AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ

ಬೆಂಗಳೂರಿನ ಭಾರಿ ಟ್ರಾಫಿಕ್‌ನಿಂದಾಗಿ ಶಾಲಾ ವಿದ್ಯಾರ್ಥಿಗಳ ಪ್ರಯಾಣ ಕಷ್ಟಕರವಾಗಿದ್ದು, ಇಂಡಸ್ ಇಂಟರ್‌ನ್ಯಾಷನಲ್ ಶಾಲೆ ಮಹತ್ವದ ಹೆಜ್ಜೆಯಿಟ್ಟಿದೆ. ದೂರದ ಮಾರ್ಗಗಳ ಬಸ್‌ಗಳಲ್ಲಿ ತಲಾ 5 ಲಕ್ಷ ರೂ. ವೆಚ್ಚದಲ್ಲಿ ಜೈವಿಕ ಶೌಚಾಲಯಗಳನ್ನು ಅಳವಡಿಸಿದೆ. ಇದು ಮಕ್ಕಳಿಗೆ ದೀರ್ಘ ಪ್ರಯಾಣದಲ್ಲಿ ಎದುರಾಗುವ ಅನಾರೋಗ್ಯ, ಆತಂಕ ತಪ್ಪಿಸಿ, ಆರಾಮದಾಯಕ ಪ್ರಯಾಣಕ್ಕೆ ನೆರವಾಗಲಿದೆ. ದೇಶದಲ್ಲಿ ಶಾಲಾ ಬಸ್‌ಗಳಲ್ಲಿ ಈ ಸೌಲಭ್ಯ ಅಳವಡಿಸಿದ ಮೊದಲ ಶಾಲೆ ಇದಾಗಿದೆ.

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 07, 2026 | 2:00 PM

Share

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್ ಇಂಟರ್ನ್ಯಾಷನಲ್ ಶಾಲೆಯು ಒಂದು ಆಸಕ್ತಿದಾಯಕ ಆಲೋಚನೆಯೊಂದನ್ನು ಮಾಡಿದೆ. ಈ ಬಗ್ಗೆ ಟೈಮ್ಸ್​​​​ ಆಫ್ ಇಂಡಿಯಾ ವರದಿಯನ್ನು ಮಾಡಿದೆ. ಬೆಂಗಳೂರಿನ ದೂರದ ನಗರಗಳಿಗೆ ಸಂಚಾರಿಸುವ ಎರಡು ಶಾಲಾ ಬಸ್​ಗಳಿಗೆ ಬಯೋಟಾಯ್ಲೆಟ್‌ ಅಳವಡಿಸಿದೆ. ಶಾಲೆ ಮತ್ತು ಮನೆಗೆ ಪ್ರಯಾಣಿಸುವಾಗ ಮೂಲಭೂತ ಸೌಲಭ್ಯಗಳಿಲ್ಲದೆ ಮಕ್ಕಳು ದೀರ್ಘ ಗಂಟೆಗಳ ಕಾಲ ಸಂಚಾರ ದಟ್ಟಣೆಯಲ್ಲಿ ಕಳೆಯುವುದರಿಂದ ಈ ಯೋಜನೆಗಳನ್ನು ತರಲಾಗಿದೆ.

ಇಂಡಸ್ ಇಂಟರ್ನ್ಯಾಷನಲ್ ಸ್ಕೂಲ್ಸ್, ಬೆಂಗಳೂರಿನ ಒಳಗೆ ಇರುವ ದೂರದ ನಗರಗಳಿಗೆ ಅಥವಾ ಊರುಗಳಿಗೆ ಹೋಗುವ ವಿದ್ಯಾರ್ಥಿಗಳಿಗಾಗಿ ಜೈವಿಕ ಶೌಚಾಲಯಗಳನ್ನು ಅಳವಡಿಸಿದೆ.  ಶಾಲೆಯಿಂದ ರಾಜಾಜಿನಗರ ಮತ್ತು ಯಶವಂತಪುರಕ್ಕೆ ಎರಡು ಗಂಟೆಗಳ ಕಾಲ ಪ್ರಯಾಣವನ್ನು ತೆಗೆದುಕೊಳ್ಳುತ್ತದೆ. ಇದಕ್ಕಾಗಿ ಈ ಸೌಲಭ್ಯಗಳನ್ನು ಮಾಡಲಾಗಿದೆ. ಇಂಡಸ್ ಇಂಟರ್‌ನ್ಯಾಷನಲ್‌ನ ನಿರ್ದೇಶಕ (ಆಡಳಿತ) ವಿನೋತ್ ಕುಮಾರ್, ದೂರದ ಪ್ರಯಾಣ ಮಾಡುವಾಗ ವಿದ್ಯಾರ್ಥಿಗಳಿಗೆ ಇದು ಅಗತ್ಯವಾಗಿದೆ. ಅನೇಕ ವಿದ್ಯಾರ್ಥಿಗಳು ದೀರ್ಘಕಾಲದವರೆಗೆ ಬಸ್‌ನಲ್ಲಿಯೇ ಇರುತ್ತಾರೆ. ಈ ಸಮಯದಲ್ಲಿ ಶೌಚಾಲಯ ಇಲ್ಲದಿದ್ದರೆ ಅಸ್ವಸ್ಥತೆ, ಆತಂಕ ಮತ್ತು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಹೇಳಿದ್ದಾರೆ. ಅದಕ್ಕಾಗಿ ಈ ಸಮಸ್ಯೆ ಹೊಗಲಾಡಿಸಲು ವಿದ್ಯಾರ್ಥಿಗಳಿಗಾಗಿ ಜೈವಿಕ ಶೌಚಾಲಯವನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: 1.31 ಕೋಟಿ ರೂ. ಸಂಬಳಕ್ಕಿಂತ ಬೆಂಗಳೂರಿನ 45 ಲಕ್ಷ ರೂ. ಹೆಚ್ಚು ಲಾಭದಾಯಕ ಎಂದ ಟೆಕ್ಕಿ, ಯಾಕೆ ಗೊತ್ತಾ?

ಬಯೋಟಾಯ್ಲೆಟ್ ಬೆಲೆ ಎಷ್ಟು?

ಈ ಶಾಲೆಯೂ ಹೊಸ ಸೌಲಭ್ಯಕ್ಕಾಗಿ ಎರಡು ಬಸ್‌ಗೆ ಸುಮಾರು 5 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ. ಇದಲ್ಲದೆ, ಇದು ಪ್ರಯೋಗ ಯಶಸ್ವಿಯಾದರೆ ಇತರ ಬಸ್‌ಗಳಿಗೂ ಈ ಸೌಲಭ್ಯವನ್ನು ತರುವ ಪ್ಲಾನ್​​ ಇದೆ ಎಂದು ಹೇಳಲಾಗಿದೆ. ಈ ಸೌಲಭ್ಯಗಳು ಭಾರತೀಯ ರೈಲ್ವೆಯಲ್ಲಿ ಮಾತ್ರ ಇದೆ. ಇದೀಗ ಇಂತಹ ಸೌಲಭ್ಯಗಳನ್ನು ಶಾಲೆ ಬಸ್​​​​​​​​ಗಳಲ್ಲಿ ಮಾಡಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಇನ್ನು ಈ ಪ್ರಯತ್ನಕ್ಕೆ ಮಕ್ಕಳ ಪೋಷಕರು ಕೂಡ ಶ್ಲಾಘಿಸಿದ್ದಾರೆ. ಇದೊಂದು ಒಳ್ಳೆಯ ಚಿಂತನೆ ಎಂದು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?