AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಕೇಸ್: ಶೀಘ್ರವೇ ಪ್ರಕರಣದ ತನಿಖೆ NIAಗೆ ವರ್ಗಾವಣೆ

ಇಬ್ಬರು ಶಂಕಿತ ಉಗ್ರರಾದ ಅಖ್ತರ್ ಹುಸೇನ್, ಜುಬಾ ನೋಕಿಯಾದ ಹಳೆ ಮೊಬೈಲ್ ಬಳಸುತ್ತಿದ್ದರು. ಇಬ್ಬರ ಮೊಬೈಲ್ಗಳನ್ನು ಸಿಸಿಬಿ, ಎಫ್ಎಸ್ಎಲ್ಗೆ ನೀಡಿದೆ.

ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಕೇಸ್: ಶೀಘ್ರವೇ ಪ್ರಕರಣದ ತನಿಖೆ NIAಗೆ ವರ್ಗಾವಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Aug 02, 2022 | 2:52 PM

Share

ಬೆಂಗಳೂರು: ತಿಲಕನಗರದಲ್ಲಿ ಬೆಂಗಳೂರು ಪೊಲೀಸರಿಂದ ಶಂಕಿತ ಉಗ್ರರ(Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೊಂದು ದೊಡ್ಡ ತಲೆ ನೋವು ಶುರುವಾಗಿದೆ. ಶಂಕಿತ ಉಗ್ರರ ಮೊಬೈಲ್ ರಿಟ್ರೀವ್ ಮಾಡುವುದೇ ಪೊಲೀಸರಿಗೆ ತಲೆ ನೋವು ತಂದಿದೆ.

ಇಬ್ಬರು ಶಂಕಿತ ಉಗ್ರರಾದ ಅಖ್ತರ್ ಹುಸೇನ್, ಜುಬಾ ನೋಕಿಯಾದ ಹಳೆ ಮೊಬೈಲ್ ಬಳಸುತ್ತಿದ್ದರು. ಇಬ್ಬರ ಮೊಬೈಲ್ಗಳನ್ನು ಸಿಸಿಬಿ, ಎಫ್ಎಸ್ಎಲ್ಗೆ ನೀಡಿದೆ. ಇಬ್ಬರು ಶಂಕಿತರ ವಿರುದ್ಧ UAPA ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕುರಿತು ಸಿಸಿಬಿ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ಶೀಘ್ರವೇ ಪ್ರಕರಣದ ತನಿಖೆ ಅಧಿಕೃತವಾಗಿ NIAಗೆ ವರ್ಗಾವಣೆ ಮಾಡಲಾಗುತ್ತಿದ್ದು ಸದ್ಯ ಇಬ್ಬರು ಶಂಕಿತ ಉಗ್ರರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ; ಅಧಿಕಾರಿಗಳಿಂದ ತೀವ್ರ ವಿಚಾರಣೆ

ಬೆಂಗಳೂರು: ಇಬ್ಬರು ಶಂಕಿತ ಉಗ್ರರನ್ನು (Terrorist) ನಿನ್ನೆ (ಜುಲೈ 25) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಓರ್ವನನ್ನು ಬೆಂಗಳೂರಿನಲ್ಲಿ, ಮತ್ತೊಬ್ಬನನ್ನು ತಮಿಳುನಾಡಿನ ಸೇಲಂನಲ್ಲಿ ಅರೆಸ್ಟ್ ಮಾಡಲಾಗಿದೆ. ತಮಿಳುನಾಡಿನಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಜುಬಾ, ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಬಗ್ಗೆ ಮಾಹಿತಿ ಪಡೆದಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಸುಮಾರು 12 ಗಂಟೆಗಳ ಕಾರ್ಯಾಚರಣೆ ನಡೆಸಿ ನಿನ್ನೆ ಮಧ್ಯಾಹ್ನ 3.30ರ ಸುಮಾರಿಗೆ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ಸದ್ಯ ಸಿಸಿಬಿ ಪೊಲೀಸರು, ಆದಿಲ್ ಅಲಿಯಾಸ್ ಜುಬಾನನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಅರೆಸ್ಟ್ ಆಗಿರುವ ಅಖ್ತರ್ ಹುಸೇನ್ ಜೊತೆ ಆತನ ತಮ್ಮ ಕೂಡ ರೂಂನಲ್ಲಿ ವಾಸವಿದ್ದ. ಆತನನ್ನು ಸಹ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸದ್ಯ ರೂಂನಲ್ಲಿ ಅಖ್ತರ್ ಜೊತೆಯಿದ್ದ ನಾಲ್ವರು ಯುವಕರನ್ನೂ ವಿಚಾರಣೆ ಮಾಡಿ ವಾಪಸ್ ಕಳಿಸಿದ್ದಾರೆ.

Published On - 2:52 pm, Tue, 2 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ