AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರಿನಲ್ಲಿ ಲಗೇಜ್​​​ಗೆ ಅವಕಾಶ ಇಲ್ಲ, ದಂಪತಿಗೆ ಅವ್ಯಾಚ ಪದಗಳಿಂದ ನಿಂದಿಸಿದ ಕ್ಯಾಬ್ ಡ್ರೈವರ್

ಬೆಂಗಳೂರಿನಲ್ಲಿ ಉಬರ್ ಗೋ ಡ್ರೈವರ್‌ನಿಂದ ದಂಪತಿಗಳಿಗೆ ಆಗಿರುವ ಕೆಟ್ಟ ಅನುಭವದ ಬಗ್ಗೆ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಸೂಟ್‌ಕೇಸ್‌ಗಳಿದ್ದ ಕಾರಣ ಕಾರು ಹತ್ತಿಸಿಕೊಳ್ಳಲು ಚಾಲಕ ನಿರಾಕರಿಸಿದ್ದಾನೆ. ಜತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ನೋಡಿ ಸ್ಟೋರಿ

ಬೆಂಗಳೂರು: ಕಾರಿನಲ್ಲಿ ಲಗೇಜ್​​​ಗೆ ಅವಕಾಶ ಇಲ್ಲ, ದಂಪತಿಗೆ ಅವ್ಯಾಚ ಪದಗಳಿಂದ ನಿಂದಿಸಿದ ಕ್ಯಾಬ್ ಡ್ರೈವರ್
ವೈರಲ್​​​ ಪೋಸ್ಟ್​
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2025 | 6:06 PM

Share

ಬೆಂಗಳೂರು, ಅ.14: ಬೆಂಗಳೂರಿನಲ್ಲಿ ಕ್ಯಾಬ್​​​​ ಡ್ರೈವರ್​​​ಗಳ ಕಿರಿಕ್ (Bengaluru Uber driver)​​ ಹೆಚ್ಚಾಗಿವೆ. ಸಾಮಾಜಿಕ ಜಾಲತಾಣಲ್ಲಿ ಬೆಂಗಳೂರು ಕ್ಯಾಬ್​​​ ಡ್ರೈವರ್​​ಗಳ ಬಗ್ಗೆ ದಿನಕ್ಕೊಂದು ಸುದ್ದಿಗಳು ವೈರಲ್​ ಆಗುತ್ತಲೇ ಇರುತ್ತದೆ. ಇದೀಗ ಮತ್ತೊಂದು ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬೆಂಗಳೂರು ಮೂಲದ ದಂಪತಿಯ ಲಗೇಜ್​​​ಗಳನ್ನು ನೋಡಿ ಉಬರ್ ಚಾಲಕ ಬಾಯಿಗೆ ಬಂದಂತೆ ಅವ್ಯಾಚ ಪದಗಳಿಂದ ನಿಂದಿಸಿದ್ದಾನೆ. ಇದೀಗ ಈ ಪೋಸ್ಟ್​​ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಕಾರಣವಾಗಿದೆ. ಬೆಂಗಳೂರಿನ ಅಗರ ಸರೋವರದ ಬಳಿ ವರ್ಕಲಾ ಪ್ರವಾಸ ಮುಗಿಸಿ ವಾಪಸ್ಸು ಬರುವ ವೇಳೆ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಉಬರ್ ಗೋ ಸವಾರಿಯ ಚಾಲಕನು ದಂಪತಿಗಳನ್ನು ಲಗೇಜ್​ ಸಮೇತ ನೋಡಿ ಕಾರು ಹತ್ತಿಸಿಕೊಳ್ಳಲು ನಿರಾಕರಿಸಿದ್ದಾನೆ. ಉಬರ್ ಗೋನಲ್ಲಿ ಸೂಟ್‌ಕೇಸ್‌ಗಳಿಗೆ ಅನುಮತಿ ಇಲ್ಲ ಎಂದು ಕ್ಯಾಬ್ ಡ್ರೈವರ್​​ ಹೇಳಿದ್ದಾನೆ. ಈ ನಿಯಮ ಯಾವಾಗದಿಂದ ಶುರುವಾಗಿದೆ. ನಾವು ಇಲ್ಲಿಯವರೆಗೆ ಈ ನಿಯಮದ ಬಗ್ಗೆ ಕೇಳಿಲ್ಲ ಎಂದು ಹೇಳಿದ್ದಾರೆ. ನಂತರ ದಂಪತಿ ಡ್ರೈವರ್​​​ನಲ್ಲಿ ಕ್ಯಾಬ್​​ನ್ನು ಕ್ಯಾನ್ಸಲ್​​​ ಮಾಡುವಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಡ್ರೈವರ್​ ದಂಪತಿಗಳನ್ನು ಅವ್ಯಾಚ ಪದಗಳಿಂದ ನಿಂದಿಸಿದ್ದಾನೆ. ಈ ಘಟನೆಯ ಬಗ್ಗೆ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ಅವ್ಯಾಚ ಪದಗಳಿಂದ ನಿಂದಿಸಿದ್ದು ಮಾತ್ರವಲ್ಲದೆ, ಹಲ್ಲೆ ಮಾಡಲು ಕೂಡ ಮುಂದಾಗಿದ್ದಾನೆ ಎಂದು ದಂಪತಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಉಳಿಯಲು 5 ವರ್ಷ ಅವಕಾಶ: ಮೋದಿಗೆ ಧನ್ಯವಾದ ತಿಳಿಸಿದ ಅಮೆರಿಕದ ಉದ್ಯಮಿ

ಇಲ್ಲಿದೆ ನೋಡಿ ಪೋಸ್ಟ್​​:

Uber driver in Bangalore hurled abuses and got aggressive because we had 2 suitcases — Uber hasn’t done anything even after a month byu/MysteriousTime6680 inbangalore

ಇನ್ನು ಘಟನೆಯ ಬಗ್ಗೆ ಪೊಲೀಸರಿಗೆ ಸಾಕ್ಷಿ ಸಮೇತವಾಗ ದೂರು ನೀಡಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮವನ್ನು ಪೊಲೀಸರು ತೆಗೆದುಕೊಂಡಿಲ್ಲ. ಪ್ರಕರಣದ ಬಗ್ಗೆ ಯಾವುದೇ ಅಪ್ಡೇಟ್​​ ನೀಡಿಲ್ಲ ಎಂದು ದಂಪತಿಗಳು ಹೇಳಿದ್ದಾರೆ. ಇನ್ನು ಈ ಪೋಸ್ಟ್​​​ ಅನೇಕ ಬಳಕೆದಾರರು ಕಮೆಂಟ್​​ ಕೂಡ ಮಾಡಿದ್ದರೆ. ಸಾಮಾನ್ಯವಾಗಿ ಉಬರ್ ಗೋ ನಲ್ಲಿ ಚಿಕ್ಕ ಕಾರುಗಳು ಸಿಗುವುದು, ಅದರಲ್ಲಿ ವಸ್ತುಗಳನ್ನು ಸಾಗಿಸುವುದು ತುಂಬಾ ಕಷ್ಟ, ಹಾಗಾಗಿ ನಾನು ಉಬರ್ ಸೆಡಾನ್ ಅನ್ನು ಬುಕ್​​ ಮಾಡುತ್ತೇನೆ ಎಂದು ಒಬ್ಬ ಬಳಕೆದಾರ ಕಮೆಂಟ್​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ