AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ಹಾಸ್ಟೆಲ್​ಗಳು ಸಹ 15 ದಿನಗಳ ಕಾಲ ಬಂದ್ ಆಗಲಿವೆ. ಹಾಸ್ಟೆಲ್​ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ. ಬಾಕಿ ಉಳಿದ ವಿಷಯಗಳನ್ನು ವರ್ಚುವಲ್ ಮೂಲಕ ಪಾಠ ಮಾಡುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಆದರೆ ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ

ಕೊರೊನಾ ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ
ಬೆಂಗಳೂರು ವಿಶ್ವವಿದ್ಯಾಲಯ
guruganesh bhat
| Updated By: Skanda|

Updated on: Apr 06, 2021 | 11:10 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಹೆಚ್ಚಾದ ಕಾರಣ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ವಿವಿ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಜ್ಯೋತಿ ಆದೇಶಿಸಿದ್ದಾರೆ. ಈ ಮೂಲಕ ಏಪ್ರಿಲ್ 20 ರವರೆಗೂ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ನೀಡಿದಂತಾಗಿದೆ.

ಅಷ್ಟೇ ಅಲ್ಲದೇ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್​ಗಳು ಸಹ 15 ದಿನಗಳ ಕಾಲ ಬಂದ್ ಆಗಲಿವೆ. ಹಾಸ್ಟೆಲ್​ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ. ಬಾಕಿ ಉಳಿದ ವಿಷಯಗಳನ್ನು ಆನ್​ಲೈನ್​ ಮೂಲಕ ಪಾಠ ಮಾಡುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ಆಫ್​ಲೈನ್​ನಲ್ಲೇ ನಡೆಯಲಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಯ ಒಟ್ಟು 20 ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್​ಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಟಿವಿ9ಗೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕೆ.ಜ್ಯೋತಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಹೆಚ್ಚಿದ ಸೋಂಕು ಬೆಂಗಳೂರಿನಲ್ಲಿ ಸೋಮವಾರ ( ಏಪ್ರಿಲ್ 5)  ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ 3728 ಸೋಂಕು ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಈವರೆಗೆ 4667 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 30,782 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ದಿನೇದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಒಟ್ಟು 198 ವಾರ್ಡ್​ಗಳ ಪೈಕಿ 150 ವಾರ್ಡ್​ಗಳಲ್ಲಿ ತಲಾ 50 ಸಕ್ರಿಯ ಕೇಸ್​ಗಳಿರಬಹುದು ಎಂದು ಶಂಕಿಸಲಾಗಿದೆ. ಉಳಿದ 48 ವಾರ್ಡ್​ಗಳಲ್ಲಿ 50ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ( ಏಪ್ರಿಲ್ 5)  ಹೊಸದಾಗಿ 5279 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೆ (10.20 ಲಕ್ಷ) ಏರಿಕೆಯಾದಂತೆ ಆಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,657 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 9,65,275 (9.65 ಲಕ್ಷ) ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 42,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Coronavirus India Update: ಕಳೆದ 24 ಗಂಟೆಗಳಲ್ಲಿ 96,517 ಕೊವಿಡ್ ಪ್ರಕರಣ ಪತ್ತೆ, 445 ಸಾವು

Covid-19 India Update: ಭಾರತದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು, ಗುರುವಾರ ಮುಖ್ಯಮಂತ್ರಿಗಳೊಂದಿಗೆ ನರೇಂದ್ರ ಮೋದಿ ಸಭೆ

(Bengaluru University announced 15 days holiday for all UG and PG colleges due to fast spreading of Covid 19)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ