AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!

ಬೆಂಗಳೂರಿನಲ್ಲಿ 15 ವರ್ಷದ ಬಾಲಕನೊಬ್ಬ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳೀಯ ಕಂಪನಿಯು ಅಪ್ರಾಪ್ತರಿಗೆ ಮದ್ಯ ನೀಡಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಜೆಜೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಂಪನಿ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!
15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ!
ಭಾವನಾ ಹೆಗಡೆ
|

Updated on: Feb 03, 2026 | 10:26 AM

Share

ಬೆಂಗಳೂರು, ಫೆಬ್ರುವರಿ 03: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿದಂತೆ ಕಳೆದ ತಿಂಗಳು ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.

ಜೆಜೆ ಆ್ಯಕ್ಟ್ ಅಡಿ ಪ್ರಕರಣ ದಾಖಲು

ಜನವರಿ 31ರ ರಾತ್ರಿ ಸುಮಾರು 9 ಗಂಟೆ 40 ನಿಮಿಷಕ್ಕೆ ಈ ಘಟನೆ ನಡೆದಿದ್ದು, ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿಯಾಗಿರುವ ಮೃತನ ಪಾಲಕರು ಅದೇ ದಿನ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಹಲವು ಆಯಾಮಗಳನ್ನಿಟ್ಟುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶ ಹೊರಬಂದಿದ್ದು, 15 ವರ್ಷದ ಬಾಲಕನಿಗೆ ಸಂಸ್ಥೆಯೊಂದು ಸಿರಗೇಟ್ ಮತ್ತು ಮದ್ಯಪಾನ ಮಾಡಿಸಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕ ಮತ್ತು ಸ್ನೇಹಿತರು ಸ್ಥಳೀಯ ಕಂಪನಿಯಲ್ಲಿದ್ದಾಗ ಈ ಕೃತ್ಯ ನಡೆದಿದ್ದು, ಸಂಸ್ಥೆಯು ಅಪ್ರಾಪ್ತರಿಗೆ ಮದ್ಯ ಕುಡಿಸಿರುವ ಆರೋಪದ ಮೇಲೆ, ಕಂಪನಿಯ ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ (JJ Act) ಮತ್ತು ಕರ್ನಾಟಕ ಮದ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ANI ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪೋಸ್ಟ್ ಇಲ್ಲಿದೆ.

ಸಾರ್ವಜನಿಕರಿಗೆ ಖಾಕಿ ವಾರ್ನಿಂಗ್

ಪೊಲೀಸರು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದು, ಸಂಸ್ಥೆಯ ಮೇಲಿನ ಕ್ರಮ ಕೈಗೊಳ್ಳುವುದರ ಜೊತೆಗೆ ಕೃತ್ಯವೆಸಗಿದವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ