AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tumkur Metro: ಬೆಂಗಳೂರು ಟು ತುಮಕೂರು ಮೆಟ್ರೋ ಕಾರ್ಯ ಚುರುಕು ಮಾಡಿದ BMRCL, ಅಪ್ಡೇಟ್ಸ್ ಇಲ್ಲಿದೆ

ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನರ ಬೇಡಿಕೆ ಸಹ ಹೆಚ್ಚಾಗುತ್ತಿದೆ. ಇನ್ನು ರಾಜಧಾನಿಗೆ ಹೊಂದಿಕೊಂಡಿರುವ ಜಿಲ್ಲೆಗಳಿಗೂ ಕನೆಕ್ಟಿವಿಟಿ ಬೇಕೆಂಬ ಕೂಗು ಹೆಚ್ಚಾಗಿರುವ ಬೆನ್ನಲ್ಲೇ ಕಲ್ಪತರು ನಾಡು ತುಮಕೂರಿಗೆ ಮೆಟ್ರೋ ವಿಸ್ತರಣೆ ಯೋಜನೆಗೆ BMRCL ವೇಗ ನೀಡಿದೆ. ಹಾಗಾದರೆ ಹೇಗೆ ಮೂಡಿ ಬರಲಿದೆ ತುಮಕೂರು ವರೆಗಿನ ಮೆಟ್ರೋ ಎಂಬ ವಿವರ ಇಲ್ಲಿದೆ.

Bengaluru Tumkur Metro: ಬೆಂಗಳೂರು ಟು ತುಮಕೂರು ಮೆಟ್ರೋ ಕಾರ್ಯ ಚುರುಕು ಮಾಡಿದ BMRCL, ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು ಟು ತುಮಕೂರು ಮೆಟ್ರೋ ಕಾಮಗಾರಿ
Kiran Surya
| Edited By: |

Updated on: Apr 01, 2024 | 8:32 AM

Share

ಬೆಂಗಳೂರು, ಏಪ್ರಿಲ್.01: ಬೆಂಗಳೂರು-ತುಮಕೂರು ನಮ್ಮ ಮೆಟ್ರೋ  (Bengaluru Tumkur Metro)ಯೋಜನೆ ಕನಸು ನನಸಾಗುವ ಸಾಧ್ಯತೆ ಹೆಚ್ಚಾಗಿದೆ. ಎರಡು ನಗರಗಳ ನಡುವಿನ ಮೆಟ್ರೋ ಯೋಜನೆ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದ್ದು, 52.41 ಕಿ.ಮೀ. ಮಾರ್ಗದಲ್ಲಿ, 19 ಎತ್ತರದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಮಾದಾವರ (BIEC) ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ತುಮಕೂರು ಬಸ್ ನಿಲ್ದಾಣದವರೆಗೆ ವಿಸ್ತರಿಸುವ ಗುರಿ ಹೊಂದಿದೆ. ಬಹು ನಿರೀಕ್ಷಿತ ಈ ಯೋಜನೆಯು ತುಮಕೂರು ಬೆಂಗಳೂರು ನಡುವಿನ ಸಾರಿಗೆ ಸೌಲಭ್ಯವನ್ನು ಮತ್ತಷ್ಟು ಸುಲಭವಾಗಿಸಲಿದೆ. ಈ ಸಂಬಂಧ BMRCL ಗೆ ಹಲವು ಗುತ್ತಿಗೆದಾರ ಕಂಪನಿಗಳಿಂದ ಕಾರ್ಯ ಸಾಧ್ಯತಾ ವರದಿ ಸಲ್ಲಿಕೆ ಮಾಡಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌವ್ಹಾಣ್ ತಿಳಿಸಿದ್ದಾರೆ.

ತುಮಕೂರು ಮೆಟ್ರೋ ಯೋಜನೆಯು ಆರ್ಥಿಕ ಅಭಿವೃದ್ಧಿ ಮತ್ತು ನಿವಾಸಿಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ಭರವಸೆಯನ್ನು ಹೊಂದಿದೆ. ಸಮರ್ಥ ಮೆಟ್ರೋ ವ್ಯವಸ್ಥೆಯು ತುಮಕೂರು-ಬೆಂಗಳೂರು ನಡುವೆ ಹೂಡಿಕೆಯನ್ನು ಆಕರ್ಷಿಸಲು, ನಗರದ ವಿವಿಧ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಸುಧಾರಿಸಲು ಮತ್ತು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡುವ ಗುರಿ ಹೊಂದಿದೆ. ಹೀಗಾಗಿ ತುಮಕೂರು ರಸ್ತೆಯ ಅಸಂಖ್ಯಾತ ಮಂದಿ ಪ್ರಯಾಣಿಕರು ವಿಸ್ತರಿತ ಮೆಟ್ರೋ ಮಾರ್ಗಕ್ಕಾಗಿ ಬಹುನಿರೀಕ್ಷೆಯಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಮುಂಬೈ ಹೋಟೆಲ್ ದಾಳಿ ಉಗ್ರರ ಬಂಧನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ್​ ವಸಂತ್ ಎನ್​​ಐಎ ಡಿಜಿಯಾಗಿ ಅಧಿಕಾರ ಸ್ವೀಕಾರ

ಒಟ್ನಲ್ಲಿ ಈ ತಿಂಗಳಾಂತ್ಯಕ್ಕೆ ವಿಸ್ತರಿತ ತುಮಕೂರು ಮಾರ್ಗಕ್ಕೆ ಹಲವು ಕಂಪನಿಗಳು ಕಾರ್ಯಸಾಧ್ಯತಾ ವರದಿ ಸಲ್ಲಿಕೆ ಮಾಡಿವೆ. ಈ ವರದಿಯ ಆಧಾರದ ಮೇಲೆ ಬಿಎಂಆರ್‌ಸಿಎಲ್‌ ಅಗತ್ಯ ಬದಲಾವಣೆಗಳನ್ನ ಮಾಡಿಕೊಳ್ಳಲಿದ್ದು, ವರದಿಯನ್ನು ಸರ್ಕಾರದ ಮುಂದಿಡಲಿದೆ. ಬಳಿಕ ಸಮಗ್ರ ವರದಿ ಯೋಜನೆಗೂ ಶೀಘ್ರದಲ್ಲೇ ಮೆಟ್ರೋ ಟೆಂಡರ್ ಆಹ್ವಾನ ಮಾಡಲಿದೆ. ಹೀಗಾಗಿ ಸರ್ಕಾರ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಲಿದ್ಯ ಎಂದು ಕಾದು ನೋಡಬೇಕಿದೆ.

ಲಕ್ಕಸಂದ್ರ ಮೆಟ್ರೋ ಕಾಮಗಾರಿ: ಏಪ್ರಿಲ್​ನಿಂದ ಒಂದು ವರ್ಷ ಈ ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗವನ್ನು ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಒಂದು ವರ್ಷ ಬಂದ್ ಮಾಡಲಾಗುತ್ತಿದೆ. ವಾಹನ ಸವರಾರರ ಅನುಕೂಲಕ್ಕಾಗಿ ಬಿಎಂಆರ್​ಸಿಎಲ್ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ