AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Karnataka Vegetable Market Price: ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 2:47 PM

Share

ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70ಕ್ಕೆ ಏರಿಕೆ ಬೆಂಡೇಕಾಯಿ 40 ರಿಂದ 60 ರೂ.ಗೆ ಏರಿಕೆ ಹೂಕೋಸು ಕೆಜಿ 30 ರಿಂದ 40ಕ್ಕೆ ಏರಿಕೆ ಬದನೆಕಾಯಿ 30 ರಿಂದ 40 ರೂ. ಏರಿಕೆ ಹಾಗಲಕಾಯಿ 40 ರಿಂದ 50 ರೂ.ಗೆ ಏರಿಕೆ

ಟೊಮೆಟೊ ಬೆಲೆಯಲ್ಲೂ ಏರಿಕೆ ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬೆಂಗಳೂರಿನ ಸುತ್ತಮುತ್ತಲಿನ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ.

ಮಹಾರಾಷ್ಟ್ರದಿಂದಲೂ ಈ ಬಾರಿ ನಗರಕ್ಕೆ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ. ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ. ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ 20 ರಿಂದ 22 ಕೆ.ಜಿ ತೂಕದ ಬಾಕ್ಸ್ ಗೆ ಬರೋಬ್ಬರಿ 1,200 ರೂ ಇದೆ. ಆನ್ ಲೈನ್ ಮೂಲಕ ಖರೀದಿ ಮಾಡುವವರಿಗೆ ಡಬಲ್ ಶಾಕ್. ವಿವಿಧ ಶಾಪಿಂಗ್ ಆಪ್ ಮೂಲಕ ಟೊಮೆಟೊ ಖರೀದಿಸುವವರಿಗೆ ಕೆ.ಜಿ 80 ರೂಗೆ ಸಿಗುತ್ತಿದೆ. ಎಪಿಎಂಸಿಗೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಚಿಂತಾಮಣಿ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಪ್ರಮಾಣ ಶೇ.40 ರಷ್ಟು ಇಳಿಮುಖವಾಗಿದೆ.

ಇದನ್ನೂ ಓದಿ:

Titan Co Limited: ಮಾರುಕಟ್ಟೆ ಬಂಡವಾಳ 2 ಲಕ್ಷ ಕೋಟಿ ರೂಪಾಯಿ ದಾಟಿದ ಟಾಟಾ ಸಮೂಹದ ಮತ್ತೊಂದು ಕಂಪೆನಿ

Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್?

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ