AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಬಿ ಸಿಟಿ ಫೈವ್ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 45 ಕೆಜಿ ಕೊಳೆತ ಮಾಂಸ, 15 ಲೀ. ಕರಿದ ಅಡುಗೆ ಎಣ್ಣೆ ಪತ್ತೆ

ಬೆಂಗಳೂರಿನ ಯುಬಿ ಸಿಟಿಯ ಐದು ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ದಾಳಿ ನಡೆಸಿದ್ದಾರೆ. 45 ಕೆಜಿ ಕೊಳೆತ ಮಾಂಸ, 15 ಲೀಟರ್ ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಅವಧಿ ಮೀರಿದ ಹಲವು ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.

ಯುಬಿ ಸಿಟಿ ಫೈವ್ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 45 ಕೆಜಿ ಕೊಳೆತ ಮಾಂಸ, 15 ಲೀ. ಕರಿದ ಅಡುಗೆ ಎಣ್ಣೆ ಪತ್ತೆ
ಯುಬಿ ಸಿಟಿ ಹೋಟೆಲ್‌ಗಳ ಮೇಲೆ ದಾಳಿImage Credit source: tv9
ವಿಕಾಸ್​ ಬಿಎಂ
| Edited By: |

Updated on:Aug 10, 2026 | 12:36 PM

Share

ಮುಖ್ಯಾಂಶಗಳು

  • ಯುಬಿ ಸಿಟಿಯ ಐದು ಹೋಟೆಲ್‌ಗಳ ಮೇಲೆ ದಾಳಿ
  • 45 ಕೆಜಿ ಕೊಳೆತ ಮಾಂಸ ಪತ್ತೆ
  • 15 ಲೀಟರ್ ಕರಿದ ಎಣ್ಣೆ ಜಪ್ತಿ

ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ (Bengaluru) ಪ್ರತಿಷ್ಠಿತ ಯುಬಿ ಸಿಟಿಯಲ್ಲಿರುವ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್‌ಗಳ ಅಡುಗೆಮನೆಗಳಲ್ಲಿನ ಅವ್ಯವಸ್ಥೆ ಬಯಲಾಗಿದೆ. ಐದು ಹೋಟೆಲ್‌ಗಳ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು ಸೇರಿದಂತೆ ಹಲವು ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

45 ಕೆಜಿ ಕೊಳೆತ ಮಾಂಸ, 15 ಲೀಟರ್ ಕರಿದ ಅಡುಗೆ ಎಣ್ಣೆ ಪತ್ತೆ

ಬೆಂಗಳೂರಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ರಾತ್ರಿ ಯುಬಿ ಸಿಟಿಯಲ್ಲಿರುವ ಐದು ಹೋಟೆಲ್‌ಗಳ ಮೇಲೆ ಸುಮಾರು 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸ್ಕೈ ಹೋಟೆಲ್, ರಾಯಲ್ ಚೈನ್, ಮದ್ರಾಸ್ ಕಿಚನ್, ಟೆಸ್ಕಾನ್ ಹೋಟೆಲ್ ಹಾಗೂ ಸೆಂಚೆಜ್ ಹೋಟೆಲ್‌ಗಳ ಅಡುಗೆಮನೆಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ 45 ಕೆ.ಜಿ. ಕೊಳೆತ ಕೋಳಿ ಮತ್ತು ದನದ ಮಾಂಸ, 15 ಲೀಟರ್ ಬಳಸಿದ ಅಡುಗೆ ಎಣ್ಣೆ ಹಾಗೂ 6 ಕೆ.ಜಿ. ವೆಜಿಟೇಬಲ್ ಕಟ್ಲೆಟ್ ಸೇರಿದಂತೆ ಒಟ್ಟು 51 ಕೆ.ಜಿ. ಆಹಾರ ಪದಾರ್ಥಗಳನ್ನು ಸ್ಕೈ ಹೋಟೆಲ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಕೊಳೆತ ಮಾಂಸ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹೋಟೆಲ್‌ನ ಅಡುಗೆಮನೆಗೆ ಅಧಿಕಾರಿಗಳು ಬೀಗ ಹಾಕಿ ಸೀಲ್ ಮಾಡಿದ್ದಾರೆ.

ರಾಯಲ್ ಚೈನ್ ಹೋಟೆಲ್​ನಲ್ಲಿ ಏನೇನು ಸಿಕ್ತು?

ಇನ್ನು ಯುಬಿ ಸಿಟಿಯ ರಾಯಲ್ ಚೈನ್ ಹೋಟೆಲ್‌ನಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಿಕ್ಕಿರುವ ಕಳಪೆ ಆಹಾರ ವಸ್ತುಗಳ ಮಾಹಿತಿ ಹೀಗಿದೆ;

  • 50 ಕೆ.ಜಿ. ಬಾತುಕೋಳಿ ಮಾಂಸ
  • 5 ಕೆ.ಜಿ. ಮೀನು ಸೇರಿದಂತೆ
  • ಒಟ್ಟು 55 ಕೆ.ಜಿ. ಮಾಂಸ ವಶಕ್ಕೆ

ಇತರ ಹೋಟೆಲ್​​ಗಳಲ್ಲಿ ಏನೇನು ಸಿಕ್ತು?

  • ಮದ್ರಾಸ್ ಕಿಚನ್​ನಲ್ಲಿ 5 ಕೆ.ಜಿ. ಹಸಿ ಬಟಾಣಿ
  • ಟೆಸ್ಕಾನ್ ಹೋಟೆಲ್‌ನಲ್ಲಿ 5 ಕೆ.ಜಿ. ಅಣಬೆ ವಶಕ್ಕೆ
  • ಸೆಂಚೆಜ್ ಹೋಟೆಲ್‌ನಲ್ಲಿ 3 ಕೆ.ಜಿ. ಮೀನು, 7 ಕೆ.ಜಿ. ಕೇಕ್, ಆಲೂಗಡ್ಡೆ ಸೇರಿದಂತೆ ಇತರೆ ಆಹಾರ ಪದಾರ್ಥಗಳ ಜಪ್ತಿ

ವಶಪಡಿಸಿಕೊಂಡ ಕಳಪೆ ಆಹಾರದ ಒಟ್ಟು ಪ್ರಮಾಣ

  • ವಶಪಡಿಸಿಕೊಂಡ/ವಿಲೇವಾರಿ ಮಾಡಿದ ಒಟ್ಟು ಆಹಾರ ಪದಾರ್ಥಗಳು: 132 ಕೆಜಿ
  • ಬಳಸಿದ ಅಡುಗೆ ಎಣ್ಣೆ: 15 ಲೀಟರ್
  • ಆಹಾರ ಪದಾರ್ಥಗಳ ಒಟ್ಟು ಪ್ರಮಾಣ: 132 ಕೆಜಿ

ಶೀತಲೀಕರಣ ಮಾಡದೇ ಮಾಂಸ ಸಂಗ್ರಹ

ಯುಬಿ ಸಿಟಿ ಹಾಗೂ ಬ್ರಿಗೇಡ್ ರಸ್ತೆಯ ಸುತ್ತಮುತ್ತ ನಡೆದ ಪರಿಶೀಲನೆ ವೇಳೆ ಕೆಲವು ಹೋಟೆಲ್‌ಗಳಲ್ಲಿ ಚಿಕನ್, ಮಟನ್ ಹಾಗೂ ಮೀನುಗಳನ್ನು ಸರಿಯಾದ ರೀತಿಯಲ್ಲಿ ಶೀತಲೀಕರಣ ಮಾಡದೇ ಸಂಗ್ರಹಿಸಿರುವುದು ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಆಯುಕ್ತರ ಮಾತಿನ ವಿಡಿಯೋ

ಹೋಟೆಲ್​ಗಳ ವಿರುದ್ಧ ಕಾನೂನು ಕ್ರಮಕ್ಕೆ ಆಹಾರ ಇಲಾಖೆ ಸಿದ್ಧತೆ

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಿರುವ ಹೋಟೆಲ್‌ಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ. ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆಮನೆಗಳಲ್ಲೇ ಇಂತಹ ಅಕ್ರಮಗಳು ಪತ್ತೆಯಾಗಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Mon, 10 August 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ