಪೊಲೀಸರು ಸಾಕ್ಷಿ ಸಮೇತ ಉತ್ತರ ನೀಡಲಿದ್ದಾರೆ.

ಬೆಂಗಳೂರು: ಟ್ರಾಫಿಕ್​​ ರೂಲ್ಸ್​ ಬ್ರೆಕ್​ ಮಾಡಿದವರ ಮನೆಗೆ ನೋಟಿಸ್​ ಜೊತೆಗೆ ಬರಲಿದೆ ಕ್ಯೂಆರ್​​ ಕೋಡ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Mar 01, 2024 | 12:29 PM

Share

ಬೆಂಗಳೂರು, ಮಾರ್ಚ 01: ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಟ್ರಾಫಿಕ್​ ರೂಲ್ಸ್​​ ಬಗ್ಗೆ ಅರಿವು ಮೂಡಿಸುತ್ತಿದ್ದರೂ, ಕೆಲವರು ನಿಯಮಗಳನ್ನು ಉಲ್ಲಂಘನೆ (Traffic Rules Break) ಮಾಡುತ್ತಲೇ ಇರುತ್ತಾರೆ. ಆದರೆ ಇನ್ಮುಂದೆ ಇದು ನಡೆಯಲ್ಲ. ಇಷ್ಟು ದಿನಗಳ ಕಾಲ ಸಂಚಾರಿ ನಿಯಮ ಉಲ್ಲಂಘಿಸಿದವರ ಮನೆಗೆ ನೋಟಿಸ್​​ ಹೋಗುತ್ತಿತ್ತು. ನೋಟಿಸ್​ ಬಂದರೂ ಹಲವರು ದಂಡ ಕಟ್ಟದೆ ತಕಾರಾರು ತೆಗೆಯುತ್ತಿದ್ದರು. ಇದರಿಂದ ಟ್ರಾಫಿಕ್​ ಪೊಲೀಸರು (Traffic Police) ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಮುಂದಿನ ದಿನಗಳಲ್ಲಿ ಸಂಚಾರಿ ಪೊಲೀಸರು ಹೈ ಟೆಕ್ನಾಲಜಿ ಬಳಸಿ ದಂಡ ವಸೂಲಿಗೆ ಮುಂದಾಗಿದ್ದಾರೆ.

ಹೌದು ದಂಡದ ನೋಟಿಸ್ ಜೊತೆಗೆ ಕ್ಯೂ ಆರ್ ಕೊಡ್ ಕೂಡ ಮನೆ ಬಾಗಲಿಗೆ ಬರಲಿದೆ. ಈ ಕ್ಯೂಆರ್ ಕೋಡ್​ ಅನ್ನು ಸ್ಕ್ಯಾನ್ ಮಾಡುತಿದ್ದಂತೆ ನೀವು ಎಷ್ಟು ಬಾರಿ, ಎಲ್ಲೆಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದೀರಿ ಎಂಬುವುದು ಗೊತ್ತಾಗಲಿದೆ. ನೀವು ಕ್ಯೂಆರ್​ ಕೋಡ್​ ಸ್ಕ್ಯಾನ್​ ಮಾಡುತ್ತಿದ್ದಂತೆ ನಿಯಮ ಉಲ್ಲಂಘನೆಯ ಫೋಟೋ ನಿಮ್ಮ ಮೊಬೈಲ್​​ನಲ್ಲಿ ಕಾಣಲಿದೆ. ಜೊತೆಗೆ ದಂಡ ಪಾವತಿಯ ಲಿಂಕ್​ ಸಹ ನಿಮ್ಮ ಮೊಬೈಲ್​ಗೆ ಬರಲಿದೆ.

ನಿಯಮ ಉಲ್ಲಂಘನೆಯ ಫೋಟೊ ಕಂಡ ಬಳಿಕವೂ ದೂರು ಇದ್ದಲ್ಲಿ ನೀವು ಸಂಚಾರಿ ಪೊಲೀಸ್​ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ, ದೂರು ಸಲ್ಲಿಸಬಹುದು. ಸಂಚಾರಿ ಪೊಲೀಸ್​ ಇಲಾಖೆ ವೆಬ್​ ಸೈಟ್ Btp.gov.in.

ದೂರು/ ಸಲಹೆ ನೀಡುವುದು ಹೇಗೆ?

  1. Btp.gov.in ವೆಬ್​ಸೈಟ್​ಗೆ ಭೇಟಿ ನೀಡಿದ ಬಳಿಕ ಮೇಲಗಡೆ ಬಲ ಭಾಗದಲ್ಲಿ Complain& Suggestions ಅಂತ ಕಾಣುತ್ತದೆ.
  2. Complain& Suggestions ಮೇಲೆ ಕ್ಲೀಕ್​ ಮಾಡಿದ ಬಳಿಕ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
  3. ಅಲ್ಲಿ ಯಾವ ಟ್ರಾಫಿಕ್​ ಸಿಗ್ನಲ್​ ದೂರು ಅಂತ ನಮೂದಿಸಬೇಕು. ಬಳಿಕ ಗಾಡಿ ಸಂಖ್ಯೆ, ಏನು ಸಮಸ್ಯೆ ​ಅಂತ ಬರಿಬೇಕು. ಬಳಿಕ ನಿಮ್ಮ ಹೆಸರು, ದೂರವಾಣಿ ಸಂಖ್ಯೆ, ಇಮೇಲ್​ ಐಡಿ, ದೂರು ಬರೆದು ಸಬ್​ಮಿಟ್​ ಕೊಟ್ಟರೆ, ನಿಮ್ಮ ದೂರು ಸಂಚಾರಿ ಪೊಲೀಸರಿಗೆ ತಲಪುತ್ತದೆ.

ಇದನ್ನೂ ಓದಿ: ಬರೋಬ್ಬರಿ 300 ಕ್ಕೂ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘನೆ, 3 ಲಕ್ಷ ರೂ. ದಂಡ

ನಿಯಮ ಉಲ್ಲಂಘಿಸಿದ ಸ್ಕೂಟಿ ಪೆಪ್ ಮೇಲೆ 3.22 ಲಕ್ಷ ದಂಡ

ಆರ್.ಟಿ.ನಗರದ ಗಂಗಾನಗರ ಬಳಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಪೆಪ್​ ಮೇಲೆ 2023ರ ಡಿಸೆಂಬರ್​​ನಲ್ಲಿ ಬರೊಬ್ಬರಿ 3.22ಲಕ್ಷ ದಂಡ ಬಿದ್ದಿತ್ತು. ಮಾಲಾ ಎಂಬುವವರಿಗೆ ಸೇರಿದ ಸ್ಕೂಟಿ ಮೇಲೆ 643 ಸಂಚಾರ ನಿಯಮ ಉಲ್ಲಂಘನೆ ಕೇಸ್​ಗಳು ದಾಖಲಾಗಿದ್ದವು. ಸ್ಕೂಟಿ ಬೆಲೆಯೇ 70 ರಿಂದ 80 ಸಾವಿರ, ಆದರೆ ದಂಡದ ಮೊತ್ತ ನಾಲ್ಕು ಪಟ್ಟು ಹೆಚ್ಚಿದೆ. KA 04 KF9072 ನಂಬರ್​ನ ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸಿ ನಿಯಮ ಉಲ್ಲಂಘಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ