ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ

ಒಂದು ನಗರ ಒಂದು ದರ ಜಾರಿಗೆ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮಾಡಿರುವ ಮನವಿಯನ್ನು ಪುರಸ್ಕರಿಸಿರುವ ಸಾರಿಗೆ ಇಲಾಖೆ, ಒಂದೇ ರೀತಿಯ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕದ ಇತರ ನಗರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಟ್ಯಾಕ್ಸಿ ದರ ಒಂದೇ ಆಗಿರಲಿದೆ. ಆದೇಶ ಜಾರಿಯ ನಂತರ ಯಾವ ವಿಧದ ಟ್ಯಾಕ್ಸಿಗೆ ಎಷ್ಟು ದರ ನಿಗದಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Sep 03, 2024 | 9:51 AM

ಬೆಂಗಳೂರು, ಸೆಪ್ಟೆಂಬರ್ 3: ಬೆಂಗಳೂರಿನಲ್ಲಿ ಟ್ಯಾಕ್ಸಿ ಸೇವೆಗಳಿಗೆ ‘ಒಂದು ನಗರ ಒಂದು ದರ’ ಜಾರಿ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದರ ಪ್ರಕಾರ, ಕರ್ನಾಟಕದಾದ್ಯಂತ ಟ್ಯಾಕ್ಸಿಗಳಿಗೆ ನಿಗದಿಯಾಗಿರುವ ದರವೇ ಬೆಂಗಳೂರಿಗೂ ಅನ್ವಯವಾಗಲಿದೆ. ಒಂದು ನಗರ ಒಂದು ದರ ನೀತಿಗಾಗಿ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮನವಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ರಾಜ್ಯದ ಇತರ ಕಡೆಗಳಲ್ಲಿ ಕಾರ್ಯಾಚರಿಸವ ಟ್ಯಾಕ್ಸಿಗಳಿಗೆ ಹೊರಡಿಸಿದ್ದ ಆದೇಶವೇ ಬೆಂಗಳೂರಿಗೂ ಜಾರಿಯಾಗಿದೆ.

ಯಾವ ಟ್ಯಾಕ್ಸಿಗೆ ಎಷ್ಟು ದರ?

  • 10 ಲಕ್ಷ ರೂ. ಒಳಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ದರ 100 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಮೀಗೆ 24 ರೂಪಾಯಿ ನಿಗದಿ ಮಾಡಲಾಗಿದೆ.
  • 10ರಿಂದ 15 ಲಕ್ಷ ರೂ. ಮೌಲ್ಯದ ವಾಹನಗಳಿಗೆ 4 ಕಿಮೀವರೆಗೆ 115 ರೂ. ಬಾಡಿಗೆ ನಿಗದಿಯಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 28 ರೂಪಾಯಿ ದರ ನಿಗದಿಪಡಿಸಲಾಗಿದೆ.
  • 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಕ್ಕೆ 4 ಕಿಮೀ ವರೆಗೆ 130 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 32 ರೂಪಾಯಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ವೇಟಿಂಗ್ ಚಾರ್ಜ್​​ ಎಷ್ಟು?

ಕಾಯುವಿಕೆ ಅಥವಾ ವೇಟಿಂಗ್​ಗೆ ಮೊದ‌ಲ 5 ನಿಮಿಷ ಉಚಿತವಾಗಿದೆ. ಬಳಿಕ ಪ್ರತಿ ನಿಮಿಷಕ್ಕೆ‌ 1 ರೂ. ನಿಗದಿಪಡಿಸಲಾಗಿದೆ. ಟ್ಯಾಕ್ಸಿಗಳು ಸಮಯದ ಆಧಾರದಲ್ಲಿ ದರ ಪಡೆಯುವಂತಿಲ್ಲ. ಕಿಲೋ ಮೀಟರ್​ ಆಧಾರದಲ್ಲೇ ಶುಲ್ಕ ಪಡೆಯಬೇಕೆಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಶುಲ್ಕಗಳ ಹೊರತಾಗಿ ಬೇರೆ ಯಾವುದೇ ದರ ಪಡೆಯಬಾರದು ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:36 am, Tue, 3 September 24

‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ