AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ

ಒಂದು ನಗರ ಒಂದು ದರ ಜಾರಿಗೆ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮಾಡಿರುವ ಮನವಿಯನ್ನು ಪುರಸ್ಕರಿಸಿರುವ ಸಾರಿಗೆ ಇಲಾಖೆ, ಒಂದೇ ರೀತಿಯ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕದ ಇತರ ನಗರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಟ್ಯಾಕ್ಸಿ ದರ ಒಂದೇ ಆಗಿರಲಿದೆ. ಆದೇಶ ಜಾರಿಯ ನಂತರ ಯಾವ ವಿಧದ ಟ್ಯಾಕ್ಸಿಗೆ ಎಷ್ಟು ದರ ನಿಗದಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಟ್ಯಾಕ್ಸಿಗಳಿಗೆ ಒಂದು ನಗರ ಒಂದು ದರ ಜಾರಿ, ಈಗೆಷ್ಟಿದೆ ಬಾಡಿಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Sep 03, 2024 | 9:51 AM

Share

ಬೆಂಗಳೂರು, ಸೆಪ್ಟೆಂಬರ್ 3: ಬೆಂಗಳೂರಿನಲ್ಲಿ ಟ್ಯಾಕ್ಸಿ ಸೇವೆಗಳಿಗೆ ‘ಒಂದು ನಗರ ಒಂದು ದರ’ ಜಾರಿ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದರ ಪ್ರಕಾರ, ಕರ್ನಾಟಕದಾದ್ಯಂತ ಟ್ಯಾಕ್ಸಿಗಳಿಗೆ ನಿಗದಿಯಾಗಿರುವ ದರವೇ ಬೆಂಗಳೂರಿಗೂ ಅನ್ವಯವಾಗಲಿದೆ. ಒಂದು ನಗರ ಒಂದು ದರ ನೀತಿಗಾಗಿ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟ ಮನವಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ರಾಜ್ಯದ ಇತರ ಕಡೆಗಳಲ್ಲಿ ಕಾರ್ಯಾಚರಿಸವ ಟ್ಯಾಕ್ಸಿಗಳಿಗೆ ಹೊರಡಿಸಿದ್ದ ಆದೇಶವೇ ಬೆಂಗಳೂರಿಗೂ ಜಾರಿಯಾಗಿದೆ.

ಯಾವ ಟ್ಯಾಕ್ಸಿಗೆ ಎಷ್ಟು ದರ?

  • 10 ಲಕ್ಷ ರೂ. ಒಳಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ದರ 100 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಮೀಗೆ 24 ರೂಪಾಯಿ ನಿಗದಿ ಮಾಡಲಾಗಿದೆ.
  • 10ರಿಂದ 15 ಲಕ್ಷ ರೂ. ಮೌಲ್ಯದ ವಾಹನಗಳಿಗೆ 4 ಕಿಮೀವರೆಗೆ 115 ರೂ. ಬಾಡಿಗೆ ನಿಗದಿಯಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 28 ರೂಪಾಯಿ ದರ ನಿಗದಿಪಡಿಸಲಾಗಿದೆ.
  • 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಕ್ಕೆ 4 ಕಿಮೀ ವರೆಗೆ 130 ರೂ. ನಿಗದಿಪಡಿಸಲಾಗಿದೆ. ನಂತರದ ಪ್ರತಿ ಕಿಲೋ ಮೀಟರ್​​ಗೆ 32 ರೂಪಾಯಿ ಇದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ವೇಟಿಂಗ್ ಚಾರ್ಜ್​​ ಎಷ್ಟು?

ಕಾಯುವಿಕೆ ಅಥವಾ ವೇಟಿಂಗ್​ಗೆ ಮೊದ‌ಲ 5 ನಿಮಿಷ ಉಚಿತವಾಗಿದೆ. ಬಳಿಕ ಪ್ರತಿ ನಿಮಿಷಕ್ಕೆ‌ 1 ರೂ. ನಿಗದಿಪಡಿಸಲಾಗಿದೆ. ಟ್ಯಾಕ್ಸಿಗಳು ಸಮಯದ ಆಧಾರದಲ್ಲಿ ದರ ಪಡೆಯುವಂತಿಲ್ಲ. ಕಿಲೋ ಮೀಟರ್​ ಆಧಾರದಲ್ಲೇ ಶುಲ್ಕ ಪಡೆಯಬೇಕೆಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಶುಲ್ಕಗಳ ಹೊರತಾಗಿ ಬೇರೆ ಯಾವುದೇ ದರ ಪಡೆಯಬಾರದು ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:36 am, Tue, 3 September 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ