AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Karnataka Vegetable Market Price: ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Oct 10, 2021 | 2:47 PM

ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70ಕ್ಕೆ ಏರಿಕೆ ಬೆಂಡೇಕಾಯಿ 40 ರಿಂದ 60 ರೂ.ಗೆ ಏರಿಕೆ ಹೂಕೋಸು ಕೆಜಿ 30 ರಿಂದ 40ಕ್ಕೆ ಏರಿಕೆ ಬದನೆಕಾಯಿ 30 ರಿಂದ 40 ರೂ. ಏರಿಕೆ ಹಾಗಲಕಾಯಿ 40 ರಿಂದ 50 ರೂ.ಗೆ ಏರಿಕೆ

ಟೊಮೆಟೊ ಬೆಲೆಯಲ್ಲೂ ಏರಿಕೆ ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬೆಂಗಳೂರಿನ ಸುತ್ತಮುತ್ತಲಿನ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ.

ಮಹಾರಾಷ್ಟ್ರದಿಂದಲೂ ಈ ಬಾರಿ ನಗರಕ್ಕೆ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ. ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ. ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ 20 ರಿಂದ 22 ಕೆ.ಜಿ ತೂಕದ ಬಾಕ್ಸ್ ಗೆ ಬರೋಬ್ಬರಿ 1,200 ರೂ ಇದೆ. ಆನ್ ಲೈನ್ ಮೂಲಕ ಖರೀದಿ ಮಾಡುವವರಿಗೆ ಡಬಲ್ ಶಾಕ್. ವಿವಿಧ ಶಾಪಿಂಗ್ ಆಪ್ ಮೂಲಕ ಟೊಮೆಟೊ ಖರೀದಿಸುವವರಿಗೆ ಕೆ.ಜಿ 80 ರೂಗೆ ಸಿಗುತ್ತಿದೆ. ಎಪಿಎಂಸಿಗೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಚಿಂತಾಮಣಿ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಪ್ರಮಾಣ ಶೇ.40 ರಷ್ಟು ಇಳಿಮುಖವಾಗಿದೆ.

ಇದನ್ನೂ ಓದಿ:

Titan Co Limited: ಮಾರುಕಟ್ಟೆ ಬಂಡವಾಳ 2 ಲಕ್ಷ ಕೋಟಿ ರೂಪಾಯಿ ದಾಟಿದ ಟಾಟಾ ಸಮೂಹದ ಮತ್ತೊಂದು ಕಂಪೆನಿ

Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್?

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ