AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ದರ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು

ಬೆಂಗಳೂರು ತರಕಾರಿ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಕಳೆದ 15 ದಿನಗಳಲ್ಲಿ ತರಕಾರಿ ಬೆಲೆಗಳು ದುಪ್ಪಟ್ಟಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಬೀನ್ಸ್ ದರ ಕೆಜಿಗೆ 160 ರೂಪಾಯಿಗೆ ಏರಿಕೆಯಾಗಿದೆ. ಬಿಸಿಲು ಮತ್ತು ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿರುವುದು ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ದರ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on:May 04, 2026 | 9:04 AM

Share

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ.

ಬೀನ್ಸ್​ಗೆ ಬಂಗಾರದ ಬೆಲೆ

ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ ಕೇಳಿದರೆ ಗ್ರಾಹಕರು ಬೆಚ್ಚಿಬೀಳುತ್ತಿದ್ದಾರೆ. ಎರಡು ವಾರಗಳ ಹಿಂದೆ ಕೆಜಿಗೆ 60 ರೂಪಾಯಿ ಇದ್ದ ಬೀನ್ಸ್ ಬೆಲೆ ಈಗ 160 ರೂಪಾಯಿಗೆ ತಲುಪಿದೆ. ಈ ಹಿಂದೆ ಚೀಲ ತುಂಬಾ ತರಕಾರಿ ತರುತ್ತಿದ್ದ ಜನ, ಈಗ 500 ರೂಪಾಯಿ ನೀಡಿದರೂ ಎರಡು ಬ್ಯಾಗ್ ತರಕಾರಿ ತುಂಬಿಸಲು ಪರದಾಡುವಂತಾಗಿದೆ.

Bengaluru Vegetable Price Hike

ತರಕಾರಿ ಬೆಲೆ ಏರಿಕೆಗೆ ಕಾರಣಗಳೇನು?

ರಾಜ್ಯದಲ್ಲಿ ತೀವ್ರವಾಗಿ ಸುಡುತ್ತಿರುವ ಬಿಸಿಲಿನ ತಾಪಮಾನ ಮತ್ತು ಅಕಾಲಿಕವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತರಕಾರಿ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರೊಂದಿಗೆ ಸಾಲು ಸಾಲು ಶುಭ ಸಮಾರಂಭಗಳು ಮತ್ತು ಫಂಕ್ಷನ್‌ಗಳು ಇರುವುದರಿಂದ ತರಕಾರಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಪೂರೈಕೆ ಕಡಿಮೆಯಾಗಿ ಬೇಡಿಕೆ ಹೆಚ್ಚಾದ ಕಾರಣ ಬೆಲೆಗಳು ಏರಿಕೆಯಾಗುತ್ತಿವೆ.

ರಾಜ್ಯದ ಪ್ರಮುಖ ತರಕಾರಿ ಬೆಳೆಯುವ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಲ್ಲಿ ಈ ಬಾರಿ ತೀವ್ರವಾದ ಬಿಸಿಲು ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಅತಿಯಾದ ಶಾಖದಿಂದಾಗಿ ಹೂವುಗಳು ಉದುರಿ ಇಳುವರಿ ಕಡಿಮೆಯಾಗಿದ್ದರೆ, ಇತ್ತೀಚೆಗೆ ಸುರಿದ ಗುಡುಗು ಸಹಿತ ಮಳೆಯಿಂದ ತರಕಾರಿ ಬೆಳೆ ನಾಶವಾಗಿದೆ. ಇದರಿಂದ ಮಾರುಕಟ್ಟೆಗೆ ಬರುವ ತರಕಾರಿಗಳ ಪ್ರಮಾಣ ಶೇ 30 ರಿಂದ 40ರಷ್ಟು ಕುಸಿದಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ.

ಕೇವಲ ಹವಾಮಾನವಷ್ಟೇ ಅಲ್ಲದೆ, ಪ್ರಸ್ತುತ ಮದುವೆ ಮತ್ತು ಸಾಲು ಸಾಲು ಹಬ್ಬಗಳ ಸೀಸನ್ ಇರುವುದರಿಂದ ತರಕಾರಿಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಸ್ಥಿರತೆಯ ನಡುವೆಯೂ, ಹೊರ ರಾಜ್ಯಗಳಿಂದ (ಆಂಧ್ರಪ್ರದೇಶ ಮತ್ತು ತಮಿಳುನಾಡು) ಬರುವ ತರಕಾರಿಗಳ ಸಾರಿಗೆ ವೆಚ್ಚವು ದರ ಏರಿಕೆಗೆ ಮತ್ತೊಂದು ಕಾರಣವಾಗಿದೆ.

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ

ಒಂದೆಡೆ ಎಲ್ಪಿಜಿ ದರ ಭಾರಿ ಏರಿಕೆಯಾಗಿದ್ದು, ಹೋಟೆಲ್ ಉದ್ಯಮ ಈಗಾಲೇ ಸಂಕಷ್ಟಕ್ಕೆ ಸಿಲುಕಿದೆ. ಅದರೊಂದಿಗೆ ಇದೀಗ ತರಕಾರಿ ಬೆಲೆಯೂ ಗಗನ್ಕೇರಿದ್ದು ಮತ್ತಷ್ಟು ಹೊಡೆತ ನೀಡಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಈ ಬೆಲೆಗಳಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವರದಿ: ಅರುಣ್​ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 am, Mon, 4 May 26

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​