AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ!

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೊರ ರಾಜ್ಯಗಳ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ, ಹೊರರಾಜ್ಯದಲ್ಲಿ ಗುಜರಿಗೆ ಹಾಕಬೇಕಾದ ಕಾರುಗಳು ಸಿಲಿಕಾನ್ ಸಿಟಿಯಲ್ಲಿ ಜೋರಾಗಿ ಮಾರಾಟವಾಗುತ್ತಿವೆ. ದೆಹಲಿಯಲ್ಲಿ ನಿಷೇಧಿಸಲ್ಪಟ್ಟ ಕಾರುಗಳು ಇಲ್ಲಿ ಮಾರಾಟವಾಗುತ್ತಿವೆ. ಇದರಿಂದ ಬೆಂಗಳೂರು ಡಂಪಿಂಗ್ ಯಾರ್ಡ್ ಆಗುತ್ತಿದ್ದು, ವಾಯುಮಾಲಿನ್ಯದ ಪ್ರಮಾಣ ಕೂಡ ಹೆಚ್ಚಾಗುತ್ತಿದೆ.

ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ!
ಸಾಂದರ್ಭಿಕ ಚಿತ್ರImage Credit source: tv9
Kiran Surya
| Edited By: |

Updated on: Feb 25, 2026 | 6:34 AM

Share

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನಲ್ಲಿ (Bangalore) ಹೊರ ರಾಜ್ಯದ ಕಾರುಗಳ (Cars) ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ (Dehli) 10 ವರ್ಷ ಹಳೆಯ ಡಿಸೇಲ್ ಕಾರು, 15 ವರ್ಷ ಹಳೆಯ ಪೆಟ್ರೋಲ್ ಕಾರಿಗೆ ನಿಷೇಧ ಹೇರಲಾಗಿದೆ. ಅಂಥಾ ಕಾರುಗಳನ್ನು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ 20 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ಜಾರಿಯಲ್ಲಿದೆ. ಹಾಗಾಗಿ, ಹೊರ ರಾಜ್ಯದ ಐಷಾರಾಮಿ ಕಾರುಗಳನ್ನು ಇಲ್ಲಿಗೆ ತಂದು, ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

ದೆಹಲಿಯಲ್ಲಿ 10 ವರ್ಷ ಬಳಸಿರುವ ಬೆಲೆ ಬಾಳುವ ಮರ್ಸಿಡಿಸ್ ಬೆಂಜ್, ಆಡಿ, ಬಿಎಂಡಬ್ಲ್ಯು, ಜಾಗ್ವಾರ್, ಸ್ಕಾರ್ಪಿಯೋ, ಫಾರ್ಚುನರ್, ರೋಲ್ಸ್ ರಾಯ್ಸ್, ರೇಂಜ್ ರೋವರ್, ಬೆಂಟ್ಲಿ ಕಾಂಟಿನೆಂಟಲ್, ಲ್ಯಾಂಡ್ ರೋವರ್ ಡಿಸ್ಕವರಿ, ಲೆಕ್ಸಸ್, ಮಾಸೆರೋಟಿ ಲೆವಾಂಟೆ, ಮಿನಿ ಕೂಪರ್ ನಂತಹ ಐಷಾರಾಮಿ ಕಾರುಗಳಿಗೆ ಬೆಂಗಳೂರು ನಗರದಲ್ಲಿ ಬೇಡಿಕೆ ಹೆಚ್ಚಾಗಿದೆ. 15 ವರ್ಷ ಬಳಸಿರುವ ನಾರ್ಮಲ್ ಕಾರುಗಳಾದ ಇನ್ನೋವಾ, ಮಾರುತಿ ಸುಜುಕಿ, ಹುಂಡೈ ಸಂಸ್ಥೆಗಳ ವಿವಿಧ ಮಾದರಿಯ ಕಾರುಗಳ ಖರೀದಿಗೆ ಗ್ರಾಹಕರು ಮುಗಿಬೀಳುತ್ತಿದ್ದಾರೆ.

ಹೊರ ರಾಜ್ಯದ ಕಾರು ಮಾರಾಟದ ಹಬ್ ಆದ ಬೆಂಗಳೂರು!

ಬೆಂಗಳೂರು ಹೊರ ರಾಜ್ಯದ ಕಾರು ಮಾರಾಟದ ಹಬ್ ಆಗಿದೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಸರ್ಕಾರ ಮತ್ತು ಸಾರಿಗೆ ಇಲಾಖೆ ಕಡಿವಾಣ ಹಾಕಬೇಕು ಎಂದು ಪರಿಸರ ತಜ್ಞರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಬೇರೆ ರಾಜ್ಯದಲ್ಲಿ ಗುಜರಿಗೆ ಹಾಕುವ ಕಾರುಗಳು ಕಡಿಮೆ ಬೆಲೆಗೆ ಸಿಗುತ್ತವೆ ಎಂದು, ನಗರಕ್ಕೆ ತಂದು ವಾಯುಮಾಲಿನ್ಯಕ್ಕೆ ಆಹ್ವಾನ ಕೊಡುತ್ತಿದ್ದಾರೆ. ಸಾರಿಗೆ ಇಲಾಖೆ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ