Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ

ಒಂದು ನಗರ ಒಂದು ದರ ಜಾರಿಗೆ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮಾಡಿರುವ ಮನವಿಯನ್ನು ಪುರಸ್ಕರಿಸಿರುವ ಸಾರಿಗೆ ಇಲಾಖೆ, ಒಂದೇ ರೀತಿಯ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕದ ಇತರ ನಗರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಟ್ಯಾಕ್ಸಿ ದರ ಒಂದೇ ಆಗಿರಲಿದೆ. ಆದೇಶ ಜಾರಿಯ ನಂತರ ಯಾವ ವಿಧದ ಟ್ಯಾಕ್ಸಿಗೆ ಎಷ್ಟು ದರ ನಿಗದಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on:Sep 03, 2024 | 9:51 AM

ಬೆಂಗಳೂರು, ಸೆಪ್ಟೆಂಬರ್ 3: ಬೆಂಗಳೂರಿನಲ್ಲಿ ಟ್ಯಾಕ್ಸಿ ಸೇವೆಗಳಿಗೆ ‘ಒಂದು ನಗರ ಒಂದು ದರ’ ಜಾರಿ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದರ ಪ್ರಕಾರ, ಕರ್ನಾಟಕದಾದ್ಯಂತ ಟ್ಯಾಕ್ಸಿಗಳಿಗೆ ನಿಗದಿಯಾಗಿರುವ ದರವೇ ಬೆಂಗಳೂರಿಗೂ ಅನ್ವಯವಾಗಲಿದೆ. ಒಂದು ನಗರ ಒಂದು ದರ ನೀತಿಗಾಗಿ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮನವಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ರಾಜ್ಯದ ಇತರ ಕಡೆಗಳಲ್ಲಿ ಕಾರ್ಯಾಚರಿಸವ ಟ್ಯಾಕ್ಸಿಗಳಿಗೆ ಹೊರಡಿಸಿದ್ದ ಆದೇಶವೇ ಬೆಂಗಳೂರಿಗೂ ಜಾರಿಯಾಗಿದೆ.

ಯಾವ ಟ್ಯಾಕ್ಸಿಗೆ ಎಷ್ಟು ದರ?

  • 10 ಲಕ್ಷ ರೂ. ಒಳಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ದರ 100 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಮೀಗೆ 24 ರೂಪಾಯಿ ನಿಗದಿ ಮಾಡಲಾಗಿದೆ.
  • 10ರಿಂದ 15 ಲಕ್ಷ ರೂ. ಮೌಲ್ಯದ ವಾಹನಗಳಿಗೆ 4 ಕಿಮೀವರೆಗೆ 115 ರೂ. ಬಾಡಿಗೆ ನಿಗದಿಯಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 28 ರೂಪಾಯಿ ದರ ನಿಗದಿಪಡಿಸಲಾಗಿದೆ.
  • 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಕ್ಕೆ 4 ಕಿಮೀ ವರೆಗೆ 130 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 32 ರೂಪಾಯಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ವೇಟಿಂಗ್ ಚಾರ್ಜ್​​ ಎಷ್ಟು?

ಕಾಯುವಿಕೆ ಅಥವಾ ವೇಟಿಂಗ್​ಗೆ ಮೊದ‌ಲ 5 ನಿಮಿಷ ಉಚಿತವಾಗಿದೆ. ಬಳಿಕ ಪ್ರತಿ ನಿಮಿಷಕ್ಕೆ‌ 1 ರೂ. ನಿಗದಿಪಡಿಸಲಾಗಿದೆ. ಟ್ಯಾಕ್ಸಿಗಳು ಸಮಯದ ಆಧಾರದಲ್ಲಿ ದರ ಪಡೆಯುವಂತಿಲ್ಲ. ಕಿಲೋ ಮೀಟರ್​ ಆಧಾರದಲ್ಲೇ ಶುಲ್ಕ ಪಡೆಯಬೇಕೆಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಶುಲ್ಕಗಳ ಹೊರತಾಗಿ ಬೇರೆ ಯಾವುದೇ ದರ ಪಡೆಯಬಾರದು ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:36 am, Tue, 3 September 24

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ