AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

ವಿಧಾನಸೌಧದ ಮುಂದೆ ನಾಳೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಹೀಗಾಗಿ ಅಂಬೇಡ್ಕರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಇಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ: ಸಂಚಾರ ಮಾರ್ಗದಲ್ಲಿ ಬದಲಾವಣೆ
ವಿಧಾನಸೌಧImage Credit source: bangaloretourism/ lokeshvenkatashiah
Rakesh Nayak Manchi
| Edited By: |

Updated on:Jun 11, 2023 | 6:22 AM

Share

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ನೀಡುವ ಶಕ್ತಿ ಯೋಜನೆಗೆ (Shakti Scheme) ಇಂದು (ಜೂನ್ 11) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ಮುಂದೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಗೊಂಡರೆ ಸಂಚಾರ ದಟ್ಟಣೆಯಾಗಬಹುದು. ಹೀಗಾಗಿ ವಾಹನ ಸವಾರರ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಪೊಲೀಸ್ ಇಲಾಖೆ ಸೂಚಿಸಿದೆ.

ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂಬೇಡ್ಕರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದರೆ ಕೆ.ಆರ್.ಸರ್ಕಲ್ ಕಡೆಯಿಂದ ಬಾಳೆಕುಂದ್ರಿ ಸರ್ಕಲ್ ಕಡೆಗೆ ತೆರಳುವ ವಾಹನ ನೃಪತುಂಗ ರಸ್ತೆ ಮಾರ್ಗವಾಗಿ ಸಂಚರಿಸಬಹುದು. ಬಾಳೇಕುಂದ್ರಿ ಸರ್ಕಲ್​ನಿಂದ ಕೆ.ಆರ್.ಸರ್ಕಲ್ ರಸ್ತೆಕಡೆಗೆ ಹೋಗುವ ಸವಾರರು ಕ್ವೀನ್ಸ್ ರಸ್ತೆ ಸಿದ್ದಲಿಂಗಯ್ಯ ರಸ್ತೆ ಮೂಲಕ ಸಂಚರಿಸಬಹುದು. ಸಿಟಿಓ ವೃತ್ತದಿಂದ ಬರುವ ಸವಾರರಿಗೆ ಪೊಲೀಸ್ ತಿಮ್ಮಯ್ಯ ಸರ್ಕಲ್​ನಲ್ಲಿ ಎಡ ತಿರುವು ನಿಷೇಧ ಇದ್ದು, ರಾಜಭವನ ರಸ್ತೆ ಮೂಲಕ ಸಂಚರಿಸಲು ಅವಕಾಶ ಇದೆ.

ಇದನ್ನೂ ಓದಿ: Power tariff hike: ವಿದ್ಯುತ್ ದರ ಹೆಚ್ಚಿಸಿದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಧಾರವಾಡ ಮಹಿಳೆಯರ ಆಕ್ರೋಶ!

ಕಾಂಗ್ರೆಸ್​ನ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತಿದೆ. ಈ ಯೋಜನೆ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ. ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಆಗಮಿಸುವುದು ಬಹುತೇಕ ಅನುಮಾನವಾಗಿದೆ.

ವಿಧಾನ ಸೌಧದ ಮುಂಭಾಗ 4 ನಿಗಮದ (BMTC, KSRTC, NWKRTC, KKRTC) ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ. ನಾಡಗೀತೆ ಹಾಡುವ ಮೂಲಕ ಚಾಲನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ನಂತರ ಸಿದ್ದರಾಮಯ್ಯ ಅವರು ಬಸ್​ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.

ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಅಲ್ಲಿನ ಸ್ಥಳೀಯ ಶಾಸಕರು ಅಥವಾ ಜನಪ್ರತಿನಿಧಿಗಳಿಂದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತೆ. ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್​ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sat, 10 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ