AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ಮಹಾಮಾರಿ ಕೊರೊನಾ ವಿರುದ್ಧ ಹೋರಾಟಲು ಬಳಸಿದ ಲಸಿಕಾ ಅಸ್ತ್ರ ಸದ್ಯ ಮುಂದುವರೆದಿದೆ. ಬೆಂಗಳೂರು ನಗರ ಶೇ.100ರಷ್ಟು ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸಿದೆ. ಆದ್ರೆ ಇದರ ನಡುವೆ ರಾಜ್ಯದಲ್ಲಿ ಇಂದು ಮತ್ತೆ 5 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on:Dec 27, 2021 | 10:10 AM

Share

ಬೆಂಗಳೂರು: ಬೆಂಗಳೂರು ನಗರದಲ್ಲಿ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಂಡಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಎರಡು ಡೋಸ್ ಪೂರ್ಣಗೊಂಡ ಮೊದಲ ಜಿಲ್ಲೆ ಬೆಂಗಳೂರು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೊರೊನಾ ಹೋರಾಟದಲ್ಲಿ ರಾಜ್ಯ ಮತ್ತೊಂದು ಸಾಧನೆ ಮಾಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 100% ಸೆಕೆಂಡ್ ಡೋಸ್ ಲಸಿಕೆ ಹಂಚಿಕೆಯಾಗಿದೆ. ಕರ್ನಾಟಕದಲ್ಲೇ 2ನೇ ಡೋಸ್ ಶೇ.100ರಷ್ಟು ಹಂಚಿದ ಮೊದಲ ಜಿಲ್ಲೆ ಬೆಂಗಳೂರು ನಗರ ಜಿಲ್ಲೆ ಎಂಬ ಹೆಗ್ಗಲಿಕೆಗೆ ಪಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಚೇರಿಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆದಿದೆ. 5 ತಾಲೂಕು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆ, 7 ಟೌನ್ ಮುನ್ಸಿಪಲ್ ಕೌನ್ಸಿಲ್, 86 ಗ್ರಾಮ ಪಂಚಾಯಿತಿ, 2 ಸಿಟಿ ಮುನ್ಸಿಪಲ್ ಕೌನ್ಸಿಲ್, 864 ಗ್ರಾಮಗಳನ್ನ ಹೊಂದಿದೆ. ಬೆಂಗಳೂರು ನಗರ ಜಿಲ್ಲೆಯ ಒಟ್ಟು ಜನಸಂಖ್ಯೆ 15 ಲಕ್ಷ ಇದ್ದು ಸದ್ಯ ಬೆಂಗಳೂರು ನಗರ ಜಿಲ್ಲೆಯಲ್ಲಿ 100% ಸೆಕೆಂಡ್ ಡೋಸ್ ಲಸಿಕೆ ಹಂಚಿಕೆಯಾಗಿದೆ.

ಲಸಿಕೆ ಗುರಿ ತಲುಪಿಸಲು ನಿಯೋಜಿತ ಸಿಬ್ಬಂದಿ ವಿವರ ನುರಿತ ವೈದ್ಯರು 40, ವೈದ್ಯರು 39, ಆರೋಗ್ಯ ಸಿಬ್ಬಂದಿ 300, 832 ಆಶಾ ಕಾರ್ಯಕರ್ತೆಯರು ಲಸಿಕಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಜಿಲ್ಲಾವಾರು ಕೊವಿಡ್ ಲಸಿಕೆ ನೀಡಿಕೆ ವಿವರ ಬೆಂಗಳೂರು ನಗರ -ಶೇಕಡಾ 100 ಕೊಡಗು -ಶೇಕಡಾ 90 ಮಂಡ್ಯ -ಶೇಕಡಾ 84 ರಾಮನಗರ-ಶೇಕಡಾ 83 ಉಡುಪಿ -ಶೇಕಡಾ 82 ಬಾಗಲಕೋಟೆ -ಶೇಕಡಾ 81 ಉತ್ತರ ಕರ್ನಾಟಕ, ಹಾಸನ, ಮೈಸೂರು ತಲಾ ಶೇ.79 ಕೋಲಾರ -ಶೇ.78 ಬೆಂಗಳೂರು ಗ್ರಾಮಾಂತರ -ಶೇ.77 ವಿಜಯಪುರ -ಶೇಕಡಾ 77 ಬೆಳಗಾವಿ -ಶೇಕಡಾ76 ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ ತಲಾ ಶೇಕಡಾ 76 ದಾವಣಗೆರೆ -ಶೇಕಡಾ 75 ಬಿಬಿಎಂಪಿ ವ್ಯಾಪ್ತಿ -ಶೇ.74 ಧಾರವಾಡ, ಚಿತ್ರದುರ್ಗ, ಬೀದರ್, ಗದಗ ತಲಾ ಶೇ.73 ಚಾಮರಾಜನಗರ -ಶೇ.73 ತುಮಕೂರು, ಚಿಕ್ಕಮಗಳೂರು -ಶೇ.72 ಶಿವಮೊಗ್ಗ, ಯಾದಗಿರಿ ತಲಾ ಶೇಕಡಾ 70 ಕೊಪ್ಪಳ -ಶೇ.69 ಬಳ್ಳಾರಿ, ಹಾವೇರಿ ತಲಾ ಶೇಕಡಾ 68 ರಾಯಚೂರು -ಶೇ.64 ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 60ರಷ್ಟು ಲಸಿಕೆ ನೀಡಲಾಗಿದೆ

ಮಹಾಮಾರಿ ಕೊರೊನಾ ವಿರುದ್ಧ ಹೋರಾಟಲು ಬಳಸಿದ ಲಸಿಕಾ ಅಸ್ತ್ರ ಸದ್ಯ ಮುಂದುವರೆದಿದೆ. ಬೆಂಗಳೂರು ನಗರ ಶೇ.100ರಷ್ಟು ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸಿದೆ. ಆದ್ರೆ ಇದರ ನಡುವೆ ರಾಜ್ಯದಲ್ಲಿ ಇಂದು ಮತ್ತೆ 5 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ ಬೇರೆ ಜಿಲ್ಲೆಯಲ್ಲಿ ಇಂದು 5 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ. ಒಮಿಕ್ರಾನ್ ಕೇಸ್ ಬಗ್ಗೆ ಸಂಜೆ ವೇಳೆಗೆ ಘೋಷಣೆ ಸಾಧ್ಯತೆ ಇದೆ.

ಈ ಬಗ್ಗೆ ಸಂಜೆ ಒಳಗೆ ಅಧಿಕೃತ ಪಡಿಸುವುದಾಗಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಒಮಿಕ್ರಾನ್ ಶಂಕೆ ಅಂತಾ ಹೇಳಲಾಗ್ತಿದೆ. ಲ್ಯಾಬ್ ರಿಪೋರ್ಟ್ ತರಿಸಿಕೊಂಡು ಖಚಿತಪಡಿಸೋದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ ಸಂಬಂಧ ಸ್ವಿಡ್ಜರ್ಲೆಂಡ್ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಲಕಿಗೆ ಯಾವುದೇ ರೀತಿಯ ರೋಗ ಲಕ್ಷಣಗಳಿರಲಿಲ್ಲ. ಸದ್ಯ ಬಾಲಕಿಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸೂಸೆಪಾಳ್ಯ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಯೇಸು ಪ್ರತಿಮೆ ಭಗ್ನ, ದೂರು

Published On - 10:54 am, Thu, 23 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ