AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uber Price Hike: ಬೆಂಗಳೂರಿನಲ್ಲಿನ್ನು ಕ್ಯಾಬ್ ಪ್ರಯಾಣ ದುಬಾರಿ; ಉಬರ್​ನಿಂದ ಶೇ. 10ರಷ್ಟು ಬೆಲೆ ಏರಿಕೆ

ಉಬರ್ ಬೆನ್ನಲ್ಲೇ ಓಲಾ ಕೂಡ ತನ್ನ ಪ್ರಯಾಣದ ದರಗಳನ್ನು ಪರಿಷ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಓಲಾದಿಂದ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ.

Uber Price Hike: ಬೆಂಗಳೂರಿನಲ್ಲಿನ್ನು ಕ್ಯಾಬ್ ಪ್ರಯಾಣ ದುಬಾರಿ; ಉಬರ್​ನಿಂದ ಶೇ. 10ರಷ್ಟು ಬೆಲೆ ಏರಿಕೆ
ಉಬರ್
TV9 Web
| Edited By: |

Updated on:Apr 21, 2022 | 2:15 PM

Share

ಬೆಂಗಳೂರು: ಈ ಟ್ರಾಫಿಕ್​ನಲ್ಲಿ ಗಾಡಿ ಓಡಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ (Bangalore Traffic) ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಸ್ವಂತ ವಾಹನಗಳಿಗಿಂತಲೂ ಆಟೋ, ಕ್ಯಾಬ್​ಗಳ ಮೇಲೆ ಅವಲಂಬಿತರಾದವರೇ ಹೆಚ್ಚು. ಆದರೆ, ಇನ್ನುಮುಂದೆ ಬೆಂಗಳೂರಿನಲ್ಲಿ ಕ್ಯಾಬ್ ಪ್ರಯಾಣ ದುಬಾರಿಯಾಗಲಿದೆ. ಏರುತ್ತಿರುವ ಪೆಟ್ರೋಲ್ (Petrol Price), ಡೀಸೆಲ್ ಬೆಲೆಯನ್ನು (Diesel Price) ನಿಭಾಯಿಸಲು ತನ್ನ ಚಾಲಕ-ಪಾಲುದಾರರಿಗೆ ಸಹಾಯ ಮಾಡಲು ಉಬರ್ (Uber Price) ಟ್ರಿಪ್ ದರವನ್ನು ಹೆಚ್ಚಿಸಿದೆ.

ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಕೇಂದ್ರ ಕಾರ್ಯಾಚರಣೆಯ ಮುಖ್ಯಸ್ಥ ನಿತೀಶ್ ಭೂಷಣ್ ಈ ಬಗ್ಗೆ ಹೇಳಿಕೆ ನೀಡಿದ್ದು, ನಮ್ಮ ಕ್ಯಾಬ್​ಗಳ ಚಾಲಕರು ಇಂಧನದ ಬೆಲೆಗಳ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಅವರ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟು, ಉಬರ್ ರೈಡ್​ನ ಬೆಲೆ ಏರಿಕೆ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ನಾವು ಬೆಂಗಳೂರಿನಲ್ಲಿ ಉಬರ್ ದರವನ್ನು 10% ಹೆಚ್ಚಿಸಿದ್ದೇವೆ. ಮುಂಬರುವ ವಾರಗಳಲ್ಲಿ ನಾವು ಇಂಧನ ಬೆಲೆ ಚಲನೆಯನ್ನು ಟ್ರ್ಯಾಕ್ ಮಾಡುವುದನ್ನು ಮುಂದುವರಿಸುತ್ತೇವೆ. ಅಗತ್ಯವಿದ್ದರೆ ಮುಂದೆ ಮತ್ತೆ ಬೆಲೆಯೇರಿಕೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಉಬರ್ ಬೆನ್ನಲ್ಲೇ ಓಲಾ ಕೂಡ ತನ್ನ ಪ್ರಯಾಣದ ದರಗಳನ್ನು ಪರಿಷ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಓಲಾದಿಂದ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರೂ. ತಲುಪಿದೆ. ಡೀಸೆಲ್ ದರ ಲೀಟರ್‌ಗೆ 95 ರೂ. ದಾಟುವ ಸನ್ನಾಹದಲ್ಲಿದೆ. ಸಾರಿಗೆ ಇಲಾಖೆಯ ದರ ರಚನೆಯ ಪ್ರಕಾರ, ಪ್ರಯಾಣಿಕರು ಮೊದಲ 4 ಕಿಮೀಗೆ ಸಣ್ಣ ಕ್ಯಾಬ್‌ಗಳಿಗೆ ಕನಿಷ್ಠ 75 ರೂ ಮತ್ತು ಐಷಾರಾಮಿ ಟ್ಯಾಕ್ಸಿಗಳಿಗೆ 150 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: GST: ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಅಮೆರಿಕದಲ್ಲಿ ಉಬರ್​ ಚಾಲಕನಾಗಿರುವ ಅಫ್ಘಾನ್ ಮಾಜಿ ಹಣಕಾಸು ಸಚಿವ; ಜೀವನೋಪಾಯಕ್ಕಾಗಿ ಈ ಕೆಲಸ

Published On - 1:58 pm, Thu, 21 April 22

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ