AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Karnataka Vegetable Market Price: ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 2:47 PM

Share

ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70ಕ್ಕೆ ಏರಿಕೆ ಬೆಂಡೇಕಾಯಿ 40 ರಿಂದ 60 ರೂ.ಗೆ ಏರಿಕೆ ಹೂಕೋಸು ಕೆಜಿ 30 ರಿಂದ 40ಕ್ಕೆ ಏರಿಕೆ ಬದನೆಕಾಯಿ 30 ರಿಂದ 40 ರೂ. ಏರಿಕೆ ಹಾಗಲಕಾಯಿ 40 ರಿಂದ 50 ರೂ.ಗೆ ಏರಿಕೆ

ಟೊಮೆಟೊ ಬೆಲೆಯಲ್ಲೂ ಏರಿಕೆ ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬೆಂಗಳೂರಿನ ಸುತ್ತಮುತ್ತಲಿನ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ.

ಮಹಾರಾಷ್ಟ್ರದಿಂದಲೂ ಈ ಬಾರಿ ನಗರಕ್ಕೆ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ. ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ. ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ 20 ರಿಂದ 22 ಕೆ.ಜಿ ತೂಕದ ಬಾಕ್ಸ್ ಗೆ ಬರೋಬ್ಬರಿ 1,200 ರೂ ಇದೆ. ಆನ್ ಲೈನ್ ಮೂಲಕ ಖರೀದಿ ಮಾಡುವವರಿಗೆ ಡಬಲ್ ಶಾಕ್. ವಿವಿಧ ಶಾಪಿಂಗ್ ಆಪ್ ಮೂಲಕ ಟೊಮೆಟೊ ಖರೀದಿಸುವವರಿಗೆ ಕೆ.ಜಿ 80 ರೂಗೆ ಸಿಗುತ್ತಿದೆ. ಎಪಿಎಂಸಿಗೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಚಿಂತಾಮಣಿ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಪ್ರಮಾಣ ಶೇ.40 ರಷ್ಟು ಇಳಿಮುಖವಾಗಿದೆ.

ಇದನ್ನೂ ಓದಿ:

Titan Co Limited: ಮಾರುಕಟ್ಟೆ ಬಂಡವಾಳ 2 ಲಕ್ಷ ಕೋಟಿ ರೂಪಾಯಿ ದಾಟಿದ ಟಾಟಾ ಸಮೂಹದ ಮತ್ತೊಂದು ಕಂಪೆನಿ

Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್?

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?