AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Karnataka Vegetable Market Price: ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ.

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 2:47 PM

Share

ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70ಕ್ಕೆ ಏರಿಕೆ ಬೆಂಡೇಕಾಯಿ 40 ರಿಂದ 60 ರೂ.ಗೆ ಏರಿಕೆ ಹೂಕೋಸು ಕೆಜಿ 30 ರಿಂದ 40ಕ್ಕೆ ಏರಿಕೆ ಬದನೆಕಾಯಿ 30 ರಿಂದ 40 ರೂ. ಏರಿಕೆ ಹಾಗಲಕಾಯಿ 40 ರಿಂದ 50 ರೂ.ಗೆ ಏರಿಕೆ

ಟೊಮೆಟೊ ಬೆಲೆಯಲ್ಲೂ ಏರಿಕೆ ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬೆಂಗಳೂರಿನ ಸುತ್ತಮುತ್ತಲಿನ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ.

ಮಹಾರಾಷ್ಟ್ರದಿಂದಲೂ ಈ ಬಾರಿ ನಗರಕ್ಕೆ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ. ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ. ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ 20 ರಿಂದ 22 ಕೆ.ಜಿ ತೂಕದ ಬಾಕ್ಸ್ ಗೆ ಬರೋಬ್ಬರಿ 1,200 ರೂ ಇದೆ. ಆನ್ ಲೈನ್ ಮೂಲಕ ಖರೀದಿ ಮಾಡುವವರಿಗೆ ಡಬಲ್ ಶಾಕ್. ವಿವಿಧ ಶಾಪಿಂಗ್ ಆಪ್ ಮೂಲಕ ಟೊಮೆಟೊ ಖರೀದಿಸುವವರಿಗೆ ಕೆ.ಜಿ 80 ರೂಗೆ ಸಿಗುತ್ತಿದೆ. ಎಪಿಎಂಸಿಗೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಚಿಂತಾಮಣಿ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಪ್ರಮಾಣ ಶೇ.40 ರಷ್ಟು ಇಳಿಮುಖವಾಗಿದೆ.

ಇದನ್ನೂ ಓದಿ:

Titan Co Limited: ಮಾರುಕಟ್ಟೆ ಬಂಡವಾಳ 2 ಲಕ್ಷ ಕೋಟಿ ರೂಪಾಯಿ ದಾಟಿದ ಟಾಟಾ ಸಮೂಹದ ಮತ್ತೊಂದು ಕಂಪೆನಿ

Pandora Papers ಗಣ್ಯ ವ್ಯಕ್ತಿಗಳ ಹಣಕಾಸು ವ್ಯವಹಾರದ ರಹಸ್ಯ ದಾಖಲೆ ಸೋರಿಕೆ; ಏನಿದು ಪಂಡೋರಾ ಪೇಪರ್ಸ್?

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?