AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಲುಷಿತ ನೀರು ಸೇವಿಸಿ 60 ಜನರಿಗೆ ಕೆಮ್ಮು, ನೆಗಡಿ, ಭೇದಿ

ಕಳೆದ 15 ದಿನಗಳಿಂದ ಈ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಲುಷಿತ ನೀರು ಸೇವಿಸಿ 60 ಜನರಿಗೆ ಕೆಮ್ಮು, ನೆಗಡಿ, ಭೇದಿ
ಜಲ ಮಾಲಿನ್ಯ
Follow us
TV9 Web
| Updated By: guruganesh bhat

Updated on:Sep 13, 2021 | 4:19 PM

ಬೆಂಗಳೂರು: ಕಲುಷಿತ ನೀರು ಸೇವಿಸಿ 60 ಜನರಿಗೆ ಆರೋಗ್ಯ ಸಮಸ್ಯೆ ಕಂಡುಬಂದ ಘಟನೆ ಬೆಂಗಳೂರಿನ ಉತ್ತರಹಳ್ಳಿ ವಾರ್ಡ್‌ನಲ್ಲಿ ವರದಿಯಾಗಿದೆ. ಈಪೈಕಿ ಹಲವರು ಕೆಮ್ಮು, ನೆಗಡಿ, ಭೇದಿಯಿಂದ ನರಳುತ್ತಿದ್ದಾರೆ. ಬೋರ್‌ವೆಲ್‌ಗೆ ಚರಂಡಿ ನೀರು ಮಿಶ್ರಣವಾದ ಕಾರಣ ನೀರು ಕಲುಷಿತಗೊಂಡಿದೆ. ಮತ್ತು ಆ ನೀರನ್ನು ಸೇವಿಸಿದ ಜನರಿಗೆ ಅನಾರೋಗ್ಯ ಉಂಟಾಗಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಿಂದ ಈ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಟಿವಿ9 ಪ್ರತಿನಿಧಿ ಸ್ಥಳಕ್ಕೆ ಭೇಟಿ ನೀಡಿ ವಿವರ ಸಂಗ್ರಹಿಸಿದೆ. ತಕ್ಷಣವೇ ಎಚ್ಚೆತ್ತ ಸ್ಥಳೀಯ ಕಾರ್ಪೋರೇಟರ್ ಹಾಗೂ ಶಾಸಕ ಶಾಸಕ ಎಂ ಕೃಷ್ಣಪ್ಪ ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಶುಭಸುದ್ದಿ; ನವೆಂಬರ್​ ಒಳಗೆ ಠೇವಣಿ ಮೇಲಿನ ವಿಮಾ ಹಣ ಗ್ರಾಹಕರಿಗೆ ಲಭ್ಯ ಆರ್ಥಿಕ ಅವ್ಯವಹಾರ, ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಬೆಂಗಳೂರಿನ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಟ್ಟಿರುವ ಗ್ರಾಹಕರ ಪೈಕಿ ಅರ್ಹ ಗ್ರಾಹಕರು ನವಂಬರ್ ಅಂತ್ಯದೊಳಗೆ ಠೇವಣಿ ಮೇಲಿನ ವಿಮಾ ಮೊತ್ತ ಸಿಗಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಡಿಫಾಸಿಟ್‌ ಇನ್ಸೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್ ಕಾಯಿದೆಯಡಿ 5 ಲಕ್ಷ ರೂಪಾಯಿವರೆಗೂ ಹಣ ಪಡೆಯಲು ಅವಕಾಶ ಸಿಗಲಿದೆ. ಇದೇ ರೀತಿ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟಿವ್ ಬ್ಯಾಂಕ್‌ನ ಅರ್ಹ ಗ್ರಾಹಕರಿಗೂ ತಮ್ಮ ಠೇವಣಿ ಮೇಲಿನ ವಿಮಾ ಹಣ ಸಿಗಲಿದೆ.

ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದಿಂದ ತತ್ತರಿಸಿದೆ. ಬ್ಯಾಂಕ್‌ನಲ್ಲಿ ಹೆಚ್ಚಿನ ಬಡ್ಡಿ ಹಣದಾಸೆಗೆ ಬಿದ್ದು ಲಕ್ಷಾಂತರ ರೂಪಾಯಿ ಹಣ ಠೇವಣಿ ಇಟ್ಟ ಗ್ರಾಹಕರಿಗೆ ತಮ್ಮ ಹಣವೂ ವಾಪಸ್ ಬರುತ್ತಿಲ್ಲ. 2019ರ ಜನವರಿ 10ರಿಂದ ಬ್ಯಾಂಕ್‌ ನ ಮೇಲೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯಿದೆ 1949ರ ಸೆಕ್ಷನ್ 35(ಎ) ಅಡಿ ನಿರ್ಬಂಧ ವಿಧಿಸಲಾಗಿದೆ. ಪೂರ್ಣ ಹಣವನ್ನು ಗ್ರಾಹಕರಿಗೆ ನೀಡಬಾರದೆಂದು ಆರ್‌ಬಿಐ ನಿರ್ಬಂಧ ವಿಧಿಸಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಟ್ಟ ಗ್ರಾಹಕರಿಗೆ ತಮ್ಮ ಹಣವನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಇದೇ ರೀತಿ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟಿವ್ ಬ್ಯಾಂಕ್ ನ ಗ್ರಾಹಕರ ಸ್ಥಿತಿಯೂ ಇದೆ. ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಅಪರೇಟೀವ್ ಬ್ಯಾಂಕ್ ಗ್ರಾಹಕರಿಗೂ ತಮ್ಮ ಪೂರ್ತಿ ಠೇವಣಿ ಹಣವನ್ನು ವಾಪಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಪಿಎಂಸಿ ಬ್ಯಾಂಕ್ ಅನ್ನು ಈ ವರ್ಷದ ಡಿಸೆಂಬರ್ 31ರವರೆಗೆ ಮೋರಾಟೋರಿಯಂನಲ್ಲಿ ಇಡಲಾಗಿದೆ.

ಇದನ್ನೂ ಓದಿ: 

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ 800-ವರ್ಷ ಹಳೆಯ ಕೆಂಗಲ್ ಆಂಜನೇಯ ಗುಡಿಗೆ ಭೇಟಿ ನೀಡಿದ್ದೀರಾ?

ಬೆಂಗಳೂರು: ಒಂದೇ ರಾತ್ರಿ 30ಕ್ಕೂ ಹೆಚ್ಚು ಬೈಕ್​ಗಳ ಬ್ಯಾಟರಿ ಕದ್ದ ಕಳ್ಳರು; ಸಿಸಿಟಿವಿ ಇದ್ದರೂ ಮನೆ ಮುಂದೆ ವಾಹನ ನಿಲ್ಲಿಸುವಾಗ ಎಚ್ಚರ

(Bengaluru Uttarahalli Ward 60 people have health problems by use polluted water)

Published On - 4:16 pm, Mon, 13 September 21

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್