ಬೆಂಗಳೂರು ವಿವಿಯಿಂದೊಂದು ವಿನೂತನ ಪ್ರಯೋಗ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಲ್ಯಾಂಗ್ವೇಜ್ ಲ್ಯಾಬ್

ಇತ್ತೀಚಿನ ಕಾಂಪಿಟೇಟಿವ್ ಜಗತ್ತಿನಲ್ಲಿ, ಉದ್ಯೋಗ ಬೇಕು ಅಂದ್ರೆ ರೆಸ್ಯೂಮ್‌ನಲ್ಲಿ ಸ್ಕಿಲ್ಸ್ ಜೊತೆಗೆ ಮುಖ್ಯವಾಗಿ ಕೇಳೊದು, ಇಂಗ್ಲೀಷ್ ಬರುತ್ತಾ ಅಂತ, ಆದರೆ ಅನೇಕರಿಗೆ ಸ್ಕಿಲ್ ಇರುತ್ತೆ, ಆದ್ರೆ ಭಾಷೆಯ ಸಮಸ್ಯೆಯಿಂದ ಅದೆಷ್ಟೋ ಅವಕಾಶಗಳನ್ನ ಕಳೆದುಕೊಂಡಿರುತ್ತಾರೆ. ಇನ್ಮುಂದೆ ಯಾರಿಗೂ ಕೂಡಾ ಇಂತಹ ಅವಕಾಶ ವಂಚನೆಯಾಗಬಾರದು ಎಂದು ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಲ್ಯಾಂಗ್ವೇಜ್ ಸ್ಕಿಲ್ ಕಲಿಸೋದಕ್ಕೆ ಬೆಂಗಳೂರು ವಿವಿ ಮುಂದಾಗಿದೆ.

ಬೆಂಗಳೂರು ವಿವಿಯಿಂದೊಂದು ವಿನೂತನ ಪ್ರಯೋಗ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಲ್ಯಾಂಗ್ವೇಜ್ ಲ್ಯಾಬ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jun 20, 2024 | 9:33 AM

ಬೆಂಗಳೂರು, ಜೂನ್.20: ಬೆಂಗಳೂರು‌ ವಿಶ್ವವಿದ್ಯಾಲಯಕ್ಕೆ (Bangalore University) ರಾಜ್ಯದ ಅನೇಕ ಗ್ರಾಮೀಣ ಭಾಗಗಳಿಂದ ವಿದ್ಯಾರ್ಥಿಗಳು ಓದುವುದಕ್ಕೆ ಬರುತ್ತಾರೆ. ಬಂದವರು ವಿದ್ಯಾಭ್ಯಾಸದಲ್ಲೇನೋ ಮುಂದೆ ಇರ್ತಾರೆ, ಆದರೆ ವಿದ್ಯಾಭ್ಯಾಸ ಮುಗಿಸಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ, ಭಾಷೆಯ ಸಮಸ್ಯೆ ಎದುರಾಗುತ್ತೆ. ಈಗಂತೂ ಎಲ್ಲಾ ಕ್ಷೇತ್ರದಲ್ಲಿ ಇಂಗ್ಲಿಷ್ ಅಂತೂ ಬೇಕೇ ಬೇಕು (Spoken English). ಹೀಗಿರುವಾಗ ಕಮ್ಯುನಿಕೇಷನ್ ಸಮಸ್ಯೆಯಿಂದ ಕೆಲಸದಿಂದ ಅದೆಷ್ಟೋ ಜನರು ವಂಚಿತರಾಗ್ತಾರೆ. ಹೀಗಾಗಿಯೇ ಇಂತಹ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆಯಲ್ಲಿ ಬಹಳ ಸುಲಭವಾಗಿ ಮಾತನಾಡುವಂತೆ ಸ್ಪೆಷಲ್ ಟ್ರೈನಿಂಗ್‌ ಲ್ಯಾಬ್ (Language Training Lab) ಶುರು ಮಾಡಲಾಗಿದೆ.

ವಿವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಂಗ್ವೇಜ್ ಲ್ಯಾಬ್ ಶುರು ಮಾಡಿ ಭಾಷಾ ಶಾಸ್ತ್ರ ಹೇಳಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಲಕ್ಷಾಂತರ ಹುದ್ದೆಗಳಿವೆ. ಐಟಿ ಬಿಟಿ ಸೇರಿದಂತೆ ನಾನಾ ಕಂಪನಿಗಳಲ್ಲಿ ಸಾಕಷ್ಟು ಅವಕಾಶಗಳಿದ್ರೂ ಉತ್ತರಭಾರತದವರಿಗೆ ಸಿಕ್ಕಷ್ಟು ಅವಕಾಶಗಳು ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಹೊಸ ಕೌಶಲ್ಯದ ಮೊರೆ ಹೋಗಿದೆ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಲ್ಯಾಂಗ್ವೇಜ್ ಲ್ಯಾಬ್ ಶುರುಮಾಡಿದೆ.

ಹೈಟೆಕ್ ತಂತ್ರಜ್ಞಾನದ ಸಹಾಯದೊಂದಿಗೆ ಇಂಗ್ಲಿಷ್ ಲ್ಯಾಂಗ್ವೇಜ್ ಲ್ಯಾಬ್ ಶುರು ಮಾಡಿದ್ದು ಭಾಷಾ ಶಾಸ್ತ್ರದ ಕೋರ್ಸ್ ಹೇಳಿ ಕೊಡಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಶಾಸ್ತ್ರ ಹೇಳಿಕೊಡುವ ಮೂಲಕ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಮಾಡಿ ಉತ್ತಮ ಕೆಲಸ ಸಿಗುವ ಕಡೆ ಕಾರ್ಯ ನಿರ್ವಹಿಸಲು ವಿವಿ ಮುಂದಾಗಿದೆ.‌

ಇದನ್ನೂ ಓದಿ: ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ

ಈ ಕೌಶಲ್ಯ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್​ ಗ್ರಾಮರ್‌ನಿಂದಲೂ ಹೇಳಿಕೊಡಲಾಗುವುದು. ಬೇರೆಯವರೊಂದಿಗೆ ಹೇಗೆ ಇಂಗ್ಲಿಷ್ ನಲ್ಲಿ ಮಾತನಾಡಬೇಕು. ಇಂಟರ್‌ವ್ಯೂಗಳಲ್ಲಿ ಹೇಗೆ ಉತ್ತರಿಸಬೇಕು. ಹೀಗೆ ಹಲವಾರು ವಿಚಾರಗಳ ಬಗ್ಗೆ ಕಲಿಸಿಕೊಡಲಾಗುವುದು. 4 ಬ್ಯಾಚ್‌ನಲ್ಲಿ ತಲಾ 30 ವಿದ್ಯಾರ್ಥಿಗಳಿಗೆ ಇಲ್ಲಿ ಕ್ಲಾಸ್ ನಡೆಸಲಾಗುತ್ತದೆ. ಈ ಕೋರ್ಸ್ ಮುಗಿದ ಬಳಿಕ, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಸರ್ಟಿಫಿಕೇಟ್ ಕೂಡಾ ನೀಡಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷೆಯನ್ನ ಉತ್ತಮ ಪಡಿಸಲು ವಿವಿ ಹೊಸ ಪ್ರಯತ್ನ ಮಾಡುತ್ತಿದೆ.

ಇನ್ನು ಈ ಇಂಗ್ಲಿಷ್ ಲ್ಯಾಬ್‌ನಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಭಾಷಾ ಸ್ಕಿಲ್‌ನ್ನ ಉತ್ತಮವಾಗಿಸಿಕೊಳ್ಳುವ ಮೂಲಕ, ವಿವಿಯ ಈ ಯೋಜನೆಯ ಸದುಪಯೋಗ ಪಡೆದುಕೊಳ್ತಿದ್ದಾರೆ.

ಒಟ್ನಲ್ಲಿ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ಜೀವನದಲ್ಲೇ ಇವರಿಗೆ ಭಾಷೆ ಹಾಗೂ ಕೌಶಲ್ಯಗಳ ಕುರಿತು ತರಬೇತಿ ನೀಡ್ತಿರೋದು, ಒಳ್ಳೇ ಕಾರ್ಯವಾಗಿದ್ದು, ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡೆದುಕೊಂಡ್ರೆ ಉತ್ತಮ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು