Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic: ಕೆಟ್ಟು ನಿಂತ ವಾಹನದಿಂದ ಬೆಂಗಳೂರಿನ ಸೀಗೇಹಳ್ಳಿ ಬಳಿ ಟ್ರಾಫಿಕ್ ಜಾಮ್

ಕೆಟ್ಟು ಹೋದ ವಾಹನ, ಜಲಾವೃತಗೊಂಡ ರಸ್ತೆ ಸೇರಿದಂತೆ ಅನೇಕ ಕಾರಣಗಳಿಂದ ನಿನ್ನೆ ಸಂಜೆ ಹಾಗೂ ಇಂದು ಬೆಳಿಗ್ಗೆ ನಗರದಲ್ಲಿ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸೀಗೇಹಳ್ಳಿ ಭಾಗದಲ್ಲಿ ವಾಹನ ಕೆಟ್ಟು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬುಧವಾರ ಬೆಳಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Bengaluru Traffic: ಕೆಟ್ಟು ನಿಂತ ವಾಹನದಿಂದ ಬೆಂಗಳೂರಿನ ಸೀಗೇಹಳ್ಳಿ ಬಳಿ ಟ್ರಾಫಿಕ್ ಜಾಮ್
ಬೆಂಗಳೂರಿನ ಸೀಗೇಹಳ್ಳಿ ಬಳಿ ಟ್ರಾಫಿಕ್
Follow us
TV9 Web
| Updated By: ಆಯೇಷಾ ಬಾನು

Updated on: Aug 23, 2023 | 12:22 PM

ಬೆಂಗಳೂರು, ಆ.23: ಬೆಂಗಳೂರಿನ ಹಲವೆಡೆ ಇಂದು ಟ್ರಾಫಿಕ್ ಸಮಸ್ಯೆ(Traffic) ಎದುರಾಗಿದೆ. ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ(Bengaluru Traffic Police) ನಗರದ ಹಲವೆಡೆ ಎದುರಾದ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಕೆಟ್ಟು ಹೋದ ವಾಹನ, ಜಲಾವೃತಗೊಂಡ ರಸ್ತೆ ಸೇರಿದಂತೆ ಅನೇಕ ಕಾರಣಗಳಿಂದ ನಿನ್ನೆ ಸಂಜೆ ಹಾಗೂ ಇಂದು ಬೆಳಿಗ್ಗೆ ನಗರದಲ್ಲಿ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಅದರ ಮಾಹಿತಿ ಇಲ್ಲಿದೆ.

ಸೀಗೇಹಳ್ಳಿ ಭಾಗದಲ್ಲಿ ವಾಹನ ಕೆಟ್ಟು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬುಧವಾರ ಬೆಳಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ‘ಸಂಚಾರ ಸಲಹೆ’: ಸೀಗೇಹಳ್ಳಿಯಲ್ಲಿ ವಾಹನ ಕೆಟ್ಟು ನಿಂತಿರುವುದರಿಂದ ನಿಧಾನಗತಿಯ ಸಂಚಾರ ಇದೆ. ಅದನ್ನು ಶೀಘ್ರದಲ್ಲೇ ಕ್ಲಿಯರ್ ಮಾಡಲಾಗುತ್ತೆ. ದಯವಿಟ್ಟು ಸಹಕರಿಸಿ ಎಂದು ಪೊಲೀಸರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Chandrayaan 3 Moon Landing Live: ಚಂದ್ರಯಾನ3 ಯಶಸ್ಸಿಗೆ ಶ್ರೀಶೈಲ ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ

ಸದಾಶಿವನಗರದಲ್ಲಿ ನೀರು ನಿಂತು ನಿಧಾನಗತಿಯಲ್ಲಿ ಸಾಗುತ್ತಿರುವ ವಾಹನ

ಸದಾಶಿವನಗರ ಸಮೀಪದ ಬಾಷ್ಯಂ ವೃತ್ತದಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಸಂಜೆ ಸೂಚನೆ ನೀಡಿದ್ದರು. ದಟ್ಟಣೆ ತಪ್ಪಿಸಲು ಪೊಲೀಸರು ಎಚ್ಚರಿಕೆಯಿಂದ ವಾಹನ ಚಲಾಯಿಸಲು ಮತ್ತು ಪರ್ಯಾಯ ರಸ್ತೆಗಳನ್ನು ಬಳಸಲು ಪ್ರಯಾಣಿಕರಿಗೆ ಮನವಿ ಮಾಡಿದ್ದರು. ಸದ್ಯ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ.

ಹೊರ ವರ್ತುಲ ರಸ್ತೆಯಲ್ಲಿ ವೋಲ್ವೋ ಬಸ್ ಕೆಟ್ಟು ನಿಂತು ಟ್ರಾಫಿಕ್ ಸಮಸ್ಯೆ

ಹೊರ ವರ್ತುಲ ರಸ್ತೆಯಲ್ಲಿ ವೋಲ್ವೋ ಬಸ್ ಕೆಟ್ಟು ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ ಎಂದು ಎಚ್‌ಎಎಲ್ ಸಂಚಾರ ಪೊಲೀಸ್ ಠಾಣೆ ಪೊಲೀಸರು ಟ್ವೀಟ್ ಮಾಡಿದ್ದಾರೆ. ಹೊರ ವರ್ತುಲ ರಸ್ತೆಯಲ್ಲಿ ವೆಲ್ಸ್ ಫಾರ್ಗೋ ಬಳಿ ವೋಲ್ವೋ ಬಸ್ ಕೆಟ್ಟು ನೀಂತಿದೆ. ಬೆಳ್ಳಂದೂರು ಕಡೆಗೆ ಸಂಚಾರ ನಿಧಾನಗತಿಯಲ್ಲಿ ಸಾಗಿದೆ. ಪ್ರಯಾಣಿಕರು ಸಹಕರಿಸಿ ಎಂದು ಪೊಲೀಸರು ಟ್ವೀಟ್ ಮಾಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು