AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು, ದುರಂತದಲ್ಲಿ ಗರ್ಭಿಣಿ ಜಸ್ಟ್​​ ಮಿಸ್​​!

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಸದ್ಯ ಈ ದುರಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್​ನಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್​ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು, ದುರಂತದಲ್ಲಿ ಗರ್ಭಿಣಿ ಜಸ್ಟ್​​ ಮಿಸ್​​!
ಕ್ಯಾಂಟರ್ ಅಪಘಾತ
ಗಂಗಾಧರ​ ಬ. ಸಾಬೋಜಿ
|

Updated on:Sep 13, 2025 | 12:23 PM

Share

ಬೆಂಗಳೂರು, ಸೆಪ್ಟೆಂಬರ್​​ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ (Ganesh idol impression) ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್​​ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿ ಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಬ್ರೇಕ್ ಫೇಲ್ಯೂರ್ ಶಂಕೆ

ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತರು. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಂಟರ್​​​ ಡಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದುರಂತದಲ್ಲಿ ಇಡೀ ಕುಟುಂಬ ಪಾರು

ದುರಂತದಲ್ಲಿ ಅದೃಷ್ಟವಶಾತ್ ಗರ್ಭಿಣಿ ಹಾಗೂ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಗರ್ಭಿಣಿ ಪತ್ನಿ ಮತ್ತು 3 ವರ್ಷದ ಮಗುವನ್ನು ವಿಜಯ್ ಎಂಬುವವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ಕಾರು ಚಾಲಕ ವಿಜಯ್ ಹೇಳಿದ್ದಿಷ್ಟು

ಅಪಘಾತದಲ್ಲಿ ಜಖಂಗೊಂಡ ರಿಟ್ಜ್ ಕಾರು ಚಾಲಕ ವಿಜಯ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಗರ್ಭಿಣಿ, ಬ್ಲಡ್ ಚೆಕಪ್​​ಗಾಗಿ ಆಸ್ಪತ್ರೆಗೆ ಹೊರಟಿದ್ದೆ. ಪೂಜಾ ಕಲ್ಯಾಣ ಮಂಟಪ ರಸ್ತೆಯಿಂದ ಲಾರಿ ವೇಗವಾಗಿ ಬಂತು. ಕಣ್ಣು ಮುಂದೆಯೇ ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ. ನಾನು ಕೂಡಲೇ ಲೆಫ್ಟ್ ಸೈಡ್​ಗೆ ತೆಗೆದುಕೊಂಡು ಪಾರಾದೆ. ದೇವರ ದಯೆ ಏನು ಆಗಿಲ್ಲ ಎಂದು ಹೇಳಿದ್ದಾರೆ.

ಕಂಟ್ರೋಲ್ ತಪ್ಪಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ: ಡಿಸಿಪಿ ಅನೂಪ್ ಶೆಟ್ಟಿ

ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿದ್ದು, 7.45 ರ ಸಮಯದಲ್ಲಿ ಘಟನೆ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಿಂದ ಲಾರಿ ಬಂದಿದೆ. ಆಟೋ, ಕಾರಿಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದರು.

ಇದನ್ನೂ ಓದಿ: ಹಾಸನ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? ಸ್ಫೋಟಕ ಮಾಹಿತಿ ಬಹಿರಂಗ

ಮೇಲ್ನೋಟಕ್ಕೆ ಡೌನ್ ಬರಬೇಕಾದರೆ ಕಂಟ್ರೋಲ್ ತಪ್ಪಿರುವ ಸಾಧ್ಯತೆ ಇದೆ. ಲಾರಿ ಡ್ರೈವರ್ ಓಡಿ ಹೋಗಿದ್ದಾನೆ. ಗೂಡ್ಸ್ ಏನಿತ್ತು ಎಂದು ಪರಿಶೀಲನೆ ಮಾಡಬೇಕಿದೆ ಎಂದಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:22 pm, Sat, 13 September 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ